ರಾಜ್ಯ

ಸಚಿವ ಸಂಪುಟ ವಿಸ್ತರಣೆ: ಎಲ್ಲಾ ಭಾಗಗಳಿಗೂ ಪ್ರಾತಿನಿಧ್ಯಕ್ಕೆ ಪ್ರಯತ್ನ : ಮುಖ್ಯಮಂತ್ರಿ

ವಿಜಯಪುರ prajakiran. com, ಏ 26: ಸಚಿವ ಸಂಪುಟ ವಿಸ್ತರಣೆಯಾದಲ್ಲಿ ರಾಜ್ಯದ ಎಲ್ಲಾ ಭಾಗಗಳಿಗೆ ಆದಷ್ಟೂ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಜಯಪುರದ ಕೊಡಗಾನೂರ ಹೆಲಿಪ್ಯಾಡ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರು ಕರೆದಿಲ್ಲ. ದೆಹಲಿಯಲ್ಲಿ ನಿರ್ಣಯವಾದಾಗ ತಿಳಿಸಲಾಗುವುದು ಎಂದರು.

ವಿಜಯಪುರದಲ್ಲಿ ಮೂರು ಶಾಸಕರಿದ್ದಾರೆ. ಯಾರಿಗೂ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಎಲ್ಲಾ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡಬೇಕು ಎಂದಿದೆ. ರಾಜಕೀಯ ಸ್ಥಿತಿಗತಿಯ ಮೇಲೆ ಕೆಲವು ನಿರ್ಣಯಗಳಾಗುತ್ತವೆ ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *