ಧಾರವಾಡ prajakiran.com : ಹಾಡಹಗಲೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ.
ಧಾರವಾಡ ಹೊರವಲಯದ ನುಗ್ಗಿಕೇರಿ ಗ್ರಾಮದಲ್ಲಿ ಗುರುವಾರ ಈ ರ್ದುಘಟನೆ ನಡೆದಿದ್ದು, ಇದರಿಂದಾಗಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಹನುಮಂತಗೌಡ ಪಾಟೀಲ(28) ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ
ನೀಡಿ ಪರಿಶೀಲಿಸಿದರು. ಶ್ವಾನದಳದಿಂದ ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕೊಲೆಗೆ ಹನುಮಂತಗೌಡನಅನೈತಿಕ ಸಂಬಂಧವೇ ಕಾರಣವೆಂದು ಗೊತ್ತಾಗಿದ್ದು, ಕಣ್ಣಿಗೆ ಖಾರದಪುಡಿ ಎರಚಿ, ಕಾಲು ಕಟ್ಟಿ ಹಾಕಿ ಕುತ್ತಿಗೆಗೆ ಹಗ್ಗ ಬಿಗಿದು ಹತ್ಯೆ ಮಾಡಲಾಗಿದೆ ಎಂದು ಧಾರವಾಡ ಗ್ರಾಮೀಣ ಪೊಲೀಸ್ ಸಬ್ ಇನ್ಸಪೆಕ್ಟರ್ ಮಹೇಂದ್ರ ನಾಯಕ ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.
ಆತನ ತಮ್ಮ ಹಾಗೂ ತಾಯಿಯೇ ಆತನ ಅನೈತಿಕ ಸಂಬಂಧದಿಂದ ರೋಶಿ ಹೋಗಿ ಮೂಹರ್ತ ವಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಹನುಮಂತಗೌಡ ಪಾಟೀಲ ತಮ್ಮ ಭೀಮನಗೌಡ 24, ತಾಯಿ ಸುನಂದಾ ಗೌಡ ಹಾಗೂ ನವಲೂರಿನ ಮಹಾದೇವ ಗಾಯಕವಾಡ ನನ್ನು ಬಂಧಿಸಲಾಗಿದೆ ಎಂದು ಧಾರವಾಡ ಗ್ರಾಮೀಣ ಪೊಲೀಸ್ ಸಬ್ ಇನ್ಸಪೆಕ್ಟರ್ ಮಹೇಂದ್ರ ನಾಯಕ ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.