ಬೆಂಗಳೂರು prajakiran.com : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಬಿ ಎಸ್ ವೈ ನಿರಾಕರಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಗಳಿಗೆ ಪತ್ರ ಬರೆದ ಯಡಿಯೂರಪ್ಪ ಅವರು,
ನನಗೆ ಸಂಪುಟ ದರ್ಜೆ ಸ್ಥಾನಮಾನ ಬೇಡ. ಮಾಜಿ ಮುಖ್ಯಮಂತ್ರಿಗಳಿಗೆ ನೀಡುವ ಸೌಲಭ್ಯಗಳನ್ನಷ್ಟೆ ಸಾಕು ಎಂದು ತಿಳಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಸರಕಾರ ಇರುವವರೆಗೆ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಶನಿವಾರವಷ್ಟೆ ಆದೇಶ ಹೊರಡಿಸಿದ್ದರು.
ಆದರೆ ಭಾನುವಾರ ಯಡಿಯೂರಪ್ಪ ಆ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದ್ದಾರೆ.
ಯಡಿಯೂರಪ್ಪ ಅವರ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ಬೊಮ್ಮಾಯಿ ಪ್ರಸ್ತಾಪವನ್ನು ತಿರಸ್ಕರಿಸುವ ಯಡಿಯೂರಪ್ಪ ನಿರ್ಧಾರ ಒಳ್ಳೆಯದು.
ನಾನೇ ಅವರಿಗೆ ಹೇಳಬೇಕೆಂದಿದ್ದೆ. ಸಂಪುಟ ದರ್ಜೆ ಸ್ಥಾನಮಾನ ನೀಡುವ ಪ್ರಸ್ತಾಪವನ್ನು ಒಪ್ಪಿಕೊಳ್ಳಬೇಡಿ ಎಂದು ಹೇಳುವವನಿದ್ದೆ.
ಈಗ ಅವರೇ ನಿರ್ಧಾರ ತೆಗೆದುಕೊಂಡಿದ್ದನ್ನು ನಾನು ಸ್ವಾಗತಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.