ಧಾರವಾಡ ಪ್ರಜಾಕಿರಣ.ಕಾಮ್ : ಲಾರಿ ಮತ್ತು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಇಟಿಗಟ್ಟಿ ಬಳಿ ಹು-ಧಾ ಬೈಪಾಸ್ ರಸ್ತೆಯಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಧಾರವಾಡ ಲಕ್ಷ್ಮೀ ಸಿಂಗನಕೇರಿ ನಿವಾಸಿಗಳಾದ ಭೀಮರಾವ ಶಂಕರ ಗೋಸಾವಿ (38) ಮತ್ತು ಏಕನಾಥ ರಡ್ಡಿ ಗೋಸಾವಿ (42) ಮೃತಪಟ್ಟವರು. ಬೆಳಗ್ಗೆ ಧಾರವಾಡ ಕಡೆಯಿಂದ ಹುಬ್ಬಳ್ಳಿಯತ್ತ ಇಬ್ಬರೂ ಬೈಕ್ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ ಎಂದು ಗೊತ್ತಾಗಿದೆ. ಸಿಪಿಐ ಪಂಚಯ್ಯ […]
ಅಪರಾಧ
ಧಾರವಾಡದ ಬೇಲೂರು ಬಳಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ತಾಯಿ-ಮಗು ಸಾವು…..!
ಧಾರವಾಡ ಪ್ರಜಾಕಿರಣ.ಕಾಮ್ : ಬೈಕ್ ಮೇಲೆ ಹೋಗುತ್ತಿದ್ದ ದಂಪತಿಗಳ ವಾಹನಕ್ಕೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ತಾಯಿ-ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಸಂಜೆ ನಡೆದಿದೆ. ಧಾರವಾಡದಿಂದ ಬೆಳಗಾವಿ ಕಡೆಗೆ ಹೊರಟಿದ್ದ ಬೈಕ್ ಗೆ ಧಾರವಾಡದ ಬೇಲೂರು ಬಳಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ತಾಯಿ ಹಾಗೂ ಒಂದು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಚಾಲನೆ ಮಾಡುತ್ತಿದ್ದ ತಂದೆಗೆ […]
ಧಾರವಾಡದ ಗೌತಮ್ ಮಿಲ್ ನಲ್ಲಿ ಆಕಸ್ಮಿಕ ಬೆಂಕಿ: 50 ಲಕ್ಷಕ್ಕೂ ಅಧಿಕ ಹಾನಿ….!?
50 ಲಕ್ಷಕ್ಕೂ ಅಧಿಕ ಮೌಲ್ಯದ ಕಟಗಿಗಳು ಸುಟ್ಟು ಕರಕಲು…! ಧಾರವಾಡ ಪ್ರಜಾಕಿರಣ.ಕಾಮ್ : ಇಲ್ಲಿನ ಮಣಕಿಲ್ಲಾದಲ್ಲಿರುವ ಕೃಷ್ಣ ಬೆಳಗಲಿ ಅವರ ಮಾಲಿಕತ್ವದ ಗೌತಮ್ ಮಿಲ್ ನಲ್ಲಿ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 50 ಲಕ್ಷಕ್ಕೂ ಅಧಿಕ ಮೌಲ್ಯದ ಸಾಗವಾನಿ ಸೇರಿದಂತೆ ವಿವಿಧ ಮರದ ಕಟಗಿಗಳು ಸುಟ್ಟು ಕರಕಲಾಗಿವೆ. ಸುಮಾರು 9 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಲು ಹಲವು ಗಂಟೆಗಳ ಕಾಲ ಹರಸಾಹಸ ನಡೆಸಿದರು. ಸ್ಥಳೀಯರು, ಪೊಲೀಸರ ಸಹಾಯದಿಂದ ಮತ್ತು ಹತ್ತು ಹಲವು ಅಗ್ನಿಶಾಮಕ ದಳದ ಸಿಬ್ಬಂದಿಯ […]
ಧಾರವಾಡದ ನಿಗದಿಯ ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವು….!
ಧಾರವಾಡ ಪ್ರಜಾಕಿರಣ. ಕಾಮ್ : ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ಈಜಲು ಬಾರದೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಅಣ್ಣಪ್ಪ ದಾಸನಕೊಪ್ಪ (27) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ನಿಗದಿ ಗ್ರಾಮದ ಕೆರೆಯಲ್ಲಿ ಹೋಳಿ ಹಬ್ಬದ ನಿಮಿತ್ತ ಬಣ್ಣ ಆಡಿ ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಗೊತ್ತಾಗಿದೆ. ಧಾರವಾಡ ಜಿಲ್ಲೆಯ ಅಳ್ನಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ. […]
ಧಾರವಾಡದಲ್ಲಿ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಯುವಕ ಸಾವು…!
ಧಾರವಾಡ ಪ್ರಜಾಕಿರಣ.ಕಾಮ್ : ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ಮಧ್ಯ ರಾತ್ರಿ ಹುಬ್ಬಳ್ಳಿ ರಸ್ತೆಯಲ್ಲಿ ನವಲೂರ ಗ್ರಾಮದ ಬಳಿ ಸಂಭವಿಸಿದೆ. ಕಾರ್ತಿಕ ವಿರೂಪಾಕ್ಷ ಹಲಕರ್ಣಿಮಠ (20) ಮೃತಪಟ್ಟ ಯುವಕ. ಸಂದೇಶ ಸುಭಾಸ ಹೊಸಮನಿ ತೀವ್ರವಾಗಿ ಗಾಯಗೊಂಡ ಯುವಕನಾಗಿದ್ದು, ಆತನಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿ ಕಡೆಯಿಂದ ಧಾರವಾಡದತ್ತ ಬರುತ್ತಿದ್ದಾಗ ಮಧ್ಯರಾತ್ರಿ1 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಮೃತ ಯುವಕ ಕಾರ್ತಿಕ ಪತ್ರಕರ್ತ […]
ಹುಬ್ಬಳ್ಳಿಯ ಬೀಜದ ವ್ಯಾಪಾರಿ ಮನೆಯಲ್ಲಿದ್ದ 3 ಕೋಟಿ ಅಕ್ರಮ ಹಣ ಜಪ್ತಿ….!
ಹುಬ್ಬಳ್ಳಿ-ಧಾರವಾಡ ಪ್ರಜಾಕಿರಣ.ಕಾಮ್ : ಹುಬ್ಬಳ್ಳಿ -ಧಾರವಾಡ ಅವಳಿ ನಗರದ ಸಿಸಿಬಿ ಪೊಲೀಸರು ಶನಿವಾರ ಭರ್ಜರಿ ಬೇಟೆಯಾಡಿದ್ದು, ಬೀಜದ ವ್ಯಾಪಾರಿಯೊಬ್ಬರು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 3 ಕೋಟಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಬಿಯ ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ನೇತೃತ್ವದ ತಂಡ ಭವಾನಿನಗರ ಬಳಿಯ ಬೀಜದ ವ್ಯಾಪಾರಿ ರಮೇಶ ಬೋನಗೇರಿ ಎಂಬುವರ ಮನೆಯ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದೆ. ಈ ವೇಳೆ ಮನೆಯಲ್ಲಿ ಯಾವುದೇ ದಾಖಲೆಗಳಿಲ್ಲದ ಸುಮಾರು 3 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಬಿ ಸಿಬ್ಬಂದಿಗಳು […]
3 ಲಕ್ಷ ಮೌಲ್ಯದ 30 ಮೊಬೈಲ್ ಪೋನ್ ಪತ್ತೆ ಮಾಡಿದ ಹುಬ್ಬಳ್ಳಿ-ಧಾರವಾಡ ಪೊಲೀಸ್
ಹುಬ್ಬಳ್ಳಿ-ಧಾರವಾಡ ಪ್ರಜಾಕಿರಣ.ಕಾಮ್ : ಕಳೆದುಕೊಂಡಿದ್ದ ಮೊಬೈಲ್ ಫೋನ್ ಗಳ ಪತ್ತೆಗಾಗಿ ಇತ್ತೀಚೆಗೆ ಜಾರಿ ತಂದಿದ್ದ ನೂತನ ಇ-ಪೋರ್ಟಲ್ ( ಇ-ಸ್ಪಂದನ) ಮೂಲಕ ಅಂದಾಜು 3 ಲಕ್ಷ ರೂ ಮೌಲ್ಯದ 30 ಮೊಬೈಲ್ ಪೋನ್ ಗಳನ್ನು ಪತ್ತೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮಣಗುಪ್ತಾ ತಿಳಿಸಿದರು. ಅವರು ಶನಿವಾರ ಪೊಲೀಸ್ ಆಯುಕ್ತರ ಕಾರ್ಯಾಲಯದಲ್ಲಿ ಈ ಕುರಿತು ಮಾತನಾಡಿದರು. ಇಂದು ಅವುಗಳ ಮೂಲ ವಾರಸುದಾರರಿಗೆ ಹಿಂದಿರುಗಿಸಲಾಗಿದೆ ಎಂದು ಅವರು ವಿವರಿಸಿದರು. ಸಾರ್ವಜನಿಕರು ಈ ನೂತನ ಉಪಕ್ರಮದ ಸದುಪಯೋಗ […]
ಧಾರವಾಡದ ಮರೆವಾಡ ಬಳಿ ಸೇನೆಯಲ್ಲಿ ಕೆಲಸ ಮಾಡುವ ಯುವಕನ ಮೇಲೆ ಕುಡಿದ ಅಮಲಿನಲ್ಲಿದ್ದ ಯುವಕರಿಂದ ಮನಬಂದಂತೆ ಥಳಿತ….!?
ಧಾರವಾಡ ಪ್ರಜಾಕಿರಣ.ಕಾಮ್ : ರಾಷ್ಟ್ರದ ರಾಜಧಾನಿ ನವದೆಹಲಿಯ ಭಾರತೀಯ ಸೇನೆಯ ವೈದ್ಯಕೀಯ ವಿಭಾಗದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿರುವ ನಾಗರಾಜ ಹೆಬ್ಬಾಳ ಮೇಲೆ ಭಾನುವಾರ ಸಂಜೆ ಧಾರವಾಡದ ಮರೆವಾಡ ಮಹಾದ್ವಾರದ ಬಳಿ ಮಾರಣಾಂತಿಕ ಹಲ್ಲೆ ನಡೆದಿದೆ. ರಜೆ ಮೇಲೆ ಧಾರವಾಡದ ಹೆಬ್ಬಳ್ಳಿ ಗ್ರಾಮಕ್ಕೆ ಆಗಮಿಸಿದ್ದ ನಾಗರಾಜ ಹೆಬ್ಬಾಳ ಭಾನುವಾರ ಸಂಜೆ ಹೆಬ್ಬಳ್ಳಿಯಿಂದ ಹೆಂಡತಿ ಹಾಗೂ ತನ್ನ ಇಬ್ಬರು ಮಕ್ಕಳನ್ನು ಬೆಳಗಾವಿಯ ಗೋಕಾಕ ಸಮೀಪದ ಸುಲದಾಳಕ್ಕೆ ತವರು ಮನೆಗೆ ಬಿಡಲು ಹೋಗುತ್ತಿದ್ದಾಗ ಮರೆವಾಡ ಬಳಿ ಈ ಘಟನೆ […]
ಧಾರವಾಡ : ಪಾದಚಾರಿ ಉಳಿಸಲು ಹೋಗಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಟ್ರಕ್ ಗೆ ಗುದ್ದಿದ ಕಾರ್ : ಕಾರ್ ನಲ್ಲಿದ್ದ ನಾಲ್ವರು, ಪಾದಚಾರಿ ಸೇರಿ ಐವರು ಸಾವು….!
ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿನ ತೇಗೂರು ಕ್ರಾಸ್ ಬಳಿ ಪಾದಚಾರಿಯನ್ನು ಉಳಿಸಿ ಹೋಗಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಟ್ರಕ್ ಗೆ ಕಾರ್ ವೊಂದು ಗುದ್ದಿದೆ. ಇದರಿಂದಾಗಿ ಕಾರ್ ನಲ್ಲಿದ್ದ ನಾಲ್ವರು ಹಾಗೂ ಪಾದಚಾರಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತಕ್ಕೀಡಾದ ವಾಹನ ಸಂಖ್ಯೆ ಈ ರೀತಿಯಿದೆ. KA 22N 9373 punto. Fiat MH 09 EM 7589. Truck *ಮೃತರ ಹೆಸರುಗಳು* 1)ನಾಗಪ್ಪ ಈರಪ್ಪ ಮುದ್ದೊಜಿ- 29 2)ಮಹಂತೇಶ್ ಬಸಪ್ಪ ಮುದ್ದೊಜಿ- 40 ಅವರಾದಿ. […]
ಹುಬ್ಬಳ್ಳಿಯಲ್ಲಿ ಯುವಕನ ಮೇಲೆ ಕಣ್ಣಿಗೆ ಕಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಲೆ
ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನೇಕಾರನಗರದ ನಾಗರಾಜ ಚಲವಾದಿ ಎಂಬ ಯುವಕನನ್ನು ಆಟೋದಲ್ಲಿ ಬಂದಿದ್ದ ನಾಲ್ಕೈದು ಜನರ ಗುಂಪೊಂದು ಕಣ್ಣಿಗೆ ಕಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದೇ ವೇಳೆ ನಾಗರಾಜ ಜೊತೆಗಿದ್ದ ಇನ್ನೊಬ್ಬನ ಮೇಲೆಯೂ ಕೂಡ ಹಲ್ಲೆಗೆ ಮುಂದಾದಾಗ ಆತ ಅಲ್ಲಿಂದ ತಪ್ಪಿಸಿಕೊಂಡು ಪಾರಾಗಿದ್ದಾನೆ ಎಂದು ತಿಳಿದು […]