ಸಿನಿಮಾ

ಮತ್ತೆ ಬಿಗ್ ಬಾಸ್ ಪುನರ್ ಆರಂಭ : ಪರಮೇಶ್ವರ್ ಗುಂಡ್ಕಲ್

ಬೆಂಗಳೂರು prajakiran.com: ಕೋವಿಡ್ ಎರಡನೇ ಅಲೆಯ ಲಾಕ್‌ಡೌನ್ ನಿಂದಾಗಿ ಅರ್ಧಕ್ಕೆ ನಿಂತುಹೋಗಿದ್ದ ಕನ್ನಡದ ಬಿಗ್‌ಬಾಸ್ ಶೋ ಇದೀಗ ಪುನಾರಂಭಗೊಳ್ಳುತ್ತಿದೆ. ಈ ಬಗ್ಗೆ ಕಲರ್ಸ್​ ಕನ್ನಡದ ಬ್ಯುಸಿನೆಸ್​ ಹೆಡ್​ ಪರಮೇಶ್ವರ್​ ಗುಂಡ್ಕಲ್ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಹಿತಿ ನೀಡಿದ್ದಾರೆ. “ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ. ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ […]

ಸಿನಿಮಾ

ಬಿಗ್‌ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರಗೆ ನ್ಯೂಯಾರ್ಕ್ ಇಂಡಿಯನ್ ಪ್ರಶಸ್ತಿ

ಬೆಂಗಳೂರು prajakiran.com : ಬಿಗ್‌ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ ಅವರಿಗೆ ಪಿಂಕಿ ಎಲ್ಲಿ ? ಎಂಬ ಕನ್ನಡದ ಚಿತ್ರದಲ್ಲಿನ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಂದಿದೆ. ಅಷ್ಟೇ ಅಲ್ಲದೇ ‘ಪಿಂಕಿ ಎಲ್ಲಿ?’ ಚಿತ್ರಕ್ಕೆ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಕೂಡ ಲಭಿಸಿದೆ. ಎನ್‌ವೈಐಎಫ್‌ಎಫ್‌ ಭಾರತದಲ್ಲಿ ಅಥವಾ ಭಾರತದ ಬಗ್ಗೆ ಮಾಡಿದ ವೈಶಿಷ್ಟ್ಯ, ಸಾಕ್ಷ್ಯಚಿತ್ರ ಮತ್ತು ಕಿರುಚಿತ್ರಗಳನ್ನು ಪ್ರದರ್ಶಿಸಲು ಮೀಸಲಾಗಿರುವ ಚಿತ್ರೋತ್ಸವವಾಗಿದೆ. ‘ಪಿಂಕಿ ಎಲ್ಲಿ?’ ತಾಯಿ ಮಗಳು ಪಿಂಕಿ ಮತ್ತು ದಾದಿಯನ್ನು ಕಂಡುಹಿಡಿಯುವ ಕಥೆಯನ್ನು […]

ಸಿನಿಮಾ

ಸಕಲ ಸರ್ಕಾರಿ ಗೌರವದೊಂದಿಗೆ ಸಂಚಾರಿ ವಿಜಯ್ ಅಂತ್ಯಕ್ರಿಯೆ

ಚಿಕ್ಕಮಗಳೂರು Prajakiran.com : ನಟ ಸಂಚಾರಿ ವಿಜಯ್ ಪಾರ್ಥಿವ ಶರೀರ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲಾ ಕಡೂರಿನ ಪಂಚನಹಳ್ಳಿಯ ಸ್ನೇಹಿತ ರಘು ಅವರ ತೋಟದ ಮಣ್ಣಿನಲ್ಲಿ ಲೀನವಾಯಿತು. ಅಂತ್ಯಕ್ರಿಯೆ ನೆರವೇರಿಸುವ ಮುನ್ನ ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಪೊಲೀಸರು ಗೌರವ ನಮನ ಸಲ್ಲಿಸಿದರು. ಸರಕಾರಿ ಗೌರವದ ಬಳಿಕ ವೀರಶೈವ ಲಿಂಗಾಯತ ಧಾರ್ಮಿಕ ವಿಧಿ ವಿಧಾನದ ಪ್ರಕಾರ ವಿಭೂತಿ, ಬಿಲ್ವಪತ್ರೆ ಬಳಸಿ ಪೂಜೆ ಮಾಡಿ ಆನಂತರ ಅಂತ್ಯಕ್ರಿಯೆ ನಡೆಸಲಾಯಿತು. ಕುಪ್ಪೂರು ಯತೀಶ್ವರ ಶಿವಾಚಾರ್ಯ ಶ್ರ‍ಿಗಳ […]

ಸಿನಿಮಾ

ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ : ಇನ್ನು ಜೀವಂತ, ಆದರೆ ಪರಿಸ್ಥಿತಿ ಗಂಭೀರ

ಸಂಚಾರಿ ವಿಜಯ್ ಆರೋಗ್ಯ ಕುರಿತು ವೈದ್ಯರ ಸ್ಪಷ್ಟನೆ ಬೆಂಗಳೂರು prajakiran.com : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರವಾಗಿದ್ದು, ಅಪಘಾತವಾದ ಪರಿಣಾಮ ಮಿದುಳಿಗೆ ಊತ ಉಂಟಾಗಿದೆ. ಇದು ಬೈನ್ ಫೇಲ್ಯೂರ್‌ಗೆ ಕಾರಣವಾಗಬಹುದು ಎಂದು ಡಾ.ಅರುಣ್ ನಾಯ್ಕ್ ಹೇಳಿದ್ದಾರೆ. ಸಂಚಾರಿ ವಿಜಯ್ ಆಸ್ಪತ್ರೆಗೆ ದಾಖಲಾಗಿ 36 ಗಂಟೆಗಳು ಕಳೆದಿವೆ. ಅವಾಗಿಂದಲೂ ವಿಜಯ್ ಸ್ಥಿತಿ ಗಂಭೀರವಾಗಿಯೇ ಇದೆ. ಅವರ ಮಿದುಳು ನಿಷ್ಕ್ರಿಯವಾಗುವ ಹಂತ ತಲುಪುತ್ತಿದೆ. ನಿನ್ನೆ ರಾತ್ರಿಯಿಂದ ಉಸಿರಾಟವು ನಿಲ್ಲಿಸಿದ್ದು, ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದಾರೆ. ಸಂಜೆ […]

ಸಿನಿಮಾ

ನಟ ಸಂಚಾರಿ ವಿಜಯ ಇನ್ನು ನೆನಪು ಮಾತ್ರ

ಬೆಂಗಳೂರು prajakiran.com : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೆದುಳಿನಲ್ಲಿ ರಕ್ತ ಸ್ರಾವ ಆಗಿದ್ದರಿಂದ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅಲ್ಲದೆ, ತೊಡೆಯ ಭಾಗದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸ್ಕಿಡ್ ಆಗಿ ಬೈಕ್ ಅಪಘಾತ ಆಗಿದ್ದರಿಂದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಶನಿವಾರ ರಾತ್ರಿ ಗೆಳೆಯನ ಮನೆಯಲ್ಲಿ ಊಟ ಮಾಡಿಕೊಂಡು ಬೈಕಿನಲ್ಲಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿತ್ತು. ವಿಜಯ್ ಬೈಕ್ ಹಿಂಬದಿಯಲ್ಲಿ ಕುಳಿತಿದ್ದರು. ಇದರಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಸಂಚಾರಿ ವಿಜಯ ಅವರು 2011ರಲ್ಲಿ […]

ಸಿನಿಮಾ

ಸ್ಯಾಂಡಲ್​ವುಡ್​ನ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ನಿಧನ

ಬೆಂಗಳೂರು prajakiran.com : ಸ್ಯಾಂಡಲ್​ವುಡ್​ನ ಹಿರಿಯ ನಿರ್ಮಾಪಕ ಹಾಗೂ ವಿತರಕರಾಗಿದ್ದ ಕೆ.ಸಿ.ಎನ್ ಚಂದ್ರಶೇಖರ್​ ನಿಧನರಾಗಿದ್ದಾರೆ. ಅವರು ಕಳೆದ ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸೋಮವಾರ ಕೊನೆಯುಸಿರೆಳೆದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಚಂದ್ರು ಅವರು ವರನಟ ಡಾ. ರಾಜ್ ಕುಮಾರ ನಟಿಸಿರುವ ಹುಲಿ ಹಾಲಿನ ಮೇವು, .ಬಬ್ರುವಾಹನ ಸೇರಿದಂತೆ ಹಲವು ಸಿನಿಮಾ ನಿರ್ಮಾಣದ ಮೂಲಕ ನಾಡಿನ ಮನೆ ಮಾತಾಗಿದ್ದರು. ಕರ್ನಾಟಕ ಫಿಲಂ ಛೇಂಬರ್ ಹಾಗೂ SIFCCRIPನ ಅಧ್ಯಕ್ಷರಾಗಿ ಸೇವೆ […]

ಸಿನಿಮಾ

ಬೈಕ್ ಅಪಘಾತ : ನಟ ಸಂಚಾರಿ ವಿಜಯ ಪರಿಸ್ಥಿತಿ ಗಂಭೀರ

ಬೆಂಗಳೂರು prajakiran.com : ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ ನಿನ್ನೆ ರಾತ್ರಿ ಗೆಳೆಯನ ಜೊತೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ನಟ ವಿಜಯನನ್ನು ಬನ್ನೇರುಘಟ್ಟ ಬಳಿಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೆದುಳಿನಲ್ಲಿ ರಕ್ತ ಸ್ರಾವ ಆಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ. ತೊಡೆಯ ಭಾಗದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮುಂದಿನ 24 ಗಂಟೆಗಳ ಕಾಲ ಆರೋಗ್ಯ ಮೇಲೆ ನಿಗಾವಹಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಬೈಕ್‌ ನ ಹಿಂಬದಿಯಲ್ಲಿ […]

ಸಿನಿಮಾ

ಕೊರೋನಾಗೆ ಬಲಿಯಾದ ಹಿರಿಯ ನಟ, ಪತ್ರಕರ್ತ ಸುರೇಶ್ಚಂದ್ರ ಲಿಂಗೇನಹಳ್ಳಿ…!

ಬೆಂಗಳೂರು prajakiran.com : ನಾಡಿನ ಹಿರಿಯ ನಟ ಹಾಗೂ ಹಲವು ದಶಕಗಳ ಕಾಲ ಪತ್ರಕರ್ತನಾಗಿ ತಮ್ಮದೆ ಆದ ವಿಶಿಷ್ಠವಾದ ಛಾಪು ಮೂಡಿಸಿದ್ದ ಸುರೇಶ್ಚಂದ್ರ ಲಿಂಗೇನಹಳ್ಳಿ ವಿಧಿವಶರಾದರು. ಅವರು ಕಳೆದ ೧೫ ದಿನಗಳ ಹಿಂದೆ ಕರೋನಾ ಪಾಸಿಟಿವ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಇಹಲೋಕ ತ್ಯಜಿಸಿದರು. ಅವರು ಚೆಲುವಿನ ಚಿತ್ತಾರ ಸೇರಿದಂತೆ ಹತ್ತು ಹಲವು ಸಿನಿಮಾಗಳಲ್ಲಿ ಪೋಷಕ ನಟ, ವಿಲನ್ ಪಾತ್ರದಲ್ಲಿ ಅಭಿನಯಿಸಿದ್ದರು. ನಟನೆ ಜೊತೆಗೆ ಪತ್ರಿಕೆಯಲ್ಲೂ ಸೇವೆ ಸಲ್ಲಿಸುತ್ತಿದ್ದ ಸುರೇಶ್ಚಂದ್ರ ಅವರನ್ನು ಅಂತ್ಯಕ್ರಿಯೆಯನ್ನು […]

ಸಿನಿಮಾ

ಕೊರೋನಾ ಸಂಕಷ್ಟದಲ್ಲಿರುವ ಜನರಿಗೆ ರಾಧಿಕಾ ಪಂಡಿತ್‌ ಭರವಸೆ ಮಾತುಗಳು

ಬೆಂಗಳೂರು Prajakiran.com : ಸ್ಯಾಂಡಲ್ ವುಡ್ ನಟಿ ರಾಧಿಕಾ ಪಂಡಿತ್‌, ಕೋವಿಡ್‌ನಿಂದ ಸಂಕಷ್ಟದಲ್ಲಿರುವವರಿಗೆ, ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ, ಭವಿಷ್ಯದ ಬಗ್ಗೆ ಆತಂಕ ಮತ್ತು ನೋವಿನಲ್ಲಿರುವವರಿಗೆ ಧೈರ್ಯ ತುಂಬುವ ಮಾತುಗಳನ್ನು ಆಡಿದ್ದಾರೆ. ತಮ್ಮ ಇನ್ ಸ್ಟಾಗ್ರಾಮ್‌ ಖಾತೆಯಲ್ಲಿ “ಇದು ತುಂಬ ಕಷ್ಟದ ಸಮಯವಾಗಿದೆ. ನಾವೆಲ್ಲರೂ ನಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರ ಸಂಕಟ ಮತ್ತು ದುಃಖಕ್ಕೆ ಸಾಕ್ಷಿಯಾಗಿದ್ದೇವೆ. ಎಲ್ಲರೂ ಭಯದಲ್ಲಿಯೇ ಜೀವನ ಸಾಗಿಸುತ್ತಿದ್ದೇವೆ. ಮಾನಸಿಕವಾಗಿ ನೋವು ಅನುಭವಿಸುತ್ತಿದ್ದೇವೆ. ಭವಿಷ್ಯ ಏನು ಎನ್ನುವುದು ನಮಗೆ ತಿಳಿದಿಲ್ಲ. ಆದರೆ ಇಂಥ ಪರಿಸ್ಥಿತಿಯಲ್ಲೂ […]

ಸಿನಿಮಾ

ಸಿನಿಮಾ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ಪರಿಹಾರ : ನಟ ಪುನೀತ್ ರಾಜ್‍ಕುಮಾರ್

ಬೆಂಗಳೂರು prajakiran.com : ಮಹಾಮಾರಿ ಕೊರೋನಾ ದೋಂಕಿನಿಂದ ಇಡೀ ದೇಶವೇ ಸಂಕಷ್ಟದಲ್ಲಿದೆ. ಅಲ್ಲದೆ ಜನರ ಮನರಂಜನೆಗೆ ಕಷ್ಟಟಡುವ ಚಿತ್ರರಂಗದ ಜನರಿಂದು ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಅಂತವರಿಗೆ ದೊಡ್ಮನೆ ಹುಡ್ಗ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಕೂಡ ಸಹಾಯಕ್ಕೆ ನಿಂತಿದ್ದು, ಸಿನಿಮಾ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ನೀಡುವ ಘೋಷಣೆ ಮಾಡಿದ್ದಾರೆ. ಸಂಕಷ್ಟದಲ್ಲಿರುವ ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಲ್ಲುತ್ತಿದ್ದೇನೆ. 10 ಲಕ್ಷ ರೂಪಾಯಿ ಹಣದಲ್ಲಿ ಸಿನಿಮಾ ಇಂಡಸ್ಟ್ರಿಯ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವಿತರಿಸಲು ಸೂಚಿಸಿದ್ದೇನೆ […]