ರಾಜ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ : ಎಲ್ಲಾ ರಂಗಗಳಿಗೂ ಅನುದಾನ

 ಗುಣಮಟ್ಟದ ಶಿಕ್ಷಣ
• ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ.

• ಹೋಬಳಿ ಮಟ್ಟದಲ್ಲಿ “ಮಾದರಿ ಶಾಲೆ”ಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ.
• ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ. ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ.
• ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ.
• ‘ನೋಡಿ ಕಲಿ ಮಾಡಿ ತಿಳಿ’ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆ.
• Karnataka Institute of Technology ಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ;

ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ.
• ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆ.

ಎಲ್ಲರಿಗೂ ಆರೋಗ್ಯ; ಎಲ್ಲೆಡೆಯೂ ಆರೋಗ್ಯ:
• ಬೆಂಗಳೂರಿನ ಎಲ್ಲಾ ವಾರ್ಡ್‍ಗಳಲ್ಲಿ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಟ್ಟು 438 “ನಮ್ಮ ಕ್ಲಿನಿಕ್”ಗಳ ಸ್ಥಾಪನೆ.

• ರಾಜ್ಯದಲ್ಲಿ ಮಹಿಳಾ ಆರೋಗ್ಯ ಸಮಸ್ಯೆಗಳಿಗೆ ಸಲಹೆ ನೀಡಲು 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ.
• ಬಡ ಹಿರಿಯ ನಾಗರಿಕರಿಗೆ ಯೋಜನೆಯಡಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ ಸೌಲಭ್ಯ.

• ಹುಬ್ಬಳ್ಳಿಯಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಹೃದ್ರೋಗ ಕೇಂದ್ರ ಸ್ಥಾಪನೆ.
• ಬೆಳಗಾವಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪನೆ.

• ಆಯ್ದ 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ನೀಡುವ Iಟಿಜಿusioಟಿ ಅeಟಿಣಡಿe ಗಳನ್ನು ಸ್ಥಾಪಿಸಲಾಗುವುದು.

• ಏಳು ತಾಲ್ಲೂಕು ಆಸ್ಪತ್ರೆಗಳು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.
• ತುಮಕೂರಿನÀಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ ಸ್ಥಾಪನೆ; 2022-23ರಲ್ಲಿ 10 ಕೋಟಿ ರೂ. ಅನುದಾನ.

• ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ 75 ತಾಲ್ಲೂಕು ಆಸ್ಪತ್ರೆಗಳ ಮ್ಯಾಪಿಂಗ್, ತಾಲ್ಲೂಕು ಮಟ್ಟದಲ್ಲಿ ಹೃದಯ ಸಂಬಂಧಿ ಚಿಕಿತ್ಸೆ.
• ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‍ಗಳನ್ನು ಜಿಲ್ಲಾ ಮಟ್ಟದಲ್ಲಿ ಪ್ರಾರಂಭಿಸಲು ಅನುವಾಗುವಂತೆ 200ಕ್ಕೂ ಹೆಚ್ಚು ಹಾಸಿಗೆಗಳ ಸಾಮಥ್ರ್ಯವಿರುವ ಸರ್ಕಾರಿ ಆಸ್ಪತ್ರೆಗಳನ್ನು ಎನ್.ಎಂ.ಸಿ.ಯ ಅನುಮೋದನೆ ಪಡೆದು ಬೋಧನಾ ಆಸ್ಪತ್ರೆಗಳಾಗಿ ಪರಿವರ್ತನೆ; ಈ ವರ್ಷ ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಪ್ರಾರಂಭ.

• “ಮುಖ್ಯಮಂತ್ರಿ ಆರೋಗ್ಯ ವಾಹಿನಿ” ಯೋಜನೆಯಡಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲು ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಚಾರಿ ಕ್ಲಿನಿಕ್ ಪ್ರಾರಂಭ.

• ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ.
• ಬಡವರಿಗೆ ವೈದ್ಯಕೀಯ ಶಿಕ್ಷಣ ಅವಕಾಶ ಒದಗಿಸಲು ಕೈಗೊಳ್ಳುವ ಕ್ರಮಗಳು:
ಅ. ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ.

ಆ. ಸರ್ಕಾರಿ ಕೋಟಾದಡಿ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕುಗಳಿಂದ ಶೈಕ್ಷಣಿಕ ಸಾಲ ಒದಗಿಸಲು ನೆರವು.
ಇ. ಖಾಸಗಿ ವೈದ್ಯಕೀಯ ಕಾಲೇಜುಗಳ ವರ್ಗೀಕರಣ ಹಾಗೂ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕ ನಿಗದಿಪಡಿಸಲು ಕ್ರಮ
ಅಪೌಷ್ಟಿಕತೆ ನಿವಾರಣೆಗೆ ಒತ್ತು
• ಪೌಷ್ಟಿಕ ಕರ್ನಾಟಕ ಯೋಜನೆಯಡಿ 93 ಕೋಟಿ ರೂ. ವೆಚ್ಚದಲ್ಲಿ ಪ್ರಾಯೋಗಿಕವಾಗಿ ರಾಜ್ಯದ 14 ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆ.

• ಬಾಲ್ಯವಿವಾಹ ಹಾಗೂ ಹೆಣ್ಣುಮಕ್ಕಳು ಶಾಲೆಬಿಡುವುದನ್ನು ತಪ್ಪಿಸಿ, ಅಪೌಷ್ಟಿಕತೆ ನಿವಾರಿಸುವ “ಸ್ಫೂರ್ತಿ” ಯೋಜನೆ ರಾಜ್ಯಾದ್ಯಂತ ವಿಸ್ತರಣೆ.

 ದುರ್ಬಲ ವರ್ಗಗಳ ಸಬಲೀಕರಣ

• ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ 800 ಕೋಟಿ ರೂ.

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮಥ್ರ್ಯದ ಬಹುಮಹಡಿಯ ದೀನ್‍ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ ನಿರ್ಮಾಣ.

• ಪ್ರತಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಒಂದು ಶಾಲೆಯನ್ನು ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಾಗಿ ಮರುನಾಮಕರಣ; ಪದವಿ ಪೂರ್ವ ತರಗತಿ ಪ್ರಾರಂಭ

;ಸಿಬಿಎಸ್‍ಇ ಮಾನ್ಯತೆ ಪಡೆಯಲು ಕ್ರಮ. 25 ಕೋಟಿ ರೂ. ಅನುದಾನ.

• ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ.

• ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳ ಗುರಿಯಲ್ಲಿ ಶೇ.25ರಷ್ಟು ಮಹಿಳೆಯರಿಗೆ ಮೀಸಲು.

• ಗಂಗಾ ಕಲ್ಯಾಣ ಯೋಜನೆಯಲ್ಲಿ ಸುಧಾರಣೆ; ಬೋರ್ ವೆಲ್ ಕೊರೆಯಲು ಡಿ.ಬಿ.ಟಿ. ಮೂಲಕ ಹಣ ವರ್ಗಾವಣೆ; ವಿದ್ಯುದೀಕರಣ ಶುಲ್ಕ ಸರ್ಕಾರದಿಂದ ಪಾವತಿ. 2022-23ರಲ್ಲಿ ಒಟ್ಟಾರೆ
1,115 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
• ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯಗಳ ನಿಗಮಗಳಡಿ 400 ಕೋಟಿ ರೂ. ಅಭಿವೃದ್ಧಿ ಯೋಜನೆ.

ದೇವರಾಜ ಅರಸು ಅಭಿವೃದ್ಧಿ ನಿಗಮದಡಿ ಬರುವ ಇತರ ಹಿಂದುಳಿದ ಸಮುದಾಯಗಳಿಗೆ 400 ಕೋಟಿ ರೂ. ಯೋಜನೆ

• ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ತಲಾ 100 ಕೋಟಿ ರೂ. ಯೋಜನೆ.
• ಮರಾಠಾ ಅಭಿವೃದ್ಧಿ ನಿಗಮದ ಕಾರ್ಯಕ್ರಮಗಳಿಗೆ 50 ಕೋಟಿ ರೂ.

• ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ 50 ಕೋಟಿ ರೂ. ಯೋಜನೆ ಹಾಗೂ ಜೈನ, ಸಿಖ್ ಮತ್ತು ಬೌದ್ಧ ಸಮುದಾಯಗಳ ಅಭಿವೃದ್ಧಿಗೆ 50 ಕೋಟಿ ರೂ. ಯೋಜನೆ.

ಕಾರ್ಮಿಕರ ಕ್ಷೇಮಾಭಿವೃದ್ಧಿ
• 2.30 ಲಕ್ಷ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2610 ಕೋಟಿ ರೂ. ಗಳ ಯೋಜನೆಗಳ ಅನುಷ್ಠಾನ.

• ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಪ್ರಾರಂಭ
• ಕಟ್ಟಡ ಕಾರ್ಮಿಕರ ರಿಯಾಯಿತಿ ಬಸ್ ಪಾಸ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ
• ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿ ಮತ್ತು ದಾವಣಗೆರೆ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳ ಹಾಸಿಗೆಗಳ ಸಾಮಥ್ರ್ಯ 100ಕ್ಕೆ ಹೆಚ್ಚಳ; 19 ಹೊಸ ಚಿಕಿತ್ಸಾಲಯಗಳ ಪ್ರಾರಂಭ.

ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ:
• ಆಯ್ದ ಸ್ವ-ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು, 500 ಕೋಟಿ ರೂ. ಅನುದಾನ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ. 3.9 ಲಕ್ಷ ಮಹಿಳೆಯರಿಗೆ ಅನುಕೂಲ.

• ಮಹಿಳಾ ಸ್ವ-ಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ.
• ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬ್ರ್ಯಾಂಡಿಂಗ್, ಮೌಲ್ಯವರ್ಧನೆ, ಪ್ಯಾಕಿಂಗ್ ಸೌಲಭ್ಯ ಒದಗಿಸಿ, ಮಾರುಕಟ್ಟೆ ಒದಗಿಸಲು “ಅಸ್ಮಿತೆ” ಹೆಸರಿನಡಿ ಎಲ್ಲಾ ಉತ್ಪನ್ನಗಳ ಮಾರಾಟ; ಹೋಬಳಿ/ ಜಿಲ್ಲೆ/ ರಾಜ್ಯ ಮಟ್ಟದಲ್ಲಿ ಮಾರಾಟ ಮೇಳ ಆಯೋಜನೆ.

• ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ – ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮುರುನÀಲ್ಲಿ ಸೀರೆ ಮೈಕ್ರೋಕ್ಲಸ್ಟರ್ ಅಭಿವೃದ್ಧಿ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *