ಅಪರಾಧ

ಧಾರವಾಡದಲ್ಲಿ ಯುವಕನಿಂದ ಅಪ್ರಾಪ್ತಳ ಮೇಲೆ ಲೈಂಗಿಕ ದೌರ್ಜನ್ಯ

ಧಾರವಾಡ prajakiran.com : ಯುವಕನಿಂದ ಅಪ್ರಾಪ್ತಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆ ಧಾರವಾಡ ತಾಲೂಕಿನ ಗ್ರಾಮವೊಂದರಲ್ಲಿ ನಿನ್ನೆ ನಡೆದಿದೆ. ಗ್ರಾಮದ ಹುಸೇನಸಾಬ ಮರ್ದಾನಸಾಬ ಬಾಳಣ್ಣವರ ಎಂಬಾತನೇ ದೌರ್ಜನ್ಯ ಎಸಗಿದ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ನಿನ್ನೆ ಸಂಜೆ ಬಹಿರ್ದೆಸೆಗೆ ತೆರಳುತ್ತಿದ್ದ ೯ ವರ್ಷದ ಬಾಲಕಿಯನ್ನು ಎಳೆದುಕೊಂಡು ಹೋಗಿ ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳಲು ಯತ್ನಿಸಿದ್ದ. ಈ ಸಂದರ್ಭದಲ್ಲಿ ಬಾಲಕಿ ಕೂಗಿಕೊಂಡಾಗ ಅಕ್ಕಪಕ್ಕದವರು ಓಡಿ ಬಂದು, ಹುಸೇನಸಾಬನನ್ನು ಥಳಿಸಿ ಯುವತಿಯನ್ನು ರಕ್ಷಿಸಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ. […]

ಅಪರಾಧ

ಟಾಟಾಎಸ್ -ಬುಲೇರೋ ನಡುವೆ ಮುಖಾಮುಖಿ ಡಿಕ್ಕಿ : 7 ಜನ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನ ಗಂಭೀರ

ಬೆಳಗಾವಿ prajakiran.com : ಟಾಟಾಎಸ್ ಹಾಗೂ ಬುಲೇರೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ  ಪರಿಣಾಮ ಸ್ಥಳದಲ್ಲೇ ಎಳು ಜನರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಹತ್ತಿರ ಶುಕ್ರವಾರ ರಾತ್ರಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದಿಂದ ಸುಮಾರು 25 ಕ್ಕೂ ಜನ ಧಾರವಾಡ ಜಿಲ್ಲೆಯ ಮೊರಬ ಗ್ರಾಮದ ಜಮೀನಿನಲ್ಲಿ ಕೆಲಸಕ್ಕೆ ಬಂದಿದ್ದರು. ಧಾರವಾಡದ ಮೊರಬದಿಂದ ರಾಮದುರ್ಗಕ್ಕೆ ವಾಪಸ್ಸು ತೆರಳುವ ವೇಳೆ ಸವದತ್ತಿಯಿಂದ ಧಾರವಾಡಕ್ಕೆ ಹೊರಟಿದ್ದ ಬುಲೇರೊ‌ ವಾಹನಕ್ಕೆ ಟಾಟಾಎಸ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ […]

ಅಪರಾಧ

ಧಾರವಾಡದ ಮೆಹಬೂಬ ನಗರ ಮಾರಣಾಂತಿಕ ಹಲ್ಲೆ ಪ್ರಕರಣ : ಮಚ್ಚು ಬೀಸಿದ್ದ ಭೂಪ ಕೊನೆಗೂ ಅಂದರ್…!

ಧಾರವಾಡ prajakiran.com : ಧಾರವಾಡದಲ್ಲಿ ಹಾಡಹಗಲೇ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಧಾರವಾಡದಲ್ಲಿ ಬುಧವಾರ ಸಂಜೆ ಮೆಹಬೂಬ್ ನಗರದಲ್ಲಿ  ಹಣಕಾಸಿನ ವ್ಯವಹಾರಕ್ಕಾಗಿ ಈ ಮಾರಣಾಂತಿಕ ಹಲ್ಲೆ ನಡೆದಿತ್ತು. ಇದರಿಂದಾಗಿ ಧಾರವಾಡದ ಮೆಹಬೂಬ್ ನಗರ ನಿವಾಸಿ ಹಾಗೂ ಆಟೋ ಡ್ರೈವರ್ ಮಾಬುಲಿ ಹಿರೇಕುಂಬಿ ಎಂಬಾತ ಮಾರಣಾಂತಿಕವಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದ ಮುಕ್ತುಂ ನನ್ನು ಬಂಧಿಸಲಾಗಿದೆ. ಹಣಕಾಸಿನ ವ್ಯವಹಾರದಿಂದ ಬೇಸತ್ತು ಮಚ್ಚಿನಿಂದ ಹಲ್ಲೆ […]

ಅಪರಾಧ

ಗದಗನಲ್ಲಿ ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆ ಮಾಡಿ ರಾತ್ರಿಯಿಡಿ ಶವದೊಂದಿಗೆ ಮಲಗಿದ್ದ ಪತ್ನಿ …..!

ಗದಗ prajakiran.com : ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಲಕ್ಷ್ಮಣ ಪಾಂಡಪ್ಪ ಲಮಾಣಿ (39) ಮೃತ ದುರ್ದೈವಿ. ಈತನ ಪತ್ನಿ ಲಲಿತಾ ಮತ್ತು ಈಕೆಯ ಪ್ರಿಯಕರ ಸೋಮಪ್ಪ ಚೆನ್ನಪ್ಪ ಲಮಾಣಿ ಕೊಲೆ  ಮಾಡಿದ ಆರೋಪಿಗಳು. ರಾತ್ರಿ ಮನೆಯಲ್ಲಿ ಮಲಗಿದ್ದ ಲಕ್ಷ್ಮಣ ಪಾಂಡಪ್ಪ ಅವರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಕಳೆದ ಹಲವು ವರ್ಷಗಳಿಂದ ಲಲಿತಾ, ಸೋಮಪ್ಪ ನಡುವೆ ಅನೈತಿಕ ಸಂಬಂಧ […]

ಅಪರಾಧ

ಗದಗನಲ್ಲಿ ಐಪಿಎಲ್ 20-20 ಕ್ರಿಕೆಟ್ ದಂಧೆಯಲ್ಲಿ ತೊಡಗಿದ್ದ ಐವರ ಸೆರೆ

ಗದಗ prajakiran.com : ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ  ಬುಕ್ಕಿ ಹಾಗೂ ಬೆಟ್ಟಿಂಗ್ ನಡೆಸುತ್ತಿದ್ದ ಐವರನ್ನು ಬಂಧಿಸಿದ ಘಟನೆ ಗದಗನಲ್ಲಿ ನಡೆದಿದೆ. ಬುಧವಾರ ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ರಿಂಗ್ ರಸ್ತೆಯ  ಕಳಸಾಪುರ ರಸ್ತೆಯ ಬಾಲಾಜಿನಗರ ಕ್ರಾಸ್ ಹತ್ತಿರ ಪೊಲೀಸರು ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಿದ್ದಾರೆ. ದಾಳಿ ವೇಳೆ 1,56,320/- ನಗದು ಹಣ ಹಾಗೂ 6 ಮೊಬೈಲ್ ಸಿಕ್ಕಿದ್ದು, ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.  ಈ ಬಗ್ಗೆ ಖಚಿತ ಮಾಹಿತಿ ಮಾಹಿತಿ ಮೇರೆಗೆ ಗದಗ […]

ಅಪರಾಧ

ಧಾರವಾಡದಲ್ಲಿ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ…!

ಧಾರವಾಡ prajakiran.com : ಧಾರವಾಡದಲ್ಲಿ ಹಾಡಹಗಲೇ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬುಧವಾರ ಸಂಜೆ ಮೆಹಬೂಬ್ ನಗರದಲ್ಲಿ ನಡೆದಿದೆ. ಇಬ್ಬರ ನಡುವೆ ಹಣಕಾಸಿನ ವ್ಯವಹಾರಕ್ಕಾಗಿ ಈ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗಿದೆ. ಇದರಿಂದಾಗಿ ಧಾರವಾಡದ ಮೆಹಬೂಬ್ ನಗರ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಮೆಹಬೂಬ್ ನಗರದ ಆಟೋ ಡ್ರೈವರ್ ಮಾಬುಲಿ ಹಿರೇಕುಂಬಿ ಎಂಬಾತನೇ ಮಾರಣಾಂತಿಕವಾಗಿ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾನೆ. ಈತನನ್ನು ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದವನನ್ನು ಮಾಬೂಲಿ ತೋಸಿವಾಲೆ  ಎಂದು […]

ಅಪರಾಧ

ಧಾರವಾಡದ ಕ್ಯಾರಕೊಪ್ಪ ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರ ಸಾವು

ಧಾರವಾಡ prajakiran.com : ಕೆರೆಯಲ್ಲಿ ಬಾಲಕರಿಬ್ಬರು ಮುಳುಗಿ ದುರ್ಮರಣವನ್ನಪ್ಪಿದ್ದ ಘಟನೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಆಕಳು ಮೈ ತೊಳೆಯಲು ಹೋಗಿ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.  ಮೃತ್ಯುಂಜಯ ಕಾಮಧೇನು ಹಾಗೂ ರೋಹಿತ ಪೂಜಾರಿ ಎಂಬ ಬಾಲಕರೇ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸಾವಿಗೀಡಾದ ಈ ಮಕ್ಕಳು 13 ಹಾಗೂ 14 ವರ್ಷದ ಮಕ್ಕಳು ಎಂಬುದು ಗೊತ್ತಾಗಿದೆ. ಇದರಿಂದಾಗಿ ಕ್ಯಾರಕೊಪ್ಪ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ […]

ಅಪರಾಧ

ಮಹಿಳೆ ನೇಣಿಗೆ ಶರಣು, ಗರಿಗೆದರಿದ ಹಲವು ಅನುಮಾನ : ಹುಬ್ಬಳ್ಳಿ ಬಿಜೆಪಿ ಮುಖಂಡನಿಗೆ ಸಂಕಷ್ಟ

ಹುಬ್ಬಳ್ಳಿ prajakiran.com : ಹುಬ್ಬಳ್ಳಿಯ ಗೋಕುಲ್  ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಸವರಾಜ ಕೆಲಗೇರಿ ಎಂಬುವವರ ಪತ್ನಿ ನಾನು ಎಂದು ಹೇಳಿಕೊಳ್ಳುತ್ತಿದ್ದ ಅನಿತಾ ರೇವಣಕರ್  ಎಂಬ ಮಹಿಳೆ ಶಾಂತಿನಗರದ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಶನಿವಾರ ನಡೆದಿದೆ. ಇದರಿಂದಾಗಿ ಬಿಜೆಪಿ ಮುಖಂಡ ಬಸವರಾಜ್ ಕೆಲಗೇರಿ ಎಂಬಾತನಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಮಹಿಳೆ ಮೇಲೆ ಈ ಹಿಂದೆ ಈತ ನಡು ಬೀದಿಯಲ್ಲಿಯೇ ಮಾರಣಾಂತಿಕ ಹಲ್ಲೆ ನಡೆಸಿದ್ದ. ಅಲ್ಲದೆ, ಹುಬ್ಬಳ್ಳಿಯ ಕಿಮ್ಸ್ ಆವರಣದಲ್ಲೂ ಸಹ ಮಾರಣಾಂತಿಕ ನಡೆಸಿದ್ದ ಆರೋಪಗಳಿವೆ. […]

ಅಪರಾಧ

ಯಲ್ಲಾಪುರ ಬಳಿ ಲಾರಿ – ಕಾರ್ ನಡುವೆ ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಯಲ್ಲಾಪುರ (ಕಾರವಾರ) : ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ಬಳಿಯಲ್ಲಿ ಹೊಸಳ್ಳಿ ಗಾಂವ ಠಾಣಾ ಕ್ಕೆ ಹೋಗುವ ಕ್ರಾಸ್ ಬಳಿ ಈ ರ್ದುಘಟನೆ ನಡೆದಿದೆ. ಅಂಕೋಲಾ ಕಡೆಗೆ ತೆರಳುತ್ತಿದ್ದ ದೆಹಲಿ‌ ನೋಂದಣಿಯನ್ನು ಹೊಣಂದಿರುವ ಕಾರು ಹಾಗೂ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಮಹಾರಾಷ್ಟ್ರ ನೊಂದಣಿಯ ಲಾರಿಯ ನಡುವೆ ಈ ಭೀಕರ ಅಪಘಾತ […]

ಅಪರಾಧ

ಧಾರವಾಡದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ಆತ್ಮಹತ್ಯೆ

ಧಾರವಾಡ prajakiran.com : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋಬ್ಬ ನೇಣಿಗೆ ಶರಣಾದ ಪ್ರಕರಣ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ಹೆಬ್ಬಳ್ಳಿ ಗ್ರಾಮದ ಶಿವಾನಂದ ಮಲ್ಲಿಕಾರ್ಜುನ ಬಳಗಾನೂರ (೪೫) ನೇಣಿಗೆ ಶರಣಾದ ವ್ಯಕ್ತಿ. ಕಳೆದ ಕೆಲ ದಿನಗಳಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಈತ, ಇಂದು ಮುಂಜಾನೆ ತನ್ನ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪಿಎಸ್‌ಐ ಸುಮಾ ನಾಯಕ ಭೇಟಿ ನೀಡಿದ್ದರು. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ತನಿಖೆ ಮುಂದುವರೆದಿದೆ. Share on: WhatsApp