ಧಾರವಾಡ prajakiran. com : ಕಾರು ಹಾಗೂ ಬಸ್ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ರಸ್ತೆಯಲ್ಲಿ ರವಿವಾರ ಸಂಜೆ ವೇಳೆಗೆ ನಡೆದಿದೆ.
ಅಪಘಾತದ ರಭಸಕ್ಕೆ ಇನ್ನೋವಾ ಕಾರು ಜಖಂಗೊಂಡಿದ್ದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಈ ಹಿನ್ನೆಲೆಯಲ್ಲಿ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಗ್ರಾಮೀಣ ಪೊಲೀಸರು ಘಟನೆ ಕುರಿತು ಮಾಹಿತಿ ಕಲೆ ಹಾಕಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.