ಸಿನಿಮಾ

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ

*ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ* *ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದಾಗ ಹೃದಯಾಘಾತದಿಂದ ಸಾವು* *ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಕೆ.ಶಿವರಾಂ ಪುತ್ರಿ* ಬೆಂಗಳೂರು ಪ್ರಜಾಕಿರಣ.ಕಾಮ್ : ವಿದೇಶ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಸ್ಪಂದನಾ ಅವರ ಸಾವು ಕನ್ನಡ ಸಿನಿಮಾರಂಗದಲ್ಲಿ ಅಕ್ಷರಶಃ ಬರಸಿಡಿಲು ಬಡಿದಂತಾಗಿದೆ‌. ವರನಟ ಡಾ. ರಾಜಕುಮಾರ ಅವರ ಕುಟುಂಬಕ್ಕೆ ಮತ್ತೊಂದು ಆಘಾತ ಉಂಟು ಮಾಡಿದೆ. ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಕೆ.ಶಿವರಾಂ […]

ಸಿನಿಮಾ

ಪುಟಾಣಿ ಆನೆಗೆ ನಿತ್ಯ ಸ್ನಾನ, ಹಾಲು, ವಾಕಿಂಗ್, ಹುಲ್ಲು ತಿನ್ನಿಸುವ ಕಾವಾಡಿ

ಬಿಳಿಗಿರಿ ಶ್ರೀನಿವಾಸ ಆಸ್ಕರ್ ಪ್ರಶಸ್ತಿ ಪುರಸ್ಕೃತ ಸಾಕ್ಷ್ಯ ಚಿತ್ರ ದಿ ಎಲೆಫೆಂಟ್ ವಿಸ್ಪರ್ರ್ಸ್ ಕಥೆ ಏನೆಂಬುದು ಎಲ್ಲರಿಗೂ ಗೊತ್ತೆ ಇದೆ. ಅದೇ ರೀತಿಯ ನೈಜ ಸಂಗತಿಗೆ ಚಾಮರಾಜನಗರ ಜಿಲ್ಲೆಯ ಬಂಡೀಪುರದದ ರಾಮಾಪುರ ಆನೆ ಕ್ಯಾಂಪ್ ಸಾಕ್ಷಿಯಾಗಿದೆ ತಬ್ಬಲಿಯಾಗಿದ್ದ ಆನೆ ಮರಿಯೊಂದನ್ನು ಸಾಕಿ ಸಲಹುತ್ತಿದ್ದಾರೆ ಇಲ್ಲಿನ ರಾಜು ರಮ್ಯ ಎಂಬ ಕಾವಾಡಿ ದಂಪತಿ   ಹೌದು ಬಂಡೀಪುರ ಹುಲಿಸಂರಕ್ಷಿತ ಪ್ರದೇಶ ನುಗು ಅರಣ್ಯ ವಲಯದಲ್ಲಿ ಮರಿಯಾನೆಯೊಂದು ತಾಯಿಯಿಂದ ಬೇರ್ಪಟ್ಟಿತ್ತು. ತಾಯಿ ಆನೆ ಬಳಿ ಸೇರಿಸಲು ಅರಣ್ಯ ಸಿಬ್ಬಂದಿ ಸತತ […]

ಸಿನಿಮಾ

ಧಾರವಾಡದಲ್ಲಿ ಪಠಾಣ್ ಹಿಂದಿ ಚಿತ್ರದ ಪೋಸ್ಟರ್ ಹರಿದ ಬಜರಂಗದಳದ ಕಾರ್ಯಕರ್ತರು….!

ಧಾರವಾಡ ಪ್ರಜಾಕಿರಣ.ಕಾಮ್ : ನಗರದ ಸಂಗಮ್ ಚಿತ್ರಮಂದಿರದಲ್ಲಿ ಅಳವಡಿಸಿದ್ದ ಪಠಾಣ್ ಹಿಂದಿ ಚಿತ್ರದ ಪೋಸ್ಟರ್ ಗಳನ್ನು ಬಜರಂಗದಳದ ಕಾರ್ಯಕರ್ತರು ಹರಿದು ಹಾಕಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಬಾಲಿವುಡ್ ನಟ ಶಾರೂಕ್ ಖಾನ್, ನಟಿ ದೀಪಿಕಾ ಪಡುಕೋಣೆ ಅಭಿಯನದ ಪಠಾಣ್ ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗಲಿದೆ. ಈ ಹಿನ್ನೆಲೆ ಚಿತ್ರಮಂದಿರದಲ್ಲಿ ಚಿತ್ರದ ದೊಡ್ಡ ಪೋಸ್ಟರ್‌ ಅಳವಡಿಸಲಾಗಿತ್ತು. ಇಲ್ಲಿಗೆ ಬಂದ ಬಜರಂಗದಳದ ಕಾರ್ಯಕರ್ತರು, ಚಿತ್ರದ ಬೇಷರಮ್ ರಂಗ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಹಾಕಿ […]

ಸಿನಿಮಾ

ಸುಗಮ ಸಂಗೀತ ಕ್ಷೇತ್ರಕ್ಕೆ ಶಿವಮೊಗ್ಗ ಸುಬ್ಬಣ್ಣ ಕೊಡುಗೆ ಅಪಾರ

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು prajakiran. com ಆಗಸ್ಟ್ 12 :ಸುಗಮ ಸಂಗೀತ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದೊಂದಿಗೆ ಪ್ರತಿಕ್ರಿಯೆ ನೀಡಿದರು. ಶಿವಮೊಗ್ಗ ಸುಬ್ಬಣ್ಣ ಕರ್ನಾಟಕ ಕಂಡ ಅತ್ಯಂತ ಶ್ರೇಷ್ಠ ಹಾಗೂ ಹಿರಿಯ ಕಲಾವಿದರು. ಶಿವಮೊಗ್ಗ ಸುಬ್ಬಣ್ಣ ಅವರ ನಿಧನ ದು:ಖ ತಂದಿದೆ. ಅವರ ಸಾಧನೆ ಬಹಳ ದೊಡ್ಡದು. ವಿಶೇಷವಾಗಿ […]

ಸಿನಿಮಾ

ವೂಟ್‍ ನ ಒಟಿಟಿಯಲ್ಲಿ ಕಿಚ್ಚ ಸುದೀಪ ಅವರ ಬಿಗ್ ಬಾಸ್ ಮೊದಲ ಆವೃತ್ತಿ ಆಗಸ್ಟ್ ನಲ್ಲಿ

ಬೆಂಗಳೂರು prajakiran.com : ವಯಾಕಾಂ18ರ ಮುಂಚೂಣಿಯ ಆನ್-ಡಿಮ್ಯಾಂಡ್ ಸ್ಟ್ರೀಮಿಂಗ್ ಪ್ಲಾಟ್‍ಫಾರಂ ವೂಟ್ 8 ಸೀಸನ್‍ಗಳಿಂದ ಅಭೂತಪೂರ್ವ ಯಶಸ್ಸು ಗಳಿಸಿದ ಬಿಗ್ ಬಾಸ್ ಕನ್ನಡದ ಒಟಿಟಿ ಆವೃತ್ತಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಕನ್ನಡದ ಖ್ಯಾತ ನಟ `ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ ಈ ಕಾರ್ಯಕ್ರಮವನ್ನು ಹೊಚ್ಚಹೊಸ ಉತ್ಸಾಹಕರ ಮಾದರಿಯಲ್ಲಿ ಆಯೋಜಿಸಲಿದೆ. ಈ ಕಾರ್ಯಕ್ರಮ ಪ್ರಾರಂಭ ಕುರಿತು ಕಿಚ್ಚ ಸುದೀಪ, “ಉತ್ಸಾಹಕರ 8 ಋತುಗಳನ್ನು ಆಯೋಜಿಸಿದ ನಂತರ ಬಿಗ್ ಬಾಸ್ ಕನ್ನಡ ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಪಡೆದಿದೆ. ಈ […]

ಸಿನಿಮಾ

ಕೆಜಿಎಫ್-2 ಸಿನಿಮಾ ನೋಡುತ್ತಿದ್ದಾಗ ಪ್ರೇಕ್ಷಕನೊಬ್ಬ ಮತ್ತೊಬ್ಬ ಪ್ರೇಕ್ಷಕನಿಗೆ ಗುಂಡು ಹಾರಿಸಿ ಪರಾರಿ

ಹಾವೇರಿ (ಶಿಗ್ಗಾಂವಿ) prajakiran.com : ಬಾಲಿವುಡ್ ಹಾಗೂ ಹಾಲಿವುಡ್ ಸಿನಿಮಾ ಮಾದರಿಯಲ್ಲಿ ಸದ್ದು ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಸಿನಿಮಾ ನೋಡುತ್ತಿದ್ದಾಗ ಪ್ರೇಕ್ಷಕನೊಬ್ಬ ಮತ್ತೊಬ್ಬ ಪ್ರೇಕ್ಷಕನಿಗೆ ಗುಂಡು ಹಾರಿಸಿರುವ ಪ್ರಕರಣ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ. ಶಿಗ್ಗಾಂವಿಯ ರಾಜೇಶ್ವರಿ ಥೇಟರ್ ನಲ್ಲಿ ಮಂಗಳವಾರ ರಾತ್ರಿ ಈ ಘಟನೆ ಸಂಭವಿಸಿದೆ. ಶಿಗ್ಗಾಂವಿ ತಾಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಸಣ್ಣಕಲ್ಲಪ್ಪ ಶಿವಪುರ (28) ಗುಂಡೇಟು ತಿಂದು ಗಾಯಗೊಂಡವ. ಬುಲೆಟ್ ನಿಂದ ಗಾಯಗೊಂಡ ವಸಂತ ನನ್ನ ತುರ್ತು ಚಿಕಿತ್ಸಾ […]

ಸಿನಿಮಾ

ದಿ ಕಾಶ್ಮೀರ ಫೈಲ್ಸ್ ಚಿತ್ರ ಪ್ರದರ್ಶನಕ್ಕೆ ಶೇ.9 ರಾಜ್ಯ ಜಿಎಸ್‌ಟಿ ವಿನಾಯಿತಿ

ಧಾರವಾಡ prajakiran. com ಮಾ.14 : “ದಿ ಕಾಶ್ಮೀರ ಫೈಲ್ಸ್” ಚಲನಚಿತ್ರ ಪ್ರದರ್ಶನಕ್ಕೆ ರಾಜ್ಯ ಸರ್ಕಾರವು ತನ್ನ ಪಾಲಿನ ರಾಜ್ಯ ಜಿಎಸ್‌ಟಿಯನ್ನು ವೀಕ್ಷಕರಿಗೆ ವಿಧಿಸದಿರಲು ಸಿನೆಮಾ ಪ್ರದರ್ಶಕರಿಗರ ಸೂಚಿಸಿದೆ. ಈ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ.ಜಿಲ್ಲೆಯ ಸಿನೆಮಾ,ಮಲ್ಟಿಪ್ಲೆಕ್ಸ್ ಮಂದಿರಗಳ ಮಾಲೀಕರು ಟಿಕೇಟ್‌ನಲ್ಲಿ ಶೇ.9 ರಿಯಾಯಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ. ಮುಖ್ಯಮಂತ್ರಿಯವರ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಸಿನೆಮಾ ಹಾಗೂ ಮಲ್ಟಿಪ್ಲೆಕ್ಸ್ ಮಂದಿರಗಳ ನೊಂದಾಯಿತ […]

ಸಿನಿಮಾ

ಗಾಯನ ನಿಲ್ಲಿಸಿದ ಗಾನ ಕೋಗಿಲೆ ಭಾರತ ರತ್ನ ಲತಾ ಮಂಗೇಶ್ಕರ್…..!

ಮುಂಬೈ prajakiran.com : ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಾನಕೋಗಿಲೆ, ಭಾರತರತ್ನ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಇಹಲೋಕ ತ್ಯಜಿಸಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ಸರು. ಕರೋನಾದಿಂದ ಚೇತರಿಸಿಕೊಂಡರೂ, ದೇಹ ಬಳಲಿತ್ತು. ಹೀಗಾಗಿ ಹಲವು ತಿಂಗಳ ಕಾಲ ಚಿಕಿತ್ಸೆ ಪಡೆದರೂ ಚಿಕಿತ್ಸೆ ಫಲಿಸದೆ ವಿಧಿವಶರಾದರು. ಅವರು ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರಾಗಿದ್ದರು. ಹಿಂದಿ ಚಿತ್ರರಂಗದಲ್ಲಿ ಸಾವಿರಾರು ಹಾಡುಗಳನ್ನು ಹಾಡಿರುವುದಲ್ಲದೆ, ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿಯೂ ಹಾಡುಗಳನ್ನು ಹಾಡಿದ್ದಾರೆ. […]

ಸಿನಿಮಾ

ಹಿರಿಯ ನಟ ಶಿವರಾಂ ಇನ್ನು ನೆನಪು ಮಾತ್ರ…..!

ಹಿರಿಯ ನಟ ಶಿವರಾಂ ಅಗಲಿಕೆ ಸಿಎಂ ಸೇರಿ ಚಿತ್ರರಂಗದ ಗಣ್ಯರ ಕಂಬನಿ ಬೆಂಗಳೂರು prajakuran.com : ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರು ಶನಿವಾರ ವಿಧಿವಶರಾದರು. ಅವರು ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು. ಕನ್ನಡ ಚಿತ್ರರಂಗಕ್ಕೆ ಶಿವರಾಂ ಅವರ ಕೊಡುಗೆ ಅನನ್ಯ. ಆರು ದಶಕಗಳ ಸುದೀರ್ಘ ವೃತ್ತಿ ಜೀವನದಲ್ಲಿ ಸಹಾಯಕ ನಿರ್ದೇಶಕರಾಗಿ, ನಿರ್ಮಾಪಕರಾಗಿ, ನಟರಾಗಿ ಕಾರ್ಯನಿರ್ವಹಿಸಿದ್ದಾರೆ. ಪುಟ್ಟಣ್ಣ ಕಣಗಾಲ್ ನಿರ್ದೇಶನದ ಶರಪಂಜರ, ಶುಭ […]

ಸಿನಿಮಾ

ಯುವರತ್ನ’ನಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ : ಸಿಎಂ ಘೋಷಣೆ

ಪುನೀತ್ ಚಾರಿತ್ರ್ಯವೇ ಒಂದು ಚರಿತ್ರೆ – ಬಸವರಾಜ ಬೊಮ್ಮಾಯಿ ಬೆಂಗಳೂರು prajakiran.com ನ 16 : ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು. ಅವರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಪುನೀತ್ ರಾಜ್‌ಕುಮಾರ್‌ರವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ಘೋಷಣೆ ಮಾಡಿದ ಮುಖ್ಯಮಂತ್ರಿಗಳು, ವಿವಿಧ ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ನೀಡುವ ಬಗ್ಗೆ […]