ಧಾರವಾಡ prajakiran. com : ಮದುವೆಗೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ಸಿನ ಬ್ರೇಕ್ ಫೇಲ್ ಆಗಿ ಬಸ್ಸು ನವಲೂರು ಬ್ರಿಜ್ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ.
ಕೊಪ್ಪಳ ಡಿಪೋದ ಸಾರಿಗೆ ಸಂಸ್ಥೆ ಬಸ್ಸು ಇದಾಗಿದ್ದು, ಹುಬ್ಬಳ್ಳಿ ಕಡೆಗೆ ಮದುವೆಗೆಂದು ಹೊರಟಿತ್ತು.
ಬಸ್ಸಿನಲ್ಲಿ 50 ಜನ ಪ್ರಯಾಣಿಸುತ್ತಿದ್ದರು. ನವಲೂರು ಬಳಿ ಬರುತ್ತಿದ್ದಂತೆ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್ಸನ್ನು ಮುಖ್ಯ ರಸ್ತೆ ಬಿಟ್ಟು ಪಕ್ಕದ ರಸ್ತೆಗೆ ತೆಗೆದುಕೊಂಡು ಬ್ರಿಜ್ ತಡೆಗೋಡೆಗೆ ಡಿಕ್ಕಿಪಡಿಸಿದ್ದಾನೆ.
ಇದರಿಂದ ಮುಂದಾಗುವ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.
ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಧಾರವಾಡ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಮುಂದಿನಕ್ರಮ ಜರುಗಿಸಿದ್ದಾರೆ.
ಸಾರಿಗೆ ಸಂಸ್ಥೆಯ ಈ ಬಸ್ಸನ್ನು ಮದುವೆಗಾಗಿ ಬಾಡಿಗೆ ಮಾಡಿಕೊಂಡು ಹೋಗಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ