ಧಾರವಾಡ ಪ್ರಜಾಕುರಣ.ಕಾಮ್ : ವಿದ್ಯಾಕಾಶಿ ಧಾರವಾಡದ ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಧಾರವಾಡದ ಮರಾಠಾ ಕಾಲೋನಿ ಬಳಿಯ ಕೊಪ್ಪದಕೇರಿ ಶಿವಾಲಯದ ಬಳಿ ಈ ಕೊಲೆ ನಡೆದಿದೆ.
ಆಸ್ತಿ ವಿಚಾರದಲ್ಲಿ ಅಣ್ಣಾ ಹಾಗೂ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯವಾಯ್ತಾ ಎಂಬ ಶಂಕೆ ಮೂಡಿದ್ದು, ಕೊಲೆ ಮಾಡಿದವರು ಯಾರು ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನಿಂಗಪ್ಪ ಹಡಪದ (60) ಎಂಬಾತನೇ ಹತ್ಯೆಯಾದ ನತದೃಷ್ಟ ಈ ಕುರಿತು ಧಾರವಾಡ ಉಪನಗರ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.
ನಡುರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ವ್ಯಕ್ತಿಯ ಶವ ಬಿದ್ದಿದ್ದು ಕಂಡು ಕೆಲ ಕಾಲ ಧಾರವಾಡ ಜನ ಬೆಚ್ಚಿ ಬಿದ್ದಿದ್ದರು.
ಘಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಭೇಟಿ ನೀಡಿ ಪರಿಶಿಲನೆ ನಡೆಸಿದರು.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸುವ ಮೂಲಕ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.