*ನಿರಂತರ ಮಳೆ, ಶೀತಗಾಳಿ ಹಿನ್ನೆಲೆ ರಜೆ ಘೋಷಿಸಿದ ಜಿಲ್ಲಾಧಿಕಾರಿ* ಧಾರವಾಡ ಪ್ರಜಾಕಿರಣ.ಕಾಮ್ ಜು. .24: ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ನಾಳೆ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಆದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ […]
ಜಿಲ್ಲೆ
ಕವಿತಾ ಹಿರೇಮಠಗೆ ಮಾತೃಶಕ್ತಿ ರಾಷ್ಟ್ರೀಯ ಪುರಸ್ಕಾರ
*ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾದ ಕಾಶಿ ಜಗದ್ಗುರು ಪೀಠದಿಂದ ಪ್ರದಾನ* *ಕವಿತಾ ಹಿರೇಮಠರಿಗೆ ಮಾತೃಶಕ್ತಿ ರಾಷ್ಟ್ರೀಯ ಪುರಸ್ಕಾರ* *ಧಾರವಾಡ ಪ್ರಜಾಕಿರಣ.ಕಾಮ್ : ಧರ್ಮ, ಸಂಸ್ಕೃತಿ, ಸಾಹಿತ್ಯ, ಕಲೆ ಮತ್ತಿತರ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಮಹಿಳೆಯರಿಗೆ ವೀರಶೈವ ಧರ್ಮದ ಪಂಪೀಠಗಳಲ್ಲಿ ಒಂದಾಗಿರುವ ಉತ್ತರ ಪ್ರದೇಶದ ವಾರಾಣಾಸಿಯ ಕಾಶಿ ಜಗದ್ಗುರು ಪೀಠವು ಪ್ರದಾನ ಮಾಡುವ ‘ಶ್ರೀಮತಿ ಮಾಲತಿ ಮಹಾರುದ್ರಪ್ಪ ಖೇಣಿ ಮಾತೃಶಕ್ತಿ ರಾಷ್ಟ್ರೀಯ ಪುರಸ್ಕಾರಕ್ಕೆ ಧಾರವಾಡದ ಕವಿತಾ ಗುರುಸಿದ್ಧಯ್ಯ ಹಿರೇಮಠ ಆಯ್ಕೆಯಾಗಿದ್ದಾರೆ. ವಾರಾಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ […]
ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಮಳೆಯಲ್ಲಿಯೇ ರೈತರ ಪ್ರತಿಭಟನೆ
ಧಾರವಾಡ ಪ್ರಜಾಕಿರಣ.ಕಾಮ್ : ಬಾಕಿ ಇರುವ ಹಾಲಿನ ಪ್ರೋತ್ಸಾಹ ಧನವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ಕೆಎಂಎಫ್ ಕಚೇರಿ ಎದುರು ರತ್ನ ಭಾರತ ರೈತ ಸಮಾಜದ ಸದಸ್ಯರು ಮಳೆಯಲ್ಲಿಯೇ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತರ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ, ರೈತರಿಗೆ ಬರ ಪರಿಹಾರ ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡಿಲ್ಲ, ಹಾಲಿಗೆ ನೀಡುವ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡದೇ ಸರ್ಕಾರ ರೈತರೊಂದಿಗೆ ಚೆಲ್ಲಾಟ ಆಡುವುದು ಸರಿಯಲ್ಲ ಎಂದು ಸರ್ಕಾರದ ವಿರುದ್ಧ […]
ಬಿ.ಆರ್.ಟಿ.ಎಸ್. ಅವ್ಯವಸ್ಥೆಯ ವಿರುದ್ಧ ಧ್ವನಿ
ಧಾರವಾಡ ಪ್ರಜಾಕಿರಣ.ಕಾಮ್ : ಹುಬ್ಬಳ್ಳಿ-ಧಾರವಾಡ ಅವಳಿನಗರದ ಮಧ್ಯೆದ ಎಚ್.ಡಿ.ಬಿ.ಆರ್.ಟಿ.ಎಸ್. ಅವ್ಯವಸ್ಥೆಯ ವಿರುದ್ಧ ಧಾರವಾಡ ಧ್ವನಿವತಿಯಿಂದ ಇದೇ ದಿ.೧೫ ರಂದು ನವಲೂರು ಬ್ರಿಡ್ಜ್ದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡ ಧ್ವನಿ ಅಧ್ಯಕ್ಷ ಈಶ್ವರ ಶಿವಳ್ಳಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಜ್ಯುಬಿಲಿ ಸರ್ಕಲ್ದಿಂದ ನವಲೂರು ವರೆಗೆ ಹಾಗೂ ಹುಬ್ಬಳ್ಳಿಯ ಉಣಕಲ್ ಕೆರೆಯಿಂದ ರಾಣಿ ಚನ್ನಮ್ಮ ಸರ್ಕಲ್ವರೆಗೆ ಮಿನಿ ವಾಹನಗಳಿಗೆ (ಕಾರು, ಬೈಕ್, ಆಟೋರಿಕ್ಷಾ ಇತರೆ) ಎಚ್.ಡಿ.ಬಿ.ಆರ್.ಟಿ.ಎಸ್. ರಸ್ತೆಯಲ್ಲಿ ಸಂಚರಿಸಲು ಅವಕಾಶ ನೀಡಬೇಕು. ಎನ್.ಟಿ.ಟಿ.ಎಫ್., ಟೋಲನಾಕಾ, […]
ಧಾರವಾಡದ ಸರಕಾರಿ ಶಾಲೆಗಳ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ
ಧಾರವಾಡ ಪ್ರಜಾಕಿರಣ.ಕಾಮ್ : ಶಿಕ್ಷಣ ಇಲಾಖೆಯ ವತಿಯಿಂದ ಶುಕ್ತವಾರ ಹಮ್ಮಿಕೊಂಡಿದ್ದ ಸರಳ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಪ್ರತಿಭಾವಂತ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಯಿತು. 2022- 23 ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೊದಲ ಮೂರು ಹೆಚ್ಚು ಅಂಕ ಪಡೆದ ಸರಕಾರಿ ಶಾಲೆಗಳ ಮೂವರು ವಿದ್ಯಾರ್ಥಿಗಳಾದ ನಾಜ್ ಬಳ್ಳಾರಿ, ಕಾವ್ಯಾ ಕುಂಬಾರ, ಸಮೀನಾ ನವಲೂರಗೆ ವಿಧಾನಸಭೆಯ ವಿರೋಧಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರು ಲ್ಯಾಪಟಾಪ್ ಗಳನ್ನು ವಿತರಿಸಿದರು. ಶಹರ ವಲಯದ […]
ಧಾರವಾಡದ ನಿವೃತ್ತ ಡಿಡಿಪಿಐ ವಿ.ಎಂ ಪಾಟೀಲ ಇನ್ನಿಲ್ಲ
ಧಾರವಾಡ ಪ್ರಜಾಕಿರಣ.ಕಾಮ್ : ಇಲ್ಲಿನ ಭೋವಿ ಗಲ್ಲಿ ನಿವಾಸಿ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕರಾಗಿದ್ದ ವಿರೂಪಾಕ್ಷಗೌಡ.ಎಂ.ಪಾಟೀಲ (74) ಅವರು ಇಂದು ಮಂಗಳವಾರ ಜೂ.18 ರಂದು ಬೆಳಗಿನ 3.30 ಕ್ಕೆ ಇಹಲೋಕ ತ್ಯಜಿಸಿದರು. ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3.30 ಕ್ಕೆ ನೆರವೇರಲಿದೆ. ಮೃತರಿಗೆ ಒಬ್ಬ ಮಗ ಇಬ್ಬರು ಹೆಣ್ಣು ಮಕ್ಕಳಿದ್ದು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ಹುಬ್ಬಳ್ಳಿ ಧಾರವಾಡ ನಗರ ವಲಯ, ಹುಬ್ಬಳ್ಳಿ ಗ್ರಾಮೀಣ, ಧಾರವಾಡ ಗ್ರಾಮೀಣ ಕ್ಷೇತ್ರದ ಶಿಕ್ಷಣಾಧಿಕಾರಿಯಾಗಿ,ಡೈಟ್ ಪ್ರಾಂಶುಪಾಲರಾಗಿ, ಧಾರವಾಡ ಜಿಲ್ಲೆಯ ಉಪನಿರ್ದೇಶಕ, […]
ಧಾರವಾಡ : ಶ್ಯಾಮ್ ಮಲ್ಲನಗೌಡರ ಪುತ್ರ ಸಾಯಿಕಿರಣ್ ಇನ್ನಿಲ್ಲ….!
ಶಿಕ್ಷಕ ಶ್ಯಾಮ್ ಮಲ್ಲನಗೌಡರ ಪುತ್ರ ಸಾಯಿಕಿರಣ್ ಇನ್ನಿಲ್ಲ ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಜಿಲ್ಲೆಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘಟನೆಯ ಮುಖಂಡ ಹಾಗೂ ಸೇಂಟ್ ಜೋಸೆಫ್ ಶಾಲೆ ಶಿಕ್ಷಕರು ಆಗಿರುವ ಶ್ಯಾಮ್ ಮಲ್ಲನ ಗೌಡರ ಪುತ್ರ ಸಾಯಿಕಿರಣ (ಆದರ್ಶ) ಶ್ಯಾಮ್ ಮಲ್ಲನಗೌಡರ (23) ವಿಧಿವಶರಾದರು. ಅವರು ನಿನ್ನೆ ಶುಕ್ರವಾರ ರಾತ್ರಿ ಮೈಸೂರಿನಲ್ಲಿ ಅಪಘಾತದಲ್ಲಿ ಇಹಲೋಕವನ್ನು ತ್ಯಜಿಸಿದರು. ಇವರು ಮೈಸೂರಿನ ಎಲ್ ಆಂಡ್ ಟಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಾಯಿ ಕಿರಣ್ ತಂದೆ ಶ್ಯಾಮ್ […]
ವಿನಯ ಕುಲಕರ್ಣಿಯನ್ನು ಜಿಲ್ಲೆಯಿಂದ ಹೊರಗಿಟ್ಟಿದ್ದು ಜೋಶಿಯಲ್ಲ, ಸುಪ್ರೀಂಕೋರ್ಟ್
*ಮಾಜಿ ಸಚಿವ ವಿನಯ ಕುಲಕರ್ಣಿ ಹೇಳಿಕೆಗೆ ಮಾಜಿ ಮೇಯರ್ ಈರೇಶ ಅಂಚಟಗೇರಿ ತಿರುಗೇಟು* *ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ವಿರುದ್ಧ ಇಲ್ಲಸಲ್ಲದ ಆರೋಪ* *ವಿನಯ ಕುಲಕರ್ಣಿ ಜಿಲ್ಲೆಯಿಂದ ಹೊರಗಿಟ್ಟಿದ್ದು ಸುಪ್ರೀಂಕೋರ್ಟ್* *ಪ್ರಹ್ಲಾದ ಜೋಶಿ ಲಿಂಗಾಯತ ವಿರೋಧಿಯಲ್ಲ* ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರಿಗೆ ಧಾರವಾಡ ಜಿಲ್ಲೆಯ ಲಿಂಗಾಯತ ಸಮಾಜದ ಮುಖಂಡರು, ಮಾಜಿ ಮೇಯರ್ ಈರೇಶ ಅಂಚಟಗೇರಿ ಹಲವಾರು ಪ್ರಶ್ನೆಗಳನ್ನ ಕೇಳಿದ್ದಾರೆ. ಇತ್ತೀಚಿಗೆ ಶಾಸಕರು ಸುದ್ದಿ ಮಾಧ್ಯಮವೊಂದರಲ್ಲಿ ಪಾಲಿಕೆ ಸದಸ್ಯರು […]
ಧಾರವಾಡ ಜಿಲ್ಲೆಯಲ್ಲಿ ಮನೆಯಿಂದ ಶೇ.96.05 ರಷ್ಟು ಮತದಾನ
ಧಾರವಾಡ ಜಿಲ್ಲೆಯಲ್ಲಿ ಮನೆಯಿಂದ ಮತದಾನ ಮಾಡಿದ 1141 ಹಿರಿಯ ನಾಗರಿಕರು, 368 ವಿಕಲಚೇತನರು : ಚುನಾವಣಾಧಿಕಾರಿ ದಿವ್ಯ ಪ್ರಭು. ಧಾರವಾಡ ಪ್ರಜಾಕಿರಣ.ಕಾಮ್ ಏಪ್ರಿಲ್ 26: ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 8 ವಿಧಾನ ಸಭಾ ಮತಕ್ಷೇತ್ರಗಳು ಸೇರಿ 1141 ಜನ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು 368 ವಿಕಲಚೇತನರು ಸೇರಿ ಒಟ್ಟು 1509 ಜನ ಮತದಾರರು ಮನೆಯಿಂದ ಮತ ಚಲಾಯಿಸಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ನಿನ್ನೆ ಮತ್ತು ಇಂದು ಸೇರಿದಂತೆ 85 ವರ್ಷ ಮೇಲ್ಪಟ್ಟ […]
ಧಾರವಾಡದಲ್ಲಿ ಪೊಲೀಸರು, ಸಿಐಎಸ್ಎಫ್ ಕಮಾಂಡೊಗಳಿಂದ ಪಥ ಸಂಚಲನ
ಪೊಲೀಸರು, ಸಿಐಎಸ್ಎಫ್ ಕಮಾಂಡೊಗಳಿಂದ ರೂಟ್ ಮಾರ್ಚ್ – ನಗರ ಸುತ್ತಿದ ಡಿಸಿ ದಿವ್ಯ ಪ್ರಭು ಧಾರವಾಡ ಪ್ರಜಾಕಿರಣ.ಕಾಮ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಧಾರವಾಡದಲ್ಲಿ ಅವಳಿನಗರ ಪೊಲೀಸ್ ಕಮೀಷನರೇಟ್ ವತಿಯಿಂದ ಪಥ ಸಂಚಲನ ಮ್ಮಿಕೊಳ್ಳಲಾಗಿತ್ತು. ಈ ರೂಟ್ ಮಾರ್ಚ್ನಲ್ಲಿ ಸಿಐಎಸ್ಎಫ್ ಕಮಾಂಡೊಗಳು, ಕೆಎಸ್ಆರ್ಪಿ ಪ್ಲಟೂನ್, ಸಿಎಆರ್ ಪೊಲೀಸರು ಪಾಲ್ಗೊಂಡಿದ್ದರು. ಈ ಪೊಲೀಸರೊಂದಿಗೆ ಸ್ವತಃ ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ, ಡಿಸಿಪಿಗಳಾದ ರಾಜೀವ್ ಎಂ., ಆರ್.ರವೀಶ ಕೂಡ ಪಾಲ್ಗೊಂಡು […]