ರಾಜ್ಯ

ಪಶ್ಚಿಮ ಶಿಕ್ಷಕರ ಚುನಾವಣೆ : ಜೂನ್ 11 ರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯ

ಧಾರವಾಡ prajakiran. com  ಜೂ.09 : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂನ್ 13 ರಂದು ಮತದಾನ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಜೂನ್ 11 ರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.

ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 ರ ಪ್ರಕಾರ ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುನ್ನ ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಬಹಿರಂಗ ಪ್ರಚಾರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾಗಿರುವ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಅವರು, ರ್ಯಾಲಿ, ಬಹಿರಂಗ ಸಭೆಗಳನ್ನು ಆಯೋಜಿಸುವುದು, ಉದ್ದೇಶಿಸಿ ಮಾತನಾಡುವುದನ್ನು ನಿಷೇಧಿಸಲಾಗಿದೆ.

ಸಿನೆಮಾ, ಟೆಲಿವಿಷನ್ ಹಾಗೂ ಇತರ ಮಾಧ್ಯಮಗಳ ಮೂಲಕ ಚುನಾವಣಾ ಸಂಬಂಧಿತ ಮಾಹಿತಿ, ವಿಶ್ಲೇಷಣೆ ಹಾಗೂ ಸಮೀಕ್ಷೆಗಳ ಪ್ರಕಟಣೆ ನಿಷಿದ್ಧವಾಗಿದೆ.

ಸಂಗೀತ ಸಂಜೆ, ನಾಟಕ ಅಥವಾ ಮನರಂಜನಾ ಕಾರ್ಯಕ್ರಮಗಳ ಮೂಲಕ ಮತದಾರರ ಮೇಲೆ ಪ್ರಭಾವ ಬೀರುವಂತಹ ಚಟುವಟಿಕೆಗಳನ್ನು ನಡೆಸಬಾರದು.

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿರುವ ಅಧಿಕಾರಿ, ಸಿಬ್ಬಂದಿ ಹೊರತುಪಡಿಸಿ, ಇತರೆ ವ್ಯಕ್ತಿಗಳು ಒಂದೇ ಸ್ಥಳದಲ್ಲಿ 5 ಕ್ಕಿಂತ ಹೆಚ್ಚು ಜನ ಸೇರುವುದನ್ನು ನಿರ್ಬಂಧಿಸಲಾಗಿದೆ.

ಈ ಆದೇಶವು ಜೂನ್ 11 ರ ಸಂಜೆ 5 ಗಂಟೆಯಿಂದ ಜೂನ್ 13 ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ವಿವರಿಸಿದ್ದಾರೆ.

ಜಾಹೀರಾತು ಪೂರ್ವಾನುಮತಿ ಕಡ್ಡಾಯ:

ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಮುದ್ರಣ, ವಿದ್ಯುನ್ಮಾನ ಮಾಧ್ಯಮಗಳಿಗೆ ಜಾಹೀರಾತು ನೀಡುವ ಮುನ್ನ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಹಾಗೂ ನಿಗಾ ಸಮಿತಿ (ಎಂಸಿಎಂಸಿ) ಮೂಲಕ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

ಅಭ್ಯರ್ಥಿಗಳು ಜಾಹೀರಾತು ವಿನ್ಯಾಸಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಪೂರ್ವಾನುಮತಿ ಪಡೆಯಬೇಕು. ಮಾಧ್ಯಮ ಸಂಸ್ಥೆಗಳು ಪೂರ್ವಾನುಮತಿ ಪತ್ರದ ಪ್ರತಿಯನ್ನು ಪರಿಶೀಲಿಸಿ ಜಾಹೀರಾತು ಪ್ರಕಟಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *