ಕೇವಲ ೫ ಗಂಟೆಗಳಲ್ಲಿ ಮರಳಿನಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಬೃಹತ್ ಕಲಾಕೃತಿ * ಜನಜಾಗೃತಿ ಸಂಘದಿAದ ಆಯೋಜನೆ * ಕಲಾವಿದ ಮಂಜುನಾಥ ಹಿರೇಮಠ ಅವರ ಕೈ ಚಳಕ ಧಾರವಾಡ : ಸ್ವಾಮಿ ವಿವೇಕಾನಂದರ ೧೬೦ನೇ ಜಯಂತಿ ಪ್ರಯುಕ್ತ ಜನ ಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ನೇತೃತ್ವದಲ್ಲಿ ಆಯೋಜಿಸಿದ್ದ ವಿಶಿಷ್ಟ ಕಾರ್ಯಕ್ರಮಕ್ಕೆ ಬೆಳಗ್ಗೆ ಕಲಾವಿದ ಮಂಜುನಾಥ ಹಿರೇಮಠ, ಹಾಗೂ ಅವರ ಮಕ್ಕಳಾದ ಕಾಂತೇಶ ಹಾಗೂ ವಿನಾಯಕ ಕೈ ಚಳಕದಲ್ಲಿ ೫ ಗಂಟೆಗಳಲ್ಲಿ ಸ್ವಾಮಿ ವಿವೇಕಾನಂದರ ಬೃಹತ್ ಮರಳಿನ […]
ಆಧ್ಯಾತ್ಮ
ಧಾರವಾಡದ ಹೆಬ್ಬಳ್ಳಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಮಕ್ಕಳಿಗೆ ಪ್ರಬಂಧ, ಭಾಷಣ, ಚಿತ್ರಕಲೆ ಸ್ಪರ್ಧೆ
ಧಾರವಾಡದ ಹೆಬ್ಬಳ್ಳಿಯ ಡಿಪಿಇಪಿ ಶಾಲೆಯಲ್ಲಿ ಜನ ಜಾಗೃತಿ ಸಂಘದಿAದ ಅರ್ಥಪೂರ್ಣ ಆಯೋಜನೆ ೩೫೦ಕ್ಕೂ ಹೆಚ್ಚು ಸರಕಾರಿ ಶಾಲೆಯ ಮಕ್ಕಳು ಉತ್ಸಾಹದಿಂದ ಭಾಗಿ ಧಾರವಾಡ ಪ್ರಜಾಕಿರಣ.ಕಾಮ್ : ಸ್ವಾಮಿ ವಿವೇಕಾನಂದರ ೧೬೦ನೇ ಜಯಂತಿ ಹಾಗೂ ಸುಭಾಸಚಂದ್ರ ಬೋಸ್ ಅವರ ೧೨೬ನೇ ಜಯಂತ್ಯೋತ್ಸವ ಪ್ರಯುಕ್ತ ಧಾರವಾಡದ ಜನಜಾಗೃತಿ ಸಂಘದಿAದ ಹೆಬ್ಬಳ್ಳಿಯ ಗ್ರಾಮದ ಡಿಪಿಇಪಿ ಶಾಲೆಯಲ್ಲಿ ಮಕ್ಕಳಿಗೆ ಪ್ರಬಂಧ, ಭಾಷಣ, ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿತ್ತು. ೩೫೦ಕ್ಕೂ ಹೆಚ್ಚು ಸರಕಾರಿ ಶಾಲೆಯ ಮಕ್ಕಳು ಉತ್ಸಾಹದಿಂದ ಭಾಗಿಯಾಗಿದರು. ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಜನಜಾಗೃತಿ ಸಂಘದಿಂದ […]
ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ ಪ್ರಜಾಕಿರಣ. ಕಾಮ್ : ರಾಜ್ಯದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಚುನಾವಣೆ ವರ್ಷ ಇರುವುದರಿಂದ ಪ್ರತಿ ಬಾರಿಯಂತೆ ಜನರ ಬಳಿ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆ ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ನಡೆದಿದೆ. ಜನ […]
ಅಗರಬತ್ತಿ ಉದ್ಯಮಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ಸಹಕಾರ: ಬಸವರಾಜ ಬೊಮ್ಮಾಯಿ
ಬೆಂಗಳೂರು ಪ್ರಜಾಕಿರಣ.ಕಾಮ್ ನ. 24:ಅಗರಬತ್ತಿ ಉದ್ಯಮಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಇಂದು ಅಖಿಲ ಭಾರತ ಅಗರಬತ್ತಿ ಉತ್ಪಾದಕರ ಸಂಘದ ವತಿಯಿಂದ ಆಯೋಜಿಸಿದ್ದ ಐಮಾ ಎಕ್ಸ್ ಪೋ ( AIAMA )2022 ಉದ್ಘಾಟಿಸಿ ಮಾತನಾಡಿದರು. ಅಗರಬತ್ತಿ ಉದ್ಯಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಉದ್ಯೋಗ ನೀಡುವುದರಿಂದ ಹೆಚ್ಚಿನ ಅನುಕೂಲವಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಈ ಉದ್ಯಮ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ರಾಜ್ಯ ಸರ್ಕಾರವು ಸಣ್ಣ […]
ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಯಿಂದ 157 ಮನೆಗಳು ಭಾಗಶ: ಹಾನಿ
ಜನರ ಸುರಕ್ಷತೆಗೆ ನಿರಂತರ ನಿಗಾವಹಿಸಲು ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಸೂಚನೆ ಧಾರವಾಡ prajakiran.com ಜು.11: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ಜು.11ವರೆಗೆ ಜಿಲ್ಲೆಯ ವಿವಿಧ ಪಟ್ಟಣ ಮತ್ತು ಗ್ರಾಮಗಳ ಸುಮಾರು 157 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಎನ್.ಡಿ.ಆರ್.ಎಫ್ನಿಯಮಾವಳಿ ಅನ್ವಯ ತಕ್ಷಣ ಪರಿಹಾರ ಬಿಡುಗಡೆ ಮಾಡಲು ಕ್ರಮವಹಿಸಬೇಕು ಎಂದು ಗಣಿ, ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಆಚಾರ ಹಾಲಪ್ಪ […]
ಧಾರವಾಡದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಡೊನೇಶನ್, ‘ಇಂಟಿಗ್ರೆಟೆಡ್ ಕೋಚಿಂಗ್’ ಹಾವಳಿ……!?
ಎಬಿವಿಪಿ ಪ್ರತಿಭಟನೆ ಧಾರವಾಡ prajakiran. com : ಎಬಿವಿಪಿ ಧಾರವಾಡ ಘಟಕದವರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಹೆಚ್ಚಿನ ಶುಲ್ಕ ವಸೂಲಿ ವಿರುದ್ದ ಎಬಿವಿಪಿ ಕಾರ್ಯಕರ್ತರು ಶುಕ್ರವಾರ ಬೀದಿಗಿಳಿದು ಪ್ರತಿಭಟನೆ ಮಾಡಿದರು. ಡೊನೇಶನ್ ಹಾಗೂ ‘ಇಂಟಿಗ್ರೆಟೆಡ್ ಕೋಚಿಂಗ್’ ಹಾವಳಿ ತಡೆಯುವಂತೆ ಆಗ್ರಹಿಸಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಮನವಿ ಅರ್ಪಿಸಿದರು ಈ ಸಂದಭ೯ದಲ್ಲಿ ಜಿಲ್ಲಾಸಂಚಾಲಕ ಅರುಣ ಅಮರಗೋಳ, ವಿದ್ಯಾನಾಂದ ಸ್ಥಾವರಮಠ, ಸಚೀನ […]
ಕೊಳದ ಮಠದ ಪೀಠಾಧಿಪತಿ ಶಾಂತವೀರ ಮಹಾಸ್ವಾಮಿಜಿ ಇನ್ನು ನೆನಪು ಮಾತ್ರ
ಬೆಂಗಳೂರು prajakiran.com : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿರುವ ವೀರಶೈವ -ಲಿಂಗಾಯತ ಪರಂಪರೆಯ ಪ್ರತಿಷ್ಠಿತ ಕೊಳದ ಮಠದ ಪೀಠಾಧಿಪತಿಗಳಾಗಿದ್ದ ಪರಮಪೂಜ್ಯ ಶಾಂತವೀರ ಮಹಾಸ್ವಾಮಿಜಿಗಳು ಶನಿವಾರ ಲಿಂಗೈಕ್ಯರಾಗಿದ್ದಾರೆ. ಪೂಜ್ಯರು ಹಲವಾರು ಸಂಘ ಸಂಸ್ಥೆಗಳನ್ನು ಸ್ಥಾಪಿಸಿ, ಪರಂಪರೆಯ ವಾರಸುದಾರರಿಗೆ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಜೀವನದುದ್ದಕ್ಕೂ ಹೋರಾಡುತ್ತಲೇ ಇಹಲೋಕವನ್ನು ತ್ಯಜಿಸಿದ್ದಾರೆ. ಇವರ ನಿಧನದಿಂದ ಸಾಮಾಜಿಕ,ಆಧ್ಯಾತ್ಮಿಕ, ಶೈಕ್ಷಣಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಪೂಜ್ಯರ ತತ್ವ ಸಿದ್ದಾಂತಗಳ ಮಾರ್ಗದಲ್ಲಿ ಸಾಗಿ ಅವರ ಕನಸನ್ನು ನನಸಾಗಿಸಿದಾಗ ಮಾತ್ರ ಅವರಿಗೆ ನಿಜವಾದ ಅರ್ಥದಲ್ಲಿ […]
ಇಂದಿನಿಂದ ಮೂರು ದಿನ ಜಿಲ್ಲಾ ಪ್ರವಾಸ : ಅಭಿವೃದ್ಧಿಗೆ ಪ್ರಾಮುಖ್ಯತೆ : ಮುಖ್ಯ ಮಂತ್ರಿ
ಬೆಂಗಳೂರು prajakiran. com, ಏ. 19: ಇಂದಿನಿಂದ ಮೂರು ದಿನಗಳ ಕಾಲ ಜಿಲ್ಲಾ ಪ್ರವಾಸಕ್ಕೆ ತೆರಳಲಿದ್ದು ರಾಜ್ಯದ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಆಹ್ವಾನ ಬಂದಲ್ಲಿ ದೆಹಲಿಗೆ ಹೋಗುತ್ತೇನೆ ಎಂದಾಸ್ ತಿಳಿಸಿದರು. ಹುಬ್ಬಳ್ಳಿ ಘಟನೆಯ ತೀವ್ರವಾದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುತ್ತದೆ. ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡುವುದು ಅಕ್ಷಮ್ಯ ಅಪರಾಧ. ಕಾನೂನಿನ ಕ್ರಮ […]
ಧಾರವಾಡ ಜಿಲ್ಲೆಯ ಕಮಡೊಳ್ಳಿ ಲೋಚನೇಶ್ವರ ಮಠದ ಶತಾಯುಷಿ ಮಹಾಸ್ವಾಮಿಗಳು ಲಿಂಗೈಕ್ಯ
ಶೋಕಸಾಗರದಲ್ಲಿ ಭಕ್ತ ಜನತೆ ಕುಂದಗೋಳ prajakiran.com : ಕಳೆದ ಎರಡು ತಿಂಗಳುಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಲೋಚನೇಶ್ವರ ಮಠದ 5ನೇ ಪೀಠಾಧಿಪತಿ ರಾಚೋಟೇಶ್ವರ ಮಹಾಸ್ವಾಮಿಗಳು ತಮ್ಮ 103ನೇ ವಯಸ್ಸಿನಲ್ಲಿ ಲೋಚನೇಶ್ವರ ಮಠದಲ್ಲೇ ಇಂದು ಬೆಳಿಗ್ಗೆ ನಾಲ್ಕು ಗಂಟೆಗೆ ಲಿಂಗೈಕ್ಯರಾಗಿದ್ದಾರೆ. ಸರಿ ಸುಮಾರು 200 ವರ್ಷ ಇತಿಹಾಸದ ಕುಂದಗೋಳ ತಾಲೂಕಷ್ಟೇ ಅಲ್ಲದೇ ರಾಜ್ಯಾದ್ಯಂತ ಭಕ್ತರನ್ನು ಹೊಂದಿದ್ದ ಸ್ವಾಮಿಗಳು ತಮ್ಮ ಪ್ರವಚನ ಹಾಗೂ ಮಾತಿನ ಶೈಲಿಯಿಂದಲೇ ಹೆಸರಾಗಿದ್ದರು. 2019ರಲ್ಲಿ ಲೋಚನೇಶ್ವರ ಮಠಕ್ಕೆ ರಾಚೋಟೇಶ್ವರ ದೇವರನ್ನು […]
ಪ್ರವಚನ ಮಾಡುತ್ತಲೇ ಪರಮಾತ್ಮನ ಪಾದ ಸೇರಿದ ಸಂಗನಬಸವ ಮಹಾಸ್ವಾಮೀಜಿ…..!
ಚಿಕ್ಕೋಡಿ prajakiran.com : ಪ್ರವಚನ ಮಾಡುತ್ತಲೇ ತೀವ್ರ ಹೃದಯಾಘಾತದಿಂದ ಸ್ವಾಮೀಜಿಯೊಬ್ಬರು ಪರಮಾತ್ಮನ ಪಾದ ಸೇರಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಸಂಗನಬಸವ ಮಹಾಸ್ವಾಮೀಜಿ (೫೩) ಅವರೇ ಹೃದಯಾಘಾತದಿಂದ ಬಾರದ ಲೋಕಕ್ಕೆ ಪ್ರಯಾಣ ಬೆಳಸಿದ್ದಾರೆ. ಇದು ನವೆಂಬರ್ 6 ನೇ ತಾರೀಕಿನಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವಂಬರ್ ೬ ರಂದು ತಮ್ಮದೇ ಹುಟ್ಟು ಹಬ್ಬ ಆಚರಿಸಿಕೊಂಡು ಆರ್ಶೀರ್ವಚನ ನೀಡುತ್ತಿದ್ದ ವೇಳೆ ಸ್ವಾಮೀಜಿ ವಿಧಿವಶರಾದರು. ಹುಟ್ಟು ಹಬ್ಬದ ದಿನವೇ ಹೃದಯಾಘಾತದಿಂದ ಸ್ವಾಮೀಜಿ ಲಿಂಗೈಕ್ಯರಾಗಿರುವುದು ಭಕ್ತರಿಗೆ ಅಪಾರ […]