ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಜ. 20ಕ್ಕೆ ಮುಂದೂಡಿದ ಹೈಕೋರ್ಟ್

ಧಾರವಾಡ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜನೆವರಿ 20ಕ್ಕೆ ಮುಂದೂಡಿದೆ. ಧಾರವಾಡ ಜಿಲ್ಲೆಯ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿರುವ ಹಿನ್ನಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಈ ಹಿಂದೆ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ವಿಶೇಷ ಸಿಬಿಐ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ನ್ಯಾಯಾಲಯ ವಾದ ಪ್ರತಿವಾದ ಆಲಿಸಿದ ಬಳಿಕ ಅವರ ಜಾಮೀನು ಅರ್ಜಿಯನ್ನು […]

ರಾಜ್ಯ

ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಪವನಕುಮಾರ್ ಮಲಪಾಟಿ ಅಧಿಕಾರ ಸ್ವೀಕಾರ

ಬಳ್ಳಾರಿ prajakiran.com : ಗಣಿನಾಡು ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಪವನಕುಮಾರ ಮಲಪಾಟಿ ಸೋಮವಾರ ಅಧಿಕಾರ ಸ್ವೀಕರಿಸಿದರು. ಕೇಂದ್ರ ಹಣಕಾಸು ಸಚಿವರ ಆಪ್ತ ಕಾರ್ಯದರ್ಶಿಗಳಾಗಿ ನಿಯೋಜಿತರಾಗಿರುವ ನಿರ್ಗಮಿತ ಜಿಲ್ಲಾಧಿಕಾರಿ ‌ಎಸ್.ಎಸ್.ನಕುಲ್ ನೂತನ ಜಿಲ್ಲಾಧಿಕಾರಿ ಪವನಕುಮಾರ ಮಲಪಾಟಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಪವನಕುಮಾರ ಮಲಪಾಟಿ 2012ನೇ‌ ಬ್ಯಾಚ್ ನ ಐಎಎಸ್‌ ಅಧಿಕಾರಿಗಳಾಗಿದ್ದು, ಇದುವರೆಗೆ ವಾಣಿಜ್ಯ ತೆರಿಗೆಗಳ(ಜಾರಿ)ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಈ ಹಿಂದೆ ಸಹಾಯಕ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದರು. ಹೀಗಾಗಿ ನೂತನ ಜಿಲ್ಲಾಧಿಕಾರಿಗೆ ಬಳ್ಳಾರಿ ಜಿಲ್ಲೆಯ ಪರಿಚಯವಿದೆ. […]

ರಾಜ್ಯ

ಜ. 13 ಇಲ್ಲವೇ 14 ರಂದು ಸಂಪುಟ ವಿಸ್ತರಣೆ

ಹುಬ್ಬಳ್ಳಿ prajakiran.com ; ನಿನ್ನೆ ಸಿಎಂ ಬಿಎಸ್ ವೈ ದೆಹಲಿಗೆ ಹೋಗಿ ಬಂದಿದ್ದಾರೆ. ಜ. 13 ಇಲ್ಲವೇ 14 ರಂದು ಸಂಪುಟ ವಿಸ್ತರಣೆ ಆಗಲಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದರು. ಅವರು ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. 7 ಜನರು ಸಚಿವರು ಅಗಲಿದ್ದಾರೆ. ಸದ್ಯ ರಾಜ್ಯಸರ್ಕಾರದ 7 ಸಚಿಚ ಸ್ಥಾನಗಳು ಖಾಲಿ ಇವೆ. ಹೀಗಾಗಿ ಎಳು ಜನರು ಸಚಿವರಾಗಲಿದ್ದಾರೆ ಎಂದರು. ಸಂಪುಟದಿಂದ ಯಾರನ್ನ ಕೈ ಬಿಡಲಿದ್ದಾರೆ ಅನ್ನೋ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದ […]

ರಾಜ್ಯ

ತಮಿಳು ನಾಮಫಲಕ ತೆರವುಗೊಳಿಸಿದ ವಾಟಾಳ್ ನಾಗರಾಜ್

ಬಿಳಿಗಿರಿ ಶ್ರೀನಿವಾಸ ಚಾಮರಾಜನಗರ prajakiran.com : ಕರ್ನಾಟಕ ವ್ಯಾಪ್ತಿಯಲ್ಲಿ ಇದ್ದ ತಮಿಳು ನಾಮಫಲಕಗಳನ್ನು ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ತೆರವುಗೊಳಿಸಿ ಆಕ್ರೋಶ ಹೊರಹಾಕಿದರು. ಚಾಮರಾಜನಗರ ತಾಲೂಕಿನ ಪುಣಜನೂರು ಹಾಗೂ ಕೋಳಿಪಾಳ್ಯ ನಡುವೆ ಹೆದ್ದಾರಿ ಪ್ರಾಧಿಕಾರ ಹಾಗೂ ತಮಿಳುನಾಡಿನ ಸರ್ಕಾರ ಅಳವಡಿಸಿದ್ದ ತಮಿಳು ನಾಮಫಲಕಗಳನ್ನು ಬೆಂಬಲಿಗರೊಟ್ಟಿಗೆ ಸೇರಿ ತೆರವುಗೊಳಿಸಿ, ರಾಜ್ಯಾದ್ಯಂತ ಗಡಿಯಲ್ಲಿರುವ ಅನ್ಯ ಭಾಷಾ ಬೋರ್ಡ್​ಗಳನ್ನು ಕಿತ್ತೆಸೆಯುವುದಾಗಿ ಎಚ್ಚರಿಸಿದರು. ಇದಕ್ಕೂ ಮುನ್ನ ಚಾಮರಾಜನಗರ ರೈಲ್ವೆ ನಿಲ್ದಾಣ ಮುಂಭಾಗ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಸರ್ಕಾರದ ಪ್ರತಿಕೃತಿ ದಹಿಸಿ […]

ರಾಜ್ಯ

ಧಾರವಾಡದಲ್ಲಿ ಸುರಿದ ಧಾರಕಾರಾ ಮಳೆಗೆ ಜನಜೀವನ ತತ್ತರ

ಧಾರವಾಡ prajakiran.com : ಧಾರವಾಡದಲ್ಲಿ ಶುಕ್ರವಾರ ಸಂಜೆ ಸುರಿದ ಧಾರಕಾರಾ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸುಮಾರು ೨ ಗಂಟೆಗಳ ಕಾಲ ಸುರಿದ ಅಕಾಲಿಕ ಮಳೆ ಸಾಕಷ್ಟು ಅವಾಂತರವನ್ನೇ ಸೃಷ್ಟಿಸಿದೆ. ಗಾಳಿ ಸಮೇತ ಅರ್ಧ ಗಂಟೆಗಳ ಕಾಲ ತುಂತುರು ಮಳೆ ಸುರಿದ ಬಳಿಕ ೨ ಗಂಟೆಗಳ ಕಾಲ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ, ಅಂಗಡಿಗಳಿಗೆ, ಹೊಟೇಲ್ ಗಳಿಗೆ ನೀರು ನುಗ್ಗಿದ್ದರಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಅಲ್ಲದೆ, ಹಲವಡೆ ಬೈಕುಗಳು ನೀರಿನಲ್ಲಿ ಕೊಚ್ಚಿಕೊಂಡು […]

ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ, ಸೋದರ ಮಾವ ಚಂದ್ರಶೇಖರ್ ಇಂಡಿ ನ್ಯಾಯಾಂಗ ಬಂಧನದ ಅವಧಿ ಜ. 22ರ ವರೆಗೆ ವಿಸ್ತರಣೆ

ಧಾರವಾಡ prajakiran.com : ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಮತ್ತು ಅವರ ಸೋದರ ಮಾವ ಚಂದ್ರಶೇಖರ್ ಇಂಡಿ ಅಲಿಯಾಸ್ ಚಂದೂ ಮಾಮ ನ್ಯಾಯಾಂಗ ಬಂಧನದ ಅವಧಿಯನ್ನು ಜ. 22ರ ವರೆಗೆ ವಿಸ್ತರಿಸಿ ಧಾರವಾಡದ ಮೂರನೇ ಅಧಿಕ ಹಾಗೂ ವಿಶೇಷ ಸಿಬಿಐ ನ್ಯಾಯಾಲಯ ಆದೇಶ ಹೊರಡಿಸಿದೆ. ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಜ. 8ರಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಮತ್ತೆ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಲಾಯಿತು. ಸಿಬಿಐ […]

ರಾಜ್ಯ

ಹಣಕಾಸು ವ್ಯವಹಾರ : ಧಾರವಾಡದ ಸಪ್ತಾಪುರದಲ್ಲಿ ವಿದ್ಯಾರ್ಥಿಗೆ ಚಾಕು ಇರಿದ ದುಷ್ಕರ್ಮಿಗಳು….!

ಧಾರವಾಡ prajakiran.com : ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಪರಸ್ಪರ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ಯುವಕನಿಗೆ ಚಾಕು ಇರಿದ ಘಟನೆ ಧಾರವಾಡದಲ್ಲಿ ಗುರುವಾರ ಸಂಜೆ ನಡೆದಿದೆ. ಧಾರವಾಡದ ಉಪನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಸಪ್ತಾಪುರ ಬಾವಿ ಹತ್ತಿರ ಇರುವ ದುರ್ಗ ಹೋಟೆಲ್ ಬಳಿ ಸಾಯಂಕಾಲ 7 ಗಂಟೆ ಸುಮಾರಿಗೆ ಕಾಂತೇಶ್ ತಂದೆ ಕೃಷ್ಣ ಲಮಾಣಿ (19) ಎಂಬ ವಿದ್ಯಾರ್ಥಿ ಗೆ ಚಾಕು ಇರಿಯಲಾಗಿದೆ. ಇತ ಧಾರವಾಡದ ಲಕ್ಷ್ಮಿ ಸಿಂಗನ ಕೆರೆ ನಿವಾಸಿ ಎಂದು […]

ರಾಜ್ಯ

ಟ್ರಿಲಿಯನರ್ ಮೈಂಡ್ ಕಂಪನಿ ಹೆಸರಿನಲ್ಲಿ ಚೈನ್ ಲಿಂಕ್ ದಂಧೆ : ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಕುಖ್ಯಾತ ವಂಚಕ ಸಂದೇಶ್ ಶೆಟ್ಟಿ ಬಂಧನ

ಬೆಂಗಳೂರು prajakiran.com : ಟ್ರಿಲಿಯನರ್ ಮೈಂಡ್ಸ್ ಕಂಪನಿ ಹೆಸರಿನಲ್ಲಿ ಚೈನ್ ಲಿಂಕ್ ದಂಧೆ ನಡೆಸುತ್ತಿದ್ದ ಕ್ರಿಮಿನಲ್ ಮೈಂಡ್ ಸಂದೇಶ್ ಶೆಟ್ಟಿಯನ್ನು ಬೆಂಗಳೂರಿನ ಸುಬ್ರಮಣ್ಯ ನಗರ ಠಾಣೆಯ ಪೊಲೀಸರು ಕೊನೆಗೂ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಜ. 5 ರಂದು ರಾತ್ರಿ 11 ಗಂಟೆಗೆ ಸೆರೆ ಹಿಡಿದು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ವಂಚಕನು ಸಾಕಷ್ಟು ದಿನಗಳಿಂದ ತಲೆ ಮರೆಸಿಕೊಂಡಿದ್ದು ಬೆಂಗಳೂರಿಗೆ ಕಾಲಿಟ್ಟ ತಕ್ಷಣವೇ ಆತನಿಗೆ ಖೆಡ್ಡಾ ತೋಡಿದ್ದಾರೆ. ಈತ ಅಮಾಯಕ ನಿರುದ್ಯೋಗಿ ಯುವಕರನ್ನೇ ಟಾರ್ಗೆಟ್ ಮಾಡಿ ಜನರಿಂದ ಹಣ ಪಡೆದು, […]

ರಾಜ್ಯ

ಮೂರು ಸಾವಿರ ಮಠದ ಆಸ್ತಿ ವಿವಾದದ ಬಗ್ಗೆ ಸಾರ್ವಜನಿಕರಿಗೆ, ಭಕ್ತರಿಗೆ ಮಾಹಿತಿ ನೀಡುವುದು ಅವಶ್ಯಕ

ಹುಬ್ಬಳ್ಳಿ prajakiran.com : ಕೆಎಲ್ಇ ಸಂಸ್ಥೆಗೆ ಮೂರುಸಾವಿರ ಮಠದ ಆಸ್ತಿ ದಾನದ ಹಿಂದೆ ಹಣದ ವ್ಯವಹಾರ ನಡೆದಿದೆ ಎಂಬ ದಿಂಗಾಲೇಶ್ವರ ಶ್ರೀಗಳ ಆರೋಪದ ಬಗ್ಗೆ ನಮಗೆ ಮಾಹಿತಿ ಇಲ್ಲ. ಮಾಹಿತಿ ಇದ್ದವರು ದಾಖಲೆ ಬಿಡುಗಡೆ ಮಾಡಬೇಕು ಎಂದು ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ದಿಂಗಾಲೇಶ್ವರ ಶ್ರೀಗಳಿಗೆ ಸವಾಲು ಹಾಕಿದರು. ಮಠದ ಆಸ್ತಿ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ಮೂರುಸಾವಿರ ಮಠದ ಆಸ್ತಿ ಬಗ್ಗೆ ಸ್ವಾಮೀಜಿಗಳ ಜೊತೆ ಮಾತನಾಡಿದ್ದೇನೆ. ಮಠದಲ್ಲಿ ಏನೇನಾಗಿದೆ ಅದರ ಮಾಹಿತಿ ತೆಗೆದುಕೊಳ್ಳಲು ಹೇಳಿದ್ದೇನೆ. ಅಲ್ಲದೇ […]

ರಾಜ್ಯ

ಜೆಡಿಎಸ್, ಬಿಜೆಪಿ ಮೈತ್ರಿ ಕೇವಲ ಗಾಳಿ ಸುದ್ದಿ ಎಂದ ಹೊರಟ್ಟಿ

ಹುಬ್ಬಳ್ಳಿ prajakiran.com : ಜೆಡಿಎಸ್ ಬಿಜೆಪಿ ಮೈತ್ರಿ ಅನ್ನೋದು ಕೇವಲ ಗಾಳಿಸುದ್ದಿ ಅಷ್ಟೇ‌ ಎಂದು ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ತಿಳಿಸಿದರು. ಅವರು ಗುರುವಾರ ನಗರದಲ್ಲಿ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದರು. ಪರಿಷತ್ ಸಭಾಪತಿ ಆಯ್ಕೆಯನ್ನ ಜೆಡಿಎಸ್ ನವರನ್ನ ಬಿಟ್ಟು ಯಾವ ಪಕ್ಷದವರು ಮಾಡಲು ಸಾಧ್ಯವಿಲ್ಲ ಎಂದರು. ಬಸವರಾಜ ಹೊರಟ್ಟಿಯವರು ಪರಿಷತ್ ಸಭಾಪತಿ ಆಗುವುದಕ್ಕೆ ಮೂರು ಪಕ್ಷದಿಂದ ಸಹಮತವಿದೆ. ನಾನು ಹಿರಿಯ ಸದಸ್ಯ ಎನ್ನುವ ಕಾರಣಕ್ಕೆ ಅವಿರೋಧ ಆಯ್ಕೆಗೆ ಮೂರು ಪಕ್ಷದವರು ಸಹಮತ ವ್ಯಕ್ತಪಡಿಸಿದ್ದಾರೆ […]