ರಾಜ್ಯ

ಸರ್ಕಾರದ ಒಂದು ವರ್ಷದ ಸಾಧನೆ : ಜು.೨೭ ರಂದು ಮುಖ್ಯಮಂತ್ರಿಗಳಿಂದ ನೇರ ಸಂವಾದ

ಧಾರವಾಡ prajakiran.com  : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವು ಒಂದು ವರ್ಷ ಪೂರ್ಣಗೊಳಿಸಿರುವ ಸುಸಂದರ್ಭದಲ್ಲಿ “ಜನಸ್ನೇಹಿ ಆಡಳಿತ ೧ ವರ್ಷ; ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” ಕಾರ್ಯಕ್ರಮವನ್ನು ಜುಲೈ ೨೭, ೨೦೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವು  ವರ್ಚುವಲ್ ವೇದಿಕೆಯ ಮೂಲಕ ನೇರಪ್ರಸಾರವಾಗಲಿದೆ.

ಸರ್ಕಾರದ ಒಂದು ವರ್ಷದ ಸಾಧನೆ ಕುರಿತು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗಳು ಸಂಪಾದಿಸಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ ಪುಸ್ತಕ ಬಿಡುಗಡೆ ಸಮಾರಂಭ ಧಾರವಾಡ ಹಾಗೂ ಮುಖ್ಯಮಂತ್ರಿಗಳು ಫಲಾನುಭವಿಗಳೊಂದಿಗೆ ನಡೆಸುವ ನೇರ ಸಂವಾದ ಕಾರ್ಯಕ್ರಮದ ನೇರಪ್ರಸಾರದ ವೀಕ್ಷಣೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುರಿತು ಮಾಧ್ಯಮ ಸಲಹೆಗಾರರು ರಚಿಸಿರುವ ‘ಪುಟವಿಟ್ಟ ಚಿನ್ನ’ ಕೃತಿ ಬಿಡುಗಡೆ, ಸಾಕ್ಷ್ಯಚಿತ್ರ ಪ್ರಸಾರ ಮತ್ತಿತರ ಕಾರ್ಯಕ್ರಮಗಳನ್ನು ವರ್ಚುವಲ್ ವೇದಿಕೆ ಮೂಲಕ ವೀಕ್ಷಿಸಬಹುದು.

ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್, ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿಗಳು, ಗಣ್ಯರು ಹಾಗೂ ಎಲ್ಲ ಇಲಾಖೆಗಳ ಅಧಿಕಾರಿಗಳು, ವಿವಿಧ ಯೋಜನೆಗಳ ಫಲಾನುಭವಿಗಳು, ಕೋವಿಡ್‌ನಿಂದ ಗುಣಮುಖರಾದ ವ್ಯಕ್ತಿಗಳು ಧಾರವಾಡ ಜಿ.ಪಂ. ಸಭಾಂಗಣದಲ್ಲಿ ಉಪಸ್ಥಿತರಿರುವರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ  ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *