ರಾಜ್ಯ

ಧಾರವಾಡ : ಮದುವೆಯಾದವರನ್ನು ಬೇರ್ಪಡಿಸಿದರಾ ಗ್ರಾಮೀಣ ಪೊಲೀಸರು…!?

ಧಾರವಾಡ ಪ್ರಜಾಕಿರಣ.ಕಾಮ್ : ಅಂತರ್ ಧರ್ಮೀಯ ವಿವಾಹವಾಗಿದ್ದ ಇಬ್ಬರು ಪ್ರೇಮಿಗಳನ್ನು ರಾಜಕೀಯ ಒತ್ತಡಕ್ಕೆ ಮಣಿದು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಬೇರ್ಪಡಿಸಿದ್ದಾರೆ ಅನ್ನೋ ಗಂಭೀರವಾದ ಆರೋಪ ಕೇಳಿ ಬಂದಿದೆ. ಈ ಕುರಿತು ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಾರ್ಯಕರ್ತರು ನಗರದ ಗ್ರಾಮೀಣ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡ ತಾಲೂಕಿನ ಬಾಡ ಗ್ರಾಮದ ಮಂಜುನಾಥ ಮತ್ತು ಅದೇ ಗ್ರಾಮದ ಅನ್ಯ ಧರ್ಮೀಯ ಯುವತಿ ಪರಸ್ಪರ ಪ್ರೀತಿಸಿದ್ದರು. ಮದುವೆ ಸಹ ಆಗಿ. ಪರಸ್ಪರ ಒಪ್ಪಿ […]

ರಾಜ್ಯ

ಲೋಕಾಯುಕ್ತ ಬಲೆಗೆ ಬಿದ್ದ ಕುಂದಗೋಳ ಬಿಇಓ ವಿದ್ಯಾ ಕುಂದರಗಿ

ಧಾರವಾಡ ಪ್ರಜಾಕಿರಣ.ಕಾಮ್ : ಕುಂದಗೋಳ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ವಿದ್ಯಾ ಕುಂದರಗಿಯವರ ಧಾರವಾಡ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಕುಂದಗೋಳ ಬಿಇಓ ಆಗಿರುವ ಡಾ. ವಿದ್ಯಾ ಕುಂದರಗಿಯವರ ಧಾರವಾಡದ ಹೊಯ್ಸಳ ನಗರದಲ್ಲಿನ ನಿವಾಸದ ಮೇಲೆ ಈ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಧಾರವಾಡ ಜಿಲ್ಲೆಯ ಎಸ್ಪಿ ಸತೀಶ ಚಿಟಗುಬ್ಬಿ ನೇತೃತ್ವದಲ್ಲಿ ದಾಳಿ ನಡೆದಿದೆ. ಕುಂದಗೋಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಆಗಿರುವ ಕುಂದರಗಿಯವರು ಮಂಜುನಾಥ ಕುರುವಿನಶೆಟ್ಟಿ ಎಂಬುವವರಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಮಂಜುನಾಥ, ಹರ್ಲಾಪುರ ಗ್ರಾಮದ ಸರ್ಕಾರಿ ಶಾಲೆಯ ನಿವೃತ್ತ […]

ರಾಜ್ಯ

ಸಾವಿರ ರೂ. ಬರ ಪರಿಹಾರ, ನಾಚಿಗ್ಗೇಡು, ರೈತರಿಗೆ ಅವಮಾನ

*ಆರು ತಿಂಗಳಲ್ಲಿ ಸರ್ಕಾರ ಜಾರಿಗೊಳಿಸಿದ ಅಭಿವೃದ್ದಿ ಯೋಜನೆಗಳ ವರದಿ ನೀಡಲಿ: ಬಸವರಾಜ ಬೊಮ್ಮಾಯಿ* ಬೆಂಗಳೂರು ಪ್ರಜಾಕಿರಣ.ಕಾಮ್ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲಿ ಬಜೆಟ್ ನಲ್ಲಿ ಘೊಷಿಸಿರುವ ಎಷ್ಟು ಅಭಿವೃದ್ದಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮಾಹಿತಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಬಂದು ಆರು ತಿಂಗಳಾಯಿತು. ಈ ಸರ್ಕಾರದ ಬಗ್ಗೆ ಜನರು ಭ್ರಮ ನಿರಸನಗೊಂಡಿದ್ದಾರೆ‌. ಇವರು ಪದೇ ಪದೇ ಗ್ಯಾರೆಂಟಿಗಳ ಬಗ್ಗೆ […]

ರಾಜ್ಯ

ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್, ಗುರು ಸಾರ್ವಭೌಮ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ

ಬೆಂಗಳೂರು ಪ್ರಜಾಕಿರಣ.ಕಾಮ್ ; ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್ ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಿದ್ದಾರೆ. ಈ ಬ್ಯಾಂಕ್ ಗಳಿಂದ ಠೇವಣಿದಾರರಿಗೆ ಆಗಿರುವ ನಷ್ಟ ಮತ್ತು ವಂಚನೆಯ ವಿರುದ್ಧ ಪ್ರತಿಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರು ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ಮಾಡಿ, ಸೂಕ್ತ ತನಿಖೆ ನಡೆಸಿ ಬ್ಯಾಂಕಿನ ಗ್ರಾಹಕರಿಗೆ ಮತ್ತು ಠೇವಣಿದಾರರಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದರು. […]

ರಾಜ್ಯ

ಧಾರವಾಡದ ಕವಿವಿಯಲ್ಲಿ ಕುರ್ಚಿಗಾಗಿ ಮಾಟ ಮಂತ್ರ…..!?

ಧಾರವಾಡ ಪ್ರಜಾಕಿರಣ.ಕಾಮ್ : ದೇಶದ ಪ್ರತಿಷ್ಠಿತ ವಿವಿಗಳಲ್ಲಿ ಒಂದಾಗಿರುವ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದಲ್ಲಿ ನಾಡಿನ ಪ್ರಜ್ಞಾವಂತರು ತಲೆ ತಗ್ಗಿಸುವಂತಹ ಮಾಟ ಮಂತ್ರದ ವಸ್ತುಗಳು ಪತ್ತೆಯಾಗಿವೆ‌. ಹೌದು ಇದು ಅಚ್ಚರಿಯಾದರೂ ನಂಬಲೇಬೇಕಾದ ಕಟು ಸತ್ಯವಾಗಿದೆ. ಕವಿವಿಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ರಮಾ ಗುಂಡುರಾವ್ ಅವರ ಮೇಜಿನಲ್ಲಿ ಈ ವಾಮಾಚಾರ ಮಾಡಲಾಗಿದೆ. ಅದೇ ವಿಭಾಗದ ಇನ್ನೊಬ್ಬ ಪ್ರಾಧ್ಯಾಪಕರ ಮೇಲೆ ಅವರು ಶಂಕೆ ವ್ಯಕ್ತಪಡಿಸಿ, ಕುಲಪತಿಯವರಿಗೆ ಈ ಬಗ್ಗೆ ದೂರು […]

ರಾಜ್ಯ

ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ : ಮುಖ್ಯಮಂತ್ರಿ

ಬೆಂಗಳೂರು ಪ್ರಜಾಕಿರಣ.ಕಾಮ್ : ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಬಗ್ಗೆ ಉತ್ತರಿಸಿ, ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್ ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ […]

ರಾಜ್ಯ

ಕಾಂಗ್ರೆಸ್ ಆಂತರಿಕ‌ ಕಿತ್ತಾಟದಿಂದ ರಾಜ್ಯದ ಆಡಳಿತ ಅಯೋಮಯ

ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ಕಾಂಗ್ರೆಸ್ ನಾಯಕತ್ವದ ವಿರುದ್ದ ಶಾಸಕರೇ ತಿರುಗಿ ಬಿದ್ದಿದ್ದಾರೆ. ದಿನ ಬೆಳಗಾದರೆ ಮುಖ್ಯಮಂತ್ರಿ ಕುರ್ಚಿಯ ಚರ್ಚೆಯೇ ನಡೆಯುತ್ತಿದೆ. ಮುಂದೆ ಯಾರು ಸಿಎಂ ಆಗಬೇಕು ಅನ್ನೋದರ ಕಡೆಯೇ ಕಾಂಗ್ರೆಸ್ ನಾಯಕರೆಲ್ಲರ ಗಮನ ಇದೆ. ಇದರ ದುಷ್ಪರಿಣಾಮದಿಂದಾಗಿ ರಾಜ್ಯದ ಆಡಳಿತ ಅಯೋಮಯವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾದ್ಯಮದರೊಂದಿಗೆ ಮಾತನಾಡಿದ ಕೇಂದ್ರ ಸಚಿವರು, ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಅನ್ನೋದು ಸ್ಪಷ್ಟವಾಗಿದೆ. ಇದರ ಪರಿಣಾಮ ಎಂಬಂತೆ ಅಭಿವೃದ್ಧಿ ಕಾರ್ಯ ಸಂಪೂರ್ಣ ನಿಂತು […]

ರಾಜ್ಯ

ಧಾರವಾಡ : ಆತ್ಮಹತ್ಯೆಗೆ ಯತ್ನಿಸಿದ ಯರಿಕೊಪ್ಪ ಪಿಡಿಒ…..!?

ಧಾರವಾಡ ಪ್ರಜಾಕಿರಣ.ಕಾಮ್ : ಕಿರುಕುಳಕ್ಕೆ ಬೇಸತ್ತು ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಒ ನಾಗರಾಜ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸ್ನೇಹಿತರಿಗೆ ವಿಡಿಯೋ ಕಳ್ಸಿ ಯರಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಒ ಐ ಎಂ ಸ್ವಾರಿ ಸಂದೇಶ ಕಳುಹಿಸಿ ಔಷಧಿ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆರ್.ಟಿ.ಐ ಕಾರ್ಯಕರ್ತ ಮಲ್ಲಿಕಾರ್ಜುನ ರೊಟ್ಟಿಗವಾಡ ಎಂಬ ವ್ಯಕ್ತಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ನಾನು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದು, ವಿಡಿಯೋ […]

ರಾಜ್ಯ

ಕಲಬುರಗಿ ಉದ್ಯಮಿಯ ನಿವೇಶನ ನೊಂದಣಿ ಮಾಡುವಂತೆ ಸಿ.ಎಂ. ಸೂಚನೆ

*ಮುಖ್ಯಮಂತ್ರಿಗಳಿಂದ‌ ಜನಸ್ಪಂದನ* *ಕಲಬುರಗಿ ಉದ್ಯಮಿಯ ನಿವೇಶನ ನೊಂದಣಿ ಮಾಡುವಂತೆ ಸಿ.ಎಂ. ಸೂಚನೆ* ಕಲಬುರಗಿ ಪ್ರಜಾಕಿರಣ.ಕಾಮ್ ನ.27 ಜಿಲ್ಲೆಯ ಜೇವರ್ಗಿ ತಾಲೂಕಿನ ಫುಡ್ ಪಾರ್ಕ್ ನಲ್ಲಿ ಉದ್ಯಮಿ ಮಲ್ಲೇಶಪ್ಪ ಸಿದ್ದಪ್ಪ ಕಲ್ಲೂರ ಅವರು ನಿವೇಶನ ಖರೀದಿಗೆ ನಿಗದಿತ ಹಣ ಪಾವತಿ ಮಾಡಿ 7 ವರ್ಷವಾದರು, ಇದೂವರೆಗೆ ನೊಂದಣಿಯಾಗಿಲ್ಲ. ಕೂಡಲೆ ನಿವೇಶನ ಉದ್ಯಮಿದಾರರ ಹೆಸರಿಗೆ ನೊಂದಾಯಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರಿಗೆ ಸೂಚನೆ‌ ನೀಡಿದರು. ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ “ಕೃಷ್ಣಾ”ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ […]

ರಾಜ್ಯ

ಜನಸ್ಪಂದನೆ : 3500 ಮನವಿ ಸ್ವೀಕರಿಸಿದ ಸಿಎಂ

*ಮುಖ್ಯಮಂತ್ರಿಯವರ ಜನಸ್ಪಂದನ ಕಾರ್ಯಕ್ರಮದಲ್ಲಿ 3812 ಅರ್ಜಿಗಳ ಸ್ವೀಕಾರ* ಬೆಂಗಳೂರು ಪ್ರಜಾಕಿರಣ.ಕಾಮ್ ನ. 27- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟಾರೆ 3812 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ 2862 ಅರ್ಜಿಗಳನ್ನು ಈಗಾಗಲೇ ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, 950 ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗಿದೆ. ಇವುಗಳನ್ನೂ ಸಹ ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ ನೋಂದಾಯಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. *ಮುಖ್ಯಮಂತ್ರಿ ಪರಿಹಾರ ನಿಧಿಯಡಿ ಜನರ ಆರೋಗ್ಯ ಸಮಸ್ಯೆಗೆ ಇದುವರೆಗೆ 25 ಕೋಟಿ ರೂ. […]