ರಾಜ್ಯ

ಹಳಿ ತಪ್ಪಿದ ಬೆಂಗಳೂರು-ತಾಳಗುಪ್ಪ ಇಂಟರ್ಸಿಟಿ ರೈಲು : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಶಿವಮೊಗ್ಗ prajakiran.com : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಬಸವಪುರ ಬಳಿ ರೈಲ್ವೆ ಟ್ರ್ಯಾಕ್ ಮಧ್ಯೆ ನಿನ್ನೆ ರಾತ್ರಿ ಬೆಂಗಳೂರಿನಿಂದ ತಾಳಗುಪ್ಪಕ್ಕೆ ತೆರಳುತ್ತಿದ್ದ ಇಂಟರ್ಸಿಟಿ ರೈಲಿನ ಇಂಜಿನ್ ಗಾಲಿ ರೈಲ್ವೆ ಟ್ರ್ಯಾಕ್ ಬಿಟ್ಟು ಕೆಳಗೆ ಇಳಿದಿದೆ. ಅದರಿಂದಾಗಿ ರೈಲು ಅಲ್ಲಿಯೇ ನಿಂತಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿದ್ದು, ಪ್ರಯಾಣಿಕರೆಲ್ಲರು ಸುರಕ್ಷಿತರಾಗಿದ್ದಾರೆ . ಹಳಿ ತಪ್ಪಿದ ರೈಲು ಇಂಜಿನಿನ ಮುಂದಿನ ಎರಡು ಚಕ್ರವು ಕೆಳಗೆ ಇಳಿದಿತ್ತು. ತಕ್ಷಣ ರೈಲು ಅವಘಡ ಅರಿತು ಚಾಲಕ ಅದನ್ನು […]

ರಾಜ್ಯ

ಧಾರವಾಡ ಜಿಲ್ಲೆಗೆ ಬ್ರಿಟನ್ ನಿಂದ ಮತ್ತೆ 10 ಜನ ಆಗಮನ

ಧಾರವಾಡ : ಬ್ರಿಟನ್ ನಿಂದ ಧಾರವಾಡ ಜಿಲ್ಲೆಗೆ ಮತ್ತೆ 10 ಜನ ಆಗಮಿಸಿದ್ದು, ಅದರಲ್ಲಿ ಏಳು ಜನರನ್ನು ತಪಾಸಣೆ ಮಾಡಲಾಗಿದೆ. ಅವರ ವರದಿ ನೆಗೆಟಿವ್ ಎಂದು ಬಂದಿದೆ. ಇನ್ನುಳಿದ 3 ಜನರಿಗಾಗಿ ಶೋಧ ನಡೆದಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಇನ್ನುಳಿದ ಮೂವರನ್ನು ಪತ್ತೆ ಮಾಡಿ ಅವರನ್ನೂ ತಪಾಸಣೆಗೊಳಪಡಿಸಲಾಗುವುದು. ಮೊನ್ನೆ ಬ್ರಿಟನ್ ನಿಂದ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ಕಲಬುರ್ಗಿಯಲ್ಲಿದ್ದಾರೆ. ಅವರನ್ನು ಅಲ್ಲೇ ತಪಾಸಣೆಗೊಳಪಡಿಸಲು ಅಲ್ಲಿನ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ ಎಂದರು. […]

ರಾಜ್ಯ

ಡಿ.31 ಹಾಗೂ ಜ.1ರಂದು ಹುಬ್ಬಳ್ಳಿಯ ನೃಪತುಂಗ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಹುಬ್ಬಳ್ಳಿ prajakiran.com : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶ ಹಾಗೂ ಕೊರೊನಾ ಹರಡುವಿಕೆ ನಿಯಂತ್ರಣ ಉದ್ದೇಶದಿಂದ ಸಾರ್ವಜನಿಕ ಹಿತದೃಷ್ಟಿಯಿಂದ ನಾಳೆ ಡಿ. 31 ರ ಬೆಳಿಗ್ಗೆ 11 ಗಂಟೆಯಿಂದ ನಾಳಿದ್ದು ಜ.01 ರ ರಾತ್ರಿ 12 ಗಂಟೆಯವರೆಗೆ ಹುಬ್ಬಳ್ಳಿಯ ನೃಪತುಂಗ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಆದೇಶ ಹೊರಡಿಸಿದ್ದಾರೆ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897 ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ ಕೋವಿಡ್ 19 […]

ರಾಜ್ಯ

ಯೋಗೀಶಗೌಡ ಹತ್ಯೆ ಪ್ರಕರಣದ ಐವರು ಆರೋಪಿಗಳ ಜಾಮೀನು ಅರ್ಜಿ ವಜಾ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದ ಐವರು ಪ್ರಮುಖ ಆರೋಪಿಗಳ ಜಾಮೀನು ಅರ್ಜಿಯನ್ನು ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ವಿಶೇಷ ಸಿಬಿಐ ನ್ಯಾಯಾಲಯ ವಜಾಗೊಳಿಸಿದೆ. ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಗಂಗಾಧರ ಸಿ.ಎಂ. ಅವರು ಈ ಮಹತ್ವದ ಆದೇಶ ಹೊರಡಿಸಿದರು. ಐವರು ಆರೋಪಿಗಳಾದ ಅಶ್ವಥ್ ಎಸ್, ನಜೀರ್ ಅಹ್ಮದ್, ಶಹಾನವಾಜ್ , ನೂತನ್ ಕೆ.ಎಸ್, ಹರ್ಷಿತ್ ಅವರ ಪರ ಇಬ್ಬರು […]

ರಾಜ್ಯ

ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪ ಸಭಾಪತಿ ಧರ್ಮೆಗೌಡ…..!

ಚಿಕ್ಕಮಗಳೂರು prajakiran.com: ವಿಧಾನ ಪರಿಷತ್ ಉಪ ಸಭಾಪತಿಯಾಗಿದ್ದ ಎಸ್. ಎಲ್. ಧರ್ಮೆಗೌಡ ಸೋಮವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ಆರುಗಂಟೆಗೆ ಸಖರಾಯಪಟ್ಟಣದಿಂದ ಗುಣಸಾಗರಕ್ಕೆ ಕಾರಿನಲ್ಲಿ ಚಾಲಕನೊಂದಿಗೆ ಬಂದಿದ್ದ ಅವರು ರೈಲು ಹಳಿ ವಾಹನದಿಂದ ಇಳಿದು ಹೋಗಿದ್ದರು. ಆ ಬಳಿಕ ಕಡೂರು ವ್ಯಕ್ತಿ ಗೆ ಕರೆ ಮಾಡಿ ರೈಲಿನ ಸಮಯ ವಿಚಾರಿಸಿದ್ದರು. ಜನ ಶತಾಬ್ದಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದರು. ಈ ವೇಳೆ ಅವರು ಡೆತ್ ನೋಟ್ ಬರೆದಿದ್ದಾರೆ. ಜೆಡಿಎಸ್ ನಾಯಕ ಹಾಗೂ ಮೇಲ್ಮನೆ ಸದಸ್ಯರೊಬ್ಬರು ಆತ್ಮಹತ್ಯೆ ಹಾದಿ […]

ರಾಜ್ಯ

ಮಾಜಿ ಸಚಿವ ವಿನಯ್ ಕುಲಕರ್ಣಿ, ಸೋದರ ಮಾವ ಚಂದೂ ಮಾಮ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಧಾರವಾಡ prajakiran.com : ಧಾರವಾಡದ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅವರ ಸೋದರ ಮಾವ ಚಂದೂ ಮಾಮ ನ್ಯಾಯಾಂಗ ಬಂಧನ ಅವಧಿ ಮತ್ತೆ‌‌ ವಿಸ್ತರಣೆಗೊಂಡಿದೆ. ಸೋಮವಾರ ಡಿ. 28ಕ್ಕೆ ಇಬ್ಬರ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಮತ್ತೆ ಅವಧಿ ವಿಸ್ತರಿಸುವಂತೆ ಧಾರವಾಡದ ಮೂರನೇ ಅಧಿಕ ನ್ಯಾಯಾಲಯ ಹಾಗೂ ವಿಶೇಷ ಸಿಬಿಐ ನ್ಯಾಯಾಲಯದ ಎದುರು ಅವರ ಪರ ವಕೀಲರು ಮನವಿ […]

ರಾಜ್ಯ

ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಸ್ತಾಪ ಬಿಜೆಪಿ ಮುಂದಿಲ್ಲ

ಹುಬ್ಬಳ್ಳಿ prajakiran.com : ಜೆಡಿಎಸ್‌ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಮತ್ತು ವಿಲೀನ ಮಾಡಿಕೊಳ್ಳುವ ಪ್ರಸ್ತಾಪ ಬಿಜೆಪಿ ಮುಂದಿಲ್ಲ. ವಿಷಯಾಧಾರಿತ ಹೊಂದಾಣಿಕೆಯೇ ಬೇರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಅವರು ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ‘ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸಂಖ್ಯಾಬಲ ಇಲ್ಲ. ಹಾಗಾಗಿ ಅಲ್ಲಿ ವಿಷಯಾಧಾರಿತ ಹೊಂದಾಣಿಕೆ ಮಾಡಕೊಳ್ಳಲಾಗಿದೆ ಎಂದು ಹೇಳಿದರು. ಅದನ್ನು ಬಿಟ್ಟರೆ ಜೆಡಿಎಸ್‌ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದರು. ಸ್ವಂತ ಬಲದ ಮೇಲೆ ದೇಶಾದ್ಯಂತ ಪಕ್ಷವನ್ನು […]

ರಾಜ್ಯ

ಧಾರವಾಡದಲ್ಲಿ ಜಾಗಟೆ ಬಾರಿಸುವ ಮೂಲಕ ರೈತರ ಹೋರಾಟಕ್ಕೆ ಸಾಥ್

ಧಾರವಾಡ prajakiran.com : ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ರೈತರು ಕಳೆದ ಹಲವು ದಿನಗಳಿಂದ ನಿರಂತರವಾಗಿ ಹಗಲು ರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಕ್ಯಾರೆ ಎನ್ನದಿರುವುದು ತೀವ್ರ ನೋವಿನ ಸಂಗತಿಯಾಗಿದೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ಕಿಡಿಕಾರಿದರು. ಅವರು ಭಾನುವಾರ ರಾತ್ರಿ ರೈತರ ಹೋರಾಟ ಬೆಂಬಲಿಸಿ ಧಾರವಾಡದ ಕಲಾಭವನದ ಎದುರಿನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಎದುರು ಜಾಗಟೆ ಬಾರಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಒಂದು ಗಂಟೆಗಳ […]

ರಾಜ್ಯ

ಜ. 14ಕ್ಕೆ ಕೂಡಲ ಸಂಗಮದಿಂದ ಬೆಂಗಳೂರಿಗೆ ಪಾದಯಾತ್ರೆ

ಧಾರವಾಡ prajakiran.com : ಪಂಚಮಸಾಲಿ ಸಮಾಜದ 2ಎ ಮೀಸಲಾತಿಗಾಗಿ ವೀರಪ್ಪ ಮೋಯ್ಲಿಯಿಂದ ಯಡಿಯೂರಪ್ಪವರೆಗೆ ಮನವಿ ಮಾಡಿಕೊಂಡಿದ್ದೇವೆ‌  ಇವರಿಗೆಲ್ಲ ಮನವಿ ಕೊಟ್ಟು, ಶಾಲು ಹಾಕಿ ಸನ್ಮಾನ ಮಾಡಿ ವಿನಂತಿ ಮಾಡಿದ್ದೆಲ್ಲ ಸಾಕಾಗಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಅವರು ಧಾರವಾಡದಲ್ಲಿ ಸಮಾಜದ ಮುಖಂಡರ ಸಭೆ ನಡೆಸಿ, ನಮ್ಮ ಸಮಾಜದ ಸಂಘಟನೆ ಆರಂಭವಾಗಿ 20 ವರ್ಷ ಆಗಿವೆ. ರಾಜ್ಯವನ್ನು ಸ್ವತಂತ್ರ ಬಂದಾಗಿನಿಂದ 8 ಜನ ಲಿಂಗಾಯತ ಸಿಎಂಗಳಾಗಿದ್ದಾರೆ. ಆದರೆ ರಾಜಕೀಯ ಜಾಗೃತಿಗೆ […]

ರಾಜ್ಯ

ಬಸ್ – ಕ್ರೂಸರ್ ನಡುವೆ ಡಿಕ್ಕಿ : ಐವರ ಸಾವು, ಏಳು ಜನರಿಗೆ ತೀವ್ರ ಗಾಯ

ಚಿತ್ರದುರ್ಗ prajakiran.com : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹಾಗೂಕ್ರೂಸರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಳು ಜನರು ತೀವ್ರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಇದರಿಂದಾಗಿ ಕ್ರೂಸರ್‌ನಲ್ಲಿದ್ದ ದುರ್ಗಪ್ಪ, ಮಹೇಶ, ತಿಮ್ಮಣ್ಣ, ರತ್ನಮ್ಮ ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರಿನವರು ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ತೆರಳುತ್ತಿದ್ದ […]