ದಾವಣಗೆರೆ prajakiran.com : ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತಕ್ಕೆ ಇಡಾಗಿದೆ.
ದಾವಣಗೆರೆ ನಗರದ ಹಳೇ ಕುಂದುವಾಡ ಬಳಿಯ NH4 ನಲ್ಲಿ ಮಂಗಳವಾರ ಘಟನೆ ನಡೆದಿದೆ.
ಪ್ರಶಾಂತ್ ಶೆಟ್ಟರ್, ಪತ್ನಿ ಅಂಚಲ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.
ಡಿವೈಡರ್ ಬಳಿ KA 05 AR 6577 ನಂಬರಿನ ಲಾರಿ, KA03 NE 8 ನಂಬರಿನ ರೇಂಜ್ ರೋವರ್ ಕಾರ್ ನಡುವೆ ಡಿಕ್ಕಿ ಹೊಡೆದಾಗ ಅಪಘಾತ ಸಂಭವಿಸಿದೆ.
ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೈಟೆಕ್ ಆಸ್ಪತ್ರೆ ಗಾಯಾಳುಗಳ ರವಾನೆ ಮಾಡಲಾಯಿತು.
ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದಾಗ ಅಪಘಾತ ನಡೆದಿದೆ.
ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪಿಎಸ್ ಐ ಕಿರಣ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಸರ್ವಿಸ್ ರಸ್ತೆ ನಿರ್ಮಾಣ ಮಾಡುವಂತೆ ಸ್ಥಳಿಯರ ಪಟ್ಟು ಹಿಡಿದಿದ್ದಾರೆ.
ಪದೇ ಪದೇ ಅಪಘಾತ ನಡೆದರು ಕ್ರಮ ವಹಿಸಿಲ್ಲ ಎಂದು ಅಪಾದಿಸಿದರು.
ಅರ್ಧಬರ್ಧ ರಸ್ತೆ ನಿರ್ಮಾಣ ಮಾಡಿ ಕಾಮಗಾರಿ ನಿಲ್ಲಿಸಲಾಗಿದೆ.
ಈ ಹಿನ್ನಲೆಯಲ್ಲಿಯೇ ಸರಣಿ ಅಪಘಾತಗಳು ನಡೆಯುತ್ತಿವೆ ಎಂದು ದೂರಿದರು.
ಈ ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿದ್ದಾರೆ.