ಅಂತಾರಾಷ್ಟ್ರೀಯ

ಖಾಸಗಿ ಬಸ್ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ಧಾರವಾಡ prajakiran.com : ಜಿಲ್ಲೆಗೆ ಪ್ರತಿದಿನ ವಿವಿಧ ಖಾಸಗಿ ಹಾಗೂ ಸರ್ಕಾರಿ ಬಸ್ ಮೂಲಕ ಹೊರರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ ತಿಳಿಸಿದ್ದಾರೆ. ವರದಿ ಹೊಂದಿರದಿದ್ದಲ್ಲಿ ಪ್ರತಿ ಪ್ರಯಾಣಿಕರಿಗೆ ಆರ್‍ಟಿಪಿಸಿಆರ್ ಮೂಲಕ ಸ್ಥಳದಲ್ಲಿಯೇ ಕೋವಿಡ್ ಟೆಸ್ಟ್ ಮಾಡಬೇಕು. ಇದು ಪ್ರತಿ ದಿನ ಪುನರಾವರ್ತನೆಯಾದರೆ ಅಂತಹ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿ ಅಂತಹ ಬಸ್‍ನ್ನು ಪ್ರಯಾಣಿಕರ ಸಮೇತ ಮರಳಿ ಕಳುಹಿಸಬೇಕು ಅಥವಾ ಸೀಜ್ ಮಾಡಬೇಕೆಂದು ಪಾಲಿಕೆಯ ಹಾಗೂ ಸಾರಿಗೆ […]

ಅಂತಾರಾಷ್ಟ್ರೀಯ

ರಮೇಶ ಜಾರಕಿಹೊಳಿ ವಿರುದ್ದ ದೂರು ದಾಖಲಿಸಲು ನಿರ್ಧಾರ : ಮೂರನೇ ಸಿಡಿ ಬಿಡುಗಡೆಗೊಳಿಸಿದ ಯುವತಿ

ಬೆಂಗಳೂರು prajakiran.com : ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿದ್ದಾಳೆ ಎನ್ನಲಾದ ಯುವತಿ ಅಜ್ಞಾತ ಸ್ಥಳದಿಂದ ಇದೀಗ ಮೂರನೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾಳೆ. ಈ ವೀಡಿಯೋ ದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ದೂರು ದಾಖಲಿಸುವುದಾಗಿ ಹೇಳಿದ್ದಾರೆ. ತಮ್ಮ ವಕೀಲ ಜಗದೀಶ್ ಅವರ ಮೂಲಕ ಈ ದೂರು ದಾಖಲಿಸಲಾಗುತ್ತದೆ. ನಾನು ಕಳೆದ 24 ದಿನಗಳಿಂದ ಜೀವ ಭಯದಲ್ಲಿ ಬದುಕುತ್ತಿದ್ದೆ. ನನಗೆ ಎಲ್ಲಾ ಪಕ್ಷದ ಮುಖಂಡರ ಹಾಗೂ ಸಂಘಟನೆಯ ಬೆಂಬಲದೊಂದಿಗೆ ಧೈರ್ಯ […]

ಅಂತಾರಾಷ್ಟ್ರೀಯ

ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಸಿಗುವ ವಿಶ್ವಾಸ : ಮುತಾಲಿಕ್

ಹುಬ್ಬಳ್ಳಿ prajakiran.com: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿಯಾಗಿದ್ದೇನೆ. ಟಿಕೆಟ್ ವಿಚಾರ ಹಿನ್ನೆಲೆ ನಾನು ಬಿಜೆಪಿ ಎಲ್ಲಾ ಪ್ರಮುಖರನ್ನು ಭೇಟಿ ಮಾಡಿದ್ದೇನೆ. ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ‌ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು. ಸೋಮವಾರ ನಗರದಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಟಿಕೆಟ್ ನೀಡುವಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಎಲ್ಲರೂ ಸಹ ಕೋರ್ ಕಮೀಟಿ ಜೊತೆ ಚರ್ಚಿಸುವುದಾಗಿ ಹೇಳಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. […]

ಅಂತಾರಾಷ್ಟ್ರೀಯ

ಧಾರವಾಡ ಸೇರಿ ಕರ್ನಾಟಕದ ಎಂಟು ಜಿಲ್ಲೆಗಳು ಕರೋನಾ ಎರಡನೇ ಅಲೆಯಲ್ಲಿ ಡೇಂಜರ್ ಝೋನ್

ನವದೆಹಲಿ prajakiran.com : ಕರ್ನಾಟಕದ ಎಂಟು ಜಿಲ್ಲೆಗಳು ಕರೋನಾ ಎರಡನೇ ಅಲೆಯಲ್ಲಿ ಡೇಂಜರ್ ಝೋನ್ ನಲ್ಲಿವೆ. ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ರಿಪೋರ್ಟ ನಲ್ಲಿ ಈ ಜಿಲ್ಲೆಗಳಿವೆ. ನಿನ್ನೇಯಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದಲ್ಲಿನ ಮೂರು ಜಿಲ್ಲೆಯನ್ನು ಹೈ ರಿಸ್ಕ್ ಎಂದು ಘೋಷಣೆ ಮಾಡಿದ್ದರು. ಅದರ ಬೆನ್ನಲ್ಲೇ , ಕೇಂದ್ರ ಆರೋಗ್ಯ ಇಲಾಖೆ ಇನ್ನೊಂದು ರಿಪೋರ್ಟ್ ಬಿಡುಗಡೆ ಮಾಡಿದೆ. ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ನೇತೃತ್ವದ ತಂಡ ಈ ರಿಪೋಟ್ ಬಿಡುಗಡೆ […]

ಅಂತಾರಾಷ್ಟ್ರೀಯ

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

ಬೆಂಗಳೂರು prajakiran.com : ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಂಡಿದೆ. ಬುಧವಾರ ಈ ಕುರಿತು ತೀರ್ಪು ಪ್ರಕಟಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಇನವಳ್ಳಿ ಈ ಆದೇಶ ಹೊರಡಿಸಿದರು. ಸಿಬಿಐ ಪರ ಸುಪ್ರೀಂಕೋರ್ಟ್ ಅಸೋಸಿಯೇಟ್ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು ಮಂಡಿಸಿದ ಸುದೀರ್ಘವಾದ ಪ್ರತಿವಾದವನ್ನು ಜನಪ್ರತಿನಿಧಿಗಳ ನ್ಯಾಯಾಲಯ ಎತ್ತಿ ಹಿಡಿದಿದೆ. ಮಾಜಿ ಸಚಿವ ವಿನಯ ಕುಲಕರ್ಣಿಯವರ […]

ಅಂತಾರಾಷ್ಟ್ರೀಯ

ಬೀಸೋ ಕಲ್ಲಿನ ಪದ, ಕುಟ್ಟೋ ಪದ, ಸೋಬಾನ ಹಾಡಿ ಸಂಭ್ರಮಿಸಿದ ಮಹಿಳೆಯರು

ಉತ್ತರ ಕರ್ನಾಟಕ ಶೈಲಿಯ ಜನಪದ ಗೀತೆಗಳ ಅನಾವರಣ ಜನಜಾಗೃತಿ ಸಂಘದಿಂದ ವಿಭಿನ್ನ ಹಾಗೂ ವೈಶಿಷ್ಯಪೂರ್ಣ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆ ಧಾರವಾಡ prajakiran.com : ಧಾರವಾಡದ ಕೆ.ಎಚ್.ಬಿ ಕಾಲೋನಿಯಲ್ಲಿ ಜನಜಾಗೃತಿ ಸಂಘದ ವತಿಯಿಂದ ಭಾನುವಾರ ವಿಭಿನ್ನ ಹಾಗೂ ವೈಶಿಷ್ಯಪೂರ್ಣವಾದ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಹೆಚ್. ಕೊರವರ ಹಾಗೂ ಸುಮಂಗಲಾ ಬಸವರಾಜ ಕೊರವರ ಅವರ ನೇತೃತ್ವದಲ್ಲಿ ಹಿರಿಯ ಜಾನಪದ ವಿದ್ವಾಂಸರಾದ ಬಸವಲಿಂಗಯ್ಯ ಹಿರೇಮಠ ಹಾಗೂ ವಿಶ್ವೇಶರಿ ಹಿರೇಮಠ ಅವರು ಉತ್ತರ […]

ಅಂತಾರಾಷ್ಟ್ರೀಯ

ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ದದ ದೂರು ವಾಪಾಸ್ ಪಡೆದ ದಿನೇಶ ಕಲ್ಲಹಳ್ಳಿ……!

ಬೆಂಗಳೂರು prajakiran.com : ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು‌ ನೀಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ ಕಲ್ಲಹಳ್ಳಿ ಯೂ ಟರ್ನ್ ಹೊಡೆದಿದ್ದಾರೆ. ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ತಾವು ನೀಡಿದ್ದ ದೂರನ್ನು ವಾಪಾಸ್ ಪಡೆದಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 5 ಕೋಟಿ ರೂಪಾಯಿಗೆ ಡೀಲ್ ನಡೆದಿದೆ ಎಂಬ ಆರೋಪಕ್ಕೆ ಬೇಸತ್ತು ದೂರನ್ನು ವಾಪಾಸ್ ಪಡೆಯುತ್ತಿದ್ದೇನೆ ಎಂದು […]

ಅಂತಾರಾಷ್ಟ್ರೀಯ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ ಜಾರಕಿಹೊಳಿ

ಬೆಂಗಳೂರು prajakiran.com : ಯುವತಿಗೆ ಉದ್ಯೋಗ ಆಮಿಷ ಒಡ್ಡಿ ಲೈಂಗಿಕ ಸಂಪರ್ಕ ಹೊಂದಿದ ಆರೋಪ ಎದುರಿಸುತ್ತಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಪಕ್ಷಕ್ಕೆ ಮುಜುಗರ ವಾಗಬಾರದು ಎಂದು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದು, ಆರೋಪ ಮುಕ್ತರಾಗಿ ಹೊರಬಂದಬಳಿಕ ಮತ್ತೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ. ಬೆಳಗ್ಗೆ ಅಷ್ಟೇ ಅವರ ಸಹೋದರ ಹಾಗೂ ಬಿಜೆಪಿವಶಾಸಕ ಬಾಲಚಂದ್ರ ಜಾರಕಿಹೊಳಿ ಸಿಎಂ ಅವರನ್ನು […]

ಅಂತಾರಾಷ್ಟ್ರೀಯ

ಸಚಿವ ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ : ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು prajakiran.com : ರಾಜ್ಯದ ಬಿಜೆಪಿ ಸರಕಾರದಲ್ಲಿ ಪ್ರಭಾವಿ ಸಚಿವರಾಗಿರುವ ರಮೇಶ ಜಾರಕಿಹೊಳಿಯವರ ರಾಸಲೀಲೆ ಸಿಡಿ ಬಿಡುಗಡೆಗೊಂಡಿದೆ. ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೋಳಿ ಯುವತಿಯ ಜೊತೆಗೆ ರಾಸಲೀಲೆಯಲ್ಲಿ ತೊಡಗಿರುವುದು ಸಿಡಿಯಲ್ಲಿದೆ. ಯುವತಿಗೆ ಕೆಪಿಟಿಸಿಎಲ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ ಎಂದು ಅವರ ಪರವಾಗಿ ನಾಗರಿಕ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ. ದೂರಿನ ಜೊತೆಗೆ ಸಚಿವ ರಮೇಶ ಜಾರಕಿಹೊಳಿಯವರ ರಾಸಲೀಲೆ ಸಿಡಿ ನೀಡಲಾಗಿದೆ. ಬೆಂಗಳೂರು […]

ಅಂತಾರಾಷ್ಟ್ರೀಯ

ನೀರಿನ ಕರ ಬಾಕಿ ಮನ್ನಾಗೆ ಆಗ್ರಹಿಸಿ ಮಾ. 2ರಂದು ಶಾಸಕ ಅರವಿಂದ ಬೆಲ್ಲದ ಹುಬ್ಬಳ್ಳಿ ಮನೆಗೆ ಮುತ್ತಿಗೆ

ಧಾರವಾಡ prajakiran.com : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನೀರಿನ ಕರ ಬಾಕಿ ಮನ್ನಾಕ್ಕೆ ಆಗ್ರಹಿಸಿ ಮಾ. 2ರಂದು ಶಾಸಕ ಅರವಿಂದ ಬೆಲ್ಲದ ಅವರ ಹುಬ್ಬಳ್ಳಿ ಮನೆಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ತಿಳಿಸಿದ್ದಾರೆ. ಅವರು ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಫೆ. ,28ರಂದು ಶಾಸಕ ಬೆಲ್ಲದ ಅವರ ಧಾರವಾಡದ ನಿವಾಸಕ್ಕೆ ಮುತ್ತಿಗೆ ಹಾಕಲಾಗಿತ್ತು. ಅವರ ಮನೆಯಲ್ಲಿ ಯಾರ ಇರದ ಕಾರಣ ಅವರ ಮನೆ ಗೋಡೆಗೆ ಮನವಿ ಪತ್ರ ಅಂಟಿಸಲಾಗಿದೆ. ಹೀಗಾಗಿ ಮಾ. […]