ಉತ್ತರ ಕನ್ನಡ prajakiran.com : ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಉತ್ತರಕನ್ನಡ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಅವರ ಸಭೆಗೆ ಬರುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಸಿದ್ದಾಪುರ ತಾಲೂಕಿನ ಲೋಕೋಪಯೋಗಿ ಇಲಾಖೆಯ ಎಇ.ಇ ಸಾವನ್ನಪ್ಪಿದ್ದವಘಟನೆ ಶನಿವಾರ ನಡೆದಿದೆ.
ಇದಲ್ಲದೆ, ನಾಲ್ಕು ಜನ ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಬಾಳೆಗುಳಿ ಬಳಿ ನಡೆದಿದೆ.
ಸಿದ್ದಾಪುರ ತಾಲೂಕಿನ ಲೋಕೋಪಯೋಗಿ ಇಲಾಖೆ ಎಇಇ ,ಮುದುಕಣ್ಣನವರ್(58) ಮೃತ ಪಟ್ಟ ಅಧಿಕಾರಿಯಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡವರನ್ನು ಅಂಕೋಲಾ ಹಾಗೂ ಕಾರವಾರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಭೆಗೆ ಲೋಕೋಪಯೋಗಿ ಇಲಾಖೆಯ ಶಿರಸಿ, ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನ ಇಂಜಿನಿಯರ್ ಗಳು ಒಂದೇ ಕಾರಿನಲ್ಲಿ ಬರುತ್ತಿದ್ದರು.
ಅಂಕೋಲಾದ ಬಾಳೆಗುಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಅನಾಹುತ ಸಂಭವಿಸಿದೆ.
ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಮುಂದಿನ. ಕ್ರಮ ಜರುಗಿಸಿದ್ದಾರೆ.