ಅ. 8 ನಾಮಪತ್ರ ಸಲ್ಲಿಕೆಗೆ ಕೊನೆ ದಿನ
ಬೆಂಗಳೂರು prajakiran.com :
ವಿಜಯಪುರ ಜಿಲ್ಲೆಯ ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನದಿಂದ ತೆರವುಗೊಂಡಿದ್ದ ಎರಡು ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪ ಚುನಾವಣೆ ನಿಗದಿಯಾಗಿದೆ.
ಅಕ್ಬೋಬರ್ 1 ರಂದು ಉಪ ಚುನಾವಣೆಯ ಅಧಿಸೂಚನೆ ಹೊರಬೀಳಲಿದೆ.
ಅಕ್ಟೋಬರ್ 8 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಅ.11 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅ.13ಕ್ಕೆ ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ.
ಅ.30 ರಂದು ಮತದಾನ ನಡೆಯಲಿದ್ದು, ನವೆಂಬರ್ 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.