ಗದಗ prajakiran.com : ತನ್ನ ಸಹೋದರಿ ಜೊತೆಗೆ ಎಲ್ಲಂದರಲ್ಲಿ ಮಾತನಾಡುವುದು, ಭೇಟಿ ಮಾಡಿ ಅನುಚಿತವಾಗಿ ವರ್ತಿಸಬೇಡಿ ಅಂದಿದ್ದಕ್ಕೆ ಸಹೋದರರಿಬ್ಬರು ಆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ೨೩ ವರ್ಷದ ಮುಸ್ತಾಕ್ ಅಲಿ ನದಾಫ್ ಎಂಬ ಯುವಕನ ಕೊಲೆಯಾದ ದುರ್ದೈವಿಯಾಗಿದ್ದಾನೆ.
ಇತನಿಗೆ ದಾವಲ್ ಸಾಬ್ ಮಲ್ಲಾಡದ ಹಾಗೂ ಮಹ್ಮದ್ ಅಲಿ ಮಲ್ಲಾಡದ ಎಂಬ ಸಹೋದರರು ಒಟ್ಟಾಗಿ ಮುಸ್ತಾಕ್ ಅಲಿ ಜೊತೆ ಜಗಳವಾಡಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದ ವೇಳೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ.
ಗಾಯಗೊಂಡಿದ್ದ ಮುಸ್ತಾಕ್ ಅಲಿಯನ್ನು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮುಸ್ತಾಕ್ ಸಾವನ್ನಪ್ಪಿದ್ದಾನೆ.
ಸಹೋದರಿ ವಿಷಯದ ಜಗಳ ಚಾಕುವಿನಿಂದ ಇರಿತಕ್ಕೊಳಗಾಗಿ ಸಾವಿನೊಂದಿಗೆ ಅಂತ್ಯವಾಗಿದೆ. ಇನ್ನು ಕೊಲೆ ಮಾಡಿದ ಸಹೋದರ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಗದಗ ಜಿಲ್ಲೆ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.