ಹುಬ್ಬಳ್ಳಿ prajakiran. com : ಧಾರವಾಡ ತಾಲೂಕಿನ ಬಾಡ ಗ್ರಾಮದ ಭೀಕರ ಅಪಘಾತ ನೆನಪಿನಂಗಳದಿಂದ ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ಹುಬ್ಬಳ್ಖಿ-ಧಾರವಾಡ ಬೈಪಾಸ್ ನ ರೇವಡಿಹಾಳ ಬಳಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು,26 ಜನ ಗಾಯಗೊಂಡಿದ್ದಾರೆ.
ಈ ಅವಘಡ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.
ಕೊಲ್ಲಾಪುರದಿಂದ ಬೆಂಗಳೂರಿನತ್ತ ಹೊರಟಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರಿನಿಂದ ಪುನಾ ಕಡೆ ಹೊರಟಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದ್ದು,ಬಸ್ ಚಾಲಕ ಟ್ರ್ಯಾಕ್ಟರ್ ಓವರಟೇಕ್ ಮಾಡಲು ಹೋದಾಗ ದುರಂತ ಸಂಭವಿಸಿದೆ.
ಅಪಘಾತದಿಂದಾಗಿ ಕೆಲಕಾಲ ಹೆದ್ದಾರಿ ಬಂದ್ ಆಗಿತ್ತು. ಮಾಹಿತಿ ಅರಿತು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಕಮೀಷನರ್ ಲಾಬುರಾಮ್ ಅವರು ಅಪಘಾತದಲ್ಲಿ ಗಾಯಗೊಂಡ 26 ಜನರನ್ನು ಆಸ್ಪತ್ರೆಗೆ ಸಾಗಿಸಿದರು. ಅಪಘಾತವಾದ ವಾಹನಗಳನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.