ಧಾರವಾಡ prajakiran. com : ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಿ.ಆರ್.ಟಿ.ಎಸ್. ಬಸ್ ಡಿಕ್ಕಿ ಹೊಡೆದ ಘಟನೆ ಇಲ್ಲಿನ ಹುಬ್ಬಳ್ಳಿ ರಸ್ತೆಯ ಕೋರ್ಟ್ ಎದುರು ಇಂದು ಮುಂಜಾನೆ ಸಂಭವಿಸಿದೆ.
ಬಾಗಲಕೋಟ ಜಿಲ್ಲೆಯ ಬೈರಮಟ್ಟಿಯ ಮಲ್ಲಣ್ಣ ಸಂಗಪ್ಪ ಮೇಟಿ ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಸ್ಥಳೀಯರ ಸಹಾಯದೊಂದಿಗೆ ಸಂಚಾರ ಠಾಣೆಯ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಲ್ಲಣ್ಣ ಮೇಟಿ ರಸ್ತೆ ದಾಟುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.