ಜಿಲ್ಲೆ

ಧಾರವಾಡದ ಕಲಾವಿದ ಸಂಜೀವ ಕಾಳೆ ಇನ್ನು ನೆನೆಪು ಮಾತ್ರ….!

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಬಲು ಅಪರೂಪದ ಕಲಾವಿದರು ಹಾಗೂ ಗಳಗಿ ಹುಲಕೊಪ್ಪ ಸರಕಾರಿ ಪ್ರೌಢ ಶಾಲೆಯ ಶಿಕ್ಷಕರು ಆಗಿದ್ದ ಸಂಜೀವ ಕಾಳೆಯವರನ್ಬು ಕರೋನಾ ಬಲಿ ಪಡೆದಿದೆ. ಧಾರವಾಡ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಹಾಗೂ ನಾಡಿನ ಶ್ರೇಷ್ಠ ಕಲಾವಿದರಲ್ಲಿ ಒಬ್ಬರಾಗಿದ್ದ ಸಂಜೀವ ಕಾಳೆ ವಿಧಿವಶರಾಗಿರುವುದು ಕಲಾಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಅನೇಕರು ಕಂಬನಿ ಮಿಡಿದಿದ್ದಾರೆ. ಕಳೆದ ತಿಂಗಳು ಡಿ.ವಿ ಹಾಲಭಾವಿ ಟ್ರಸ್ಟ ನ ಧಾರವಾಡದ” ಐತಿಹಾಸಿಕ ಕಟ್ಟಡ”ಗಳ ಚಿತ್ರಕಲಾ ಶಿಬಿರದಲ್ಲಿ ಅವರು […]

ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಮತ್ತೆ 1006 ಸೋಂಕಿತರು, 8 ಜನ ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಸೋಂಕಿತರ ಸಂಖ್ಯೆ ಸೋಮವಾರ ಮತ್ತೆ ಸಾವಿರದ ಗಡಿ ದಾಟಿದೆ. ಬರೋಬ್ಬರಿ 1006 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ. ದುರಂತದ ಸಂಗತಿಯೆಂದರೆ ಇಂದು ಕೂಡ 8 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ 5 ಜನ ಸಾವನ್ನಪ್ಪಿದ್ದರೆ, ಹುಬ್ಬಳ್ಳಿಯ ಶಕುಂತಲಾ ಆಸ್ಪತ್ರೆ ನಲ್ಲಿ ಒಂದು ಹಾಗೂ ನವಲಗುಂದ ತಾಲ್ಲೂಕಿನ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. […]

ಜಿಲ್ಲೆ

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಶಿಲ್ಡ್ ಲಸಿಕಾರಣ ಆರಂಭ

ಧಾರವಾಡ prajakiran.com : ರಾಜ್ಯ ಸರಕಾರವು ನೀಡಿರುವ ಆದೇಶದಂತೆ ಧಾರವಾಡ ಜಿಲ್ಲಾಡಳಿತವು ಇಂದಿನಿಂದ 18 ವರ್ಷ ಮೇಲ್ಪಟ್ಟ ಹಾಗೂ 44 ವರ್ಷದೊಳಗಿನ ಫಲಾನುಭವಿಗಳಿಗೆ ಕೋವಿಡ್ ರೋಗ ನಿರೋಧಕವಾಗಿರುವ ಕೋವಿಶಿಲ್ಡ್ ಲಸಿಕಾರಣ ಆರಂಭಿಸಿದ್ದು, ಸೋಮವಾರ ಸಂಜೆ ಜಿಲ್ಲಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು. ಬೆಳಗಾವಿಯ ಪ್ರಾದೇಶಿಕ ಔಷಧಿ ದಾಸ್ತಾನು ಉಗ್ರಾಣದಿಂದ ಲಸಿಕೆಯು ಮಧ್ಯಾಹ್ನ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರಕಾರಿ ಔಷಧ ದಾಸ್ತಾನು ಉಗ್ರಾಣಕ್ಕೆ ಬಂದು ತಲುಪಿತು. ನಂತರ ನಿಗದಿತ ಲಸಿಕಾ ಕೇಂದ್ರಗಳಿಗೆ ತಲುಪಿಸಲಾಗಿದ್ದು, ಇಂದು […]

ಜಿಲ್ಲೆ

ಧಾರವಾಡದಲ್ಲಿ ಕೊರೋನಾದಿಂದ‌ ತಂದೆ-ಮಗ ಸಾವು…..!

ಧಾರವಾಡ prajakiran.com : ಧಾರವಾಡದ ಹಿರಿಯ ವರ್ತಕ ರವೀಂದ್ರ ವಸ್ತ್ರದ ಹಾಗೂ ಅವರ ಮಗ ವಿಶ್ವನಾಥ ವಸ್ತ್ರದ ಕೊರೋನಾದಿಂದ ಸಾವನ್ನಪ್ಪಿದರು. ಇದರಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಡಿದೆ. ಕೊರೊನಾದಿಂದ‌ ಒಂದೇ ದಿ‌ನ ತಂದೆ ಮಗ ಸಾವನ್ನಪ್ಪಿರುವುದು ಅವರಿಗೆ ದಿಕ್ಜೇ ತೋಚದಂತಾಗಿದೆ. ಕುಟುಂಬದ ಇನ್ನಿಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಧಾರವಾಡದ ಅಕ್ಕಿಪೇಟೆಯಲ್ಲಿ ಕಳೆದ ಹಲವು ದಶಕಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದ ತಂದೆ ರವೀಂದ್ರ ಹಾಗೂ ಮಗ ವಿಶ್ವನಾಥ ವಸ್ತ್ರದ ಧಾರವಾಡದ ಸನ್ಮತಿನಗರದ ನಿವಾಸಿಗಳು‌. ನಿನ್ನೆ ಸಂಜೆ […]

ಜಿಲ್ಲೆ

ಹುಬ್ಬಳ್ಳಿ ಧಾರವಾಡದ 50,000 ಸಾವಿರ ಜನರಿಗೆ ಜಿಲ್ಲಾಡಳಿತದಿಂದ ಉಚಿತ ಕೋವಿಡ್ ನಿರೋಧಕ ಔಷಧಿ

ಧಾರವಾಡ prajakiran.com : ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುತ್ತಿರುವುದರಿಂದ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಧಾರವಾಡ ಜಿಲ್ಲಾಡಳಿತವು ಲಕ್ಷಣರಹಿತ ಕೋವಿಡ್ ಸೋಂಕು ಇರುವವರನ್ನು ಹಾಗೂ ಜ್ವರ, ನೆಗಡಿ, ಕೆಮ್ಮು, ಅಶಕ್ತತೆ, ಆಯಾಸ ಹೊಂದಿರುವವರ ಮನೆ ಮನೆಗೆ ತೆರಳಿ ಕೋವಿಡ್ ನಿರೋಧಕ ಔಷಧಗಳನ್ನು ನೀಡಲು ಕ್ರಮಕೈಗೊಂಡಿರುವುದು ಉತ್ತಮ ಮತ್ತು ನೂತನ ಕ್ರಮವಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ಅವರು ಧಾರವಾಡ ನಗರದ ಲಕ್ಷ್ಮೀಸಿಂಗನಕೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆ ಹಮ್ಮಿಕೊಂಡಿರುವ ಮನೆ […]

ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಇಂದಿನಿಂದ 18ರಿಂದ  44 ವರ್ಷದೊಳಿಗನವರಿಗೆ ಕೋವಿಶಿಲ್ಡ್ ಲಸಿಕಾರಣ

ಧಾರವಾಡ prajakiran.com : ಜಿಲ್ಲೆಯಲ್ಲಿ ಮೇ.10ರಿಂದ 18 ವರ್ಷ ಮೇಲ್ಪಟ್ಟ ಹಾಗೂ 44 ವರ್ಷದೊಳಗಿನವರಿಗೆ ಕೋವಿಶಿಲ್ಡ್ ಲಸಿಕೆ ಹಾಕಲಾಗುತ್ತದೆ. ಆಸಕ್ತ ಫಲಾನುಭವಿಗಳು ಆರೋಗ್ಯ ಸೇತುಆ್ಯಪ್ ದಲ್ಲಿ ನೋಂದಣಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು,‌ ರಾಜ್ಯ ಸರಕಾರವು ನಾಳೆಯಿಂದ ಕೋವಿಶಿಲ್ಡ್ ಲಸಿಕೆಯನ್ನು 18 ವರ್ಷ ಮೇಲ್ಪಟ್ಟ ಮತ್ತು 44 ವರ್ಷದೊಳಗಿನ ಫಲಾನುಭವಿಗಳಿಗೆ ನೀಡಲು ಆದೇಶಿಸಿದೆ. ಸರಕಾರದ ಆದೇಶದಂತೆ ಧಾರವಾಡ ಜಿಲ್ಲಾಡಳಿತದಿಂದ, ಧಾರವಾಡ ಜಿಲ್ಲಾ ಆಸ್ಪತ್ರೆ, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಹಾಗೂ […]

hubli kims
ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಭಾನುವಾರ 777 ಸೋಂಕಿತರು, 4 ಜನ ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಸೋಂಕಿತರ ಸಂಖ್ಯೆ ಭಾನುವಾರ ಒಂದೇ ದಿನ ಮತ್ತೆ 777 ಕ್ಕೆ ಬಂದಿದೆ. ದುರಂತದ ಸಂಗತಿಯೆಂದರೆ ಇಂದು ಕೂಡ 4 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿ ರೈಲ್ವೆ ಆಸ್ಪತ್ರೆಯಲ್ಲಿ ಇಬ್ಬರು, ಧಾರವಾಡದ ಎಸ್ ಡಿಎಂ ಹಾಗೂ ರಾಮಬಗೌಡರ ಆಸ್ಪತ್ರೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಆತಂಕದ ವಿಚಾರವೆಂದರೆ 353 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

dist hospital dharwad
ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಇಂದು 942 ಸೋಂಕಿತರು, 7 ಜನ ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಸೋಂಕಿತರ ಸಂಖ್ಯೆ ಶುಕ್ರವಾರ ಮತ್ತೆ ಸಾವಿರದ ಗಡಿ ಸಮೀಪಿಸಿದೆ. ಸೋಂಕಿತರ ಸಂಖ್ಯೆ ಇಂದು 942ಕ್ಕೆ ಏರಿಕೆ ಆಗಿದೆ‌. ದುರಂತದ ಸಂಗತಿಯೆಂದರೆ ಇಂದು ಕೂಡ 7 ಸೋಂಕಿತರು ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ 3 ಜನ ಸಾವನ್ನಪ್ಪಿದರೆ, ಲೈಪ್ ಲೈನ್ ನಲ್ಲಿ 3 ಮತ್ತು ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಒಬ್ಬರು ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಆತಂಕದ […]

ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಇಂದು 824 ಸೋಂಕಿತರು, 6 ಜನ ಸಾವು…..!

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಸೋಂಕಿತರ ಸಂಖ್ಯೆ ನಿನ್ನೆ ಸಾವಿರವಿತ್ತು. ಆದರೆ ಗುರುವಾರ ಕೊಂಚ ತಗ್ಗಿದ್ದು, ಇಂದು 824ಕ್ಕೆ ಇಳಿದಿದೆ. ದುರಂತದ ಸಂಗತಿಯೆಂದರೆ ಇಂದು ಕೂಡ 6 ಸೋಂಕಿತರು ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 3 ಜನ ಸಾವನ್ನಪ್ಪಿದರೆ, ಲೈಪ್ ಲೈನ್ ನಲ್ಲಿ 2 ಮತ್ತು ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಒಬ್ಬರು ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಆತಂಕದ ವಿಚಾರವೆಂದರೆ 365 […]

hubli kims
ಜಿಲ್ಲೆ

ಧಾರವಾಡದಲ್ಲಿ ಒಂದೇ ದಿನ ಸಾವಿರ ಗಡಿ ದಾಟಿದ ಸೋಂಕಿತರು,8 ಜನ ಸಾವು…..!

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. 500ರಿಂದ 700 ರವರೆಗೆ ಸಮೀಪ  ಹೋಗುತ್ತಿದ್ದ ಸೋಂಕಿತರ ಸಂಖ್ಯೆ ಬುಧವಾರ ಸಾವಿರದ ಗಡಿ ದಾಟಿದೆ. ಜಿಲ್ಲೆಯಲ್ಲಿ ಇಂದು ಬರೋಬ್ವರಿ 1030 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ದುರಂತದ ಸಂಗತಿಯೆಂದರೆ ಒಟ್ಟು 8 ಸೋಂಕಿತರು ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಆರು ಜನ ಸಾವನ್ನಪ್ಪಿದರೆ, ಲೈಪ್ ಲೈನ್ ನಲ್ಲಿ ಮತ್ತು ಧಾರವಾಡ ಜಿಲ್ಲೆಯ ಆಸ್ಪತ್ರೆಯಲ್ಲಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು […]