ರಾಜ್ಯ

ಧಾರವಾಡದ ಮನಸೂರಿನಲ್ಲಿ ಮತ್ತೆ ಮೂರು ಕರುಗಳ ಮೇಲೆ ಚಿರತೆ ದಾಳಿ…!

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ತಾಲೂಕಿನ  ಮನಸೂರ ಗ್ರಾಮದಲ್ಲಿ ಕಳೆದೊಂದು ವಾರದಿಂದ ಬೀಡು ಬಿಟ್ಟಿರುವ ಚಿರತೆ ಇದೀಗ ಮತ್ತೊಮ್ಮೆ ಮೂರು ಕರುಗಳ ಮೇಲೆ ದಾಳಿ ಮಾಡಿದೆ. ಇದರಿಂದಾಗಿ ಮೂರು ಕರುಗಳು ಚಿರತೆಯ ರಕ್ತದಾಹಕ್ಕೆ ಬಲಿಯಾದಂತಾಗಿವೆ. ಇದರಿಂದಾಗಿ ರೈತ ಸಮುದಾಯ ಮತ್ತಷ್ಟು ಆತಂಕಕ್ಕೆ ಸಿಲುಕಿದೆ. ಧಾರವಾಡ ತಾಲೂಕಿನ ಮನಸೂರ ಗ್ರಾಮದ ಬಳಿಯ ಜೋಶಿ ಫಾರ್ಮ್ ಹೌಸ್ ನಲ್ಲಿ ಕಟ್ಟಿದ್ದ ಆಕಳ‌ ಕರುಗಳ ಮೇಲೆ ನಿನ್ನೆ ತಡರಾತ್ರಿ ಚಿರತೆ ಈ ದಾಳಿ ನಡೆಸಿದೆ. ಕಳೆದ‌ ವಾರ‌ ಇದೇ ಗ್ರಾಮದಲ್ಲಿ ಕುಬೇರಪ್ಪ […]

ರಾಜ್ಯ

ಗೂಂಡಾ ಮುಕ್ತ ಧಾರವಾಡ ಮಾಡಿ : ಬಸವರಾಜ‌ ಕೊರವರ

ಧಾರವಾಡ ಪ್ರಜಾಕಿರಣ.ಕಾಮ್  : ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಗೂಂಡಾ ಕಾಯ್ದೆಯಡಿ ರೌಡಿಶೀಟರ್ ಗಡಿಪಾರು ಮಾಡಲು ಒತ್ತಾಯಿಸಿ ನೂರಾರು ಆಟೋ ಚಾಲಕರು ಧಾರವಾಡದ ಜನಜಾಗೃತಿ ಸಂಘ ಅಧ್ಯಕ್ಷರಾದ ಬಸವರಾಜ ಕೊರವರ ಹಾಗೂ ನಾಗರಾಜ ಕಿರಣಗಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ, ಮುಖ್ಯಮಂತ್ರಿ ಹಾಗೂ ಗೃಹಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಕೊರವರ, ವಿದ್ಯಾನಗರಿ ಧಾರವಾಡದಲ್ಲಿ ಪುಂಢರು ಹಾವಳಿ ವಿಪರೀತ ಹೆಚ್ಚಿದೆ. ಹಲವರಂತೂ ಗ್ಯಾಂಗ್ ಕಟ್ಟಿಕೊಂಡು ರಾಜಾರೋಷವಾಗಿ ಅಂಧಾ ದರ್ಬಾರ್ ನಡೆಸುತ್ತಿದ್ದಾರೆ. […]

ರಾಜ್ಯ

ಧಾರವಾಡದ ಆರ್‌ಎಫ್‌ಓ ಮಹೇಶ ಹಿರೇಮಠ ಮನೆ, ಕಚೇರಿ ಮೇಲೆ ಲೋಕಾ ದಾಳಿ

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಅರಣ್ಯ ಇಲಾಖೆಯ ವಿಭಾಗೀಯ ಅರಣ್ಯ ಅಧಿಕಾರಿಯ ಮಹೇಶ ಹಿರೇಮಠ ಅವರ ಮನೆ ಮೇಲೆ ಲೋಕಾಯುಕ್ತರು ಬುಧವಾರ ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದು, ಮಹತ್ವದ ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ. ಧಾರವಾಡದ ಕುಮಾರೇಶ್ವರ ಬಡಾವಣೆಯ ಮೂಕಾಂಬಿಕಾ ನಗರದಲ್ಲಿರುವ ಆರ್‌ಎಫ್‌ಓ ಮಹೇಶ ಹಿರೇಮಠ ಅವರ ಮನೆ ಮತ್ತು ಕಚೇರಿಯಲ್ಲಿ ಲೋಕಾಯುಕ್ತರು ಪರಿಶೀಲನೆ ಆರಂಭಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಶಂಕರ ರಾಗಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆಗಳನ್ನು ಕ್ರೋಡಿಕರಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.   Share on: WhatsApp

ರಾಜ್ಯ

ನಾಡಿನ ಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪಸೆ ಇನ್ನು ನೆನಪು ಮಾತ್ರ…!

ನಾಡಿನ ಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪಸೆ ಇನ್ನು ನೆನಪು ಮಾತ್ರ…! ಧಾರವಾಡ ಪ್ರಜಾಕಿರಣ.ಕಾಮ್ : ನಾಡಿನ ಹಿರಿಯ ಸಾಹಿತಿಗಳಾಗಿದ್ದ ಡಾ. ಗುರುಲಿಂಗ ಕಾಪಸೆ ಅವರು ತಮ್ಮ 96 ನೇ ವಯಸ್ಸಿನಲ್ಲಿ ಬುಧವಾರ ಬೆಳಗ್ಗೆ ನಿಧನ ಹೊಂದಿದರು. ಅವರ ಅಂತಿಮ ದರ್ಶನವನ್ನು ಧಾರವಾಡದ ಸಪ್ತಾಪೂರ ಬಳಿಯ ದುರ್ಗಾ ಕಾಲೋನಿ ಯಲ್ಲಿರುವ ಅವರ ನಿವಾಸದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ನಂತರ ಅವರ ದೇಹವನ್ನು ಬೈಲಹೊಂಗಲನ ಡಾ. ಮಹಾಂತೇಶ ರಾಮಣ್ಣವರ ಆಸ್ಪತ್ರೆಗೆ ನೀಡಲಾಗುವುದು. ಗುರುಲಿಂಗ ಕಾಪಸೆ ಗುರುಗಳು […]

ರಾಜ್ಯ

ಯುಪಿಎ ಅವಧಿಯಲ್ಲಿ ಬಂದ ಎನ್ ಡಿಆರ್ ಎಫ್ ಹಣ ಸರ್ಕಾರ ಬಹಿರಂಗಪಡಿಸಲಿ

*ಯುಪಿಎ, ಎನ್ ಡಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ಸರ್ಕಾರ ಬಹಿರಂಗಪಡಿಸಲಿ: ಬಸವರಾಜ ಬೊಮ್ಮಾಯಿ ಸವಾಲು* *ಮತದಾನದ ಮೂಲಕ ಜನರೇ ಕಾಂಗ್ರೆಸ್ ನವರ ಕಪಾಳಕ್ಕೆ ಹೊಡೆಯುತ್ತಾರೆ: ಬಸವರಾಜ ಬೊಮ್ಮಾಯಿ* ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸವಾಲ್ ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ […]

ರಾಜ್ಯ

ಕರ್ನಾಟಕದ ಉದ್ದಗಲಕ್ಕೂ ಮೋದಿ ಗಾಳಿ : ಬೊಮ್ಮಾಯಿ

*ಸ್ಟಾರ್ ಪ್ರಚಾರಕರ ಬಗ್ಗೆ ಪಕ್ಷ ತೀರ್ಮಾನ ಮಾಡಲಿದೆ: ಬಸವರಾಜ ಬೊಮ್ಮಾಯಿ* *ಕರ್ನಾಟಕದ ಉದ್ದಗಲಕ್ಕೂ ಮೋದಿ ಗಾಳಿ ಇದೆ: ಬಸವರಾಜ ಬೊಮ್ಮಾಯಿ* ಹಾವೇರಿ ಪ್ರಜಾಕಿರಣ.ಕಾಮ್ : ಚುನಾವಣಾ ಪ್ರಚಾರಕ್ಕೆ ಬರುವ ಸ್ಟಾರ್ ಪ್ರಚಾರಕರ ಜೊತೆ ಮಾತುಕತೆ ನಡೆಯುತ್ತಿದೆ. ಸ್ಟಾರ್ ಪ್ರಚಾರಕರ ಕುರಿತು ಪಕ್ಷ ತೀರ್ಮಾನ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಸಂದರ್ಭದಲ್ಲಿ ಹಾನಗಲ್ ತಾಲೂಕು ಮಾಸಣಕಟ್ಟಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಮಾತನಾಡಿದರು. ನಮಗೆ ಜನರಿಂದ ಅದ್ಭುತವಾದ ಪ್ರತಿಕ್ರಿಯೆ ಸಿಗುತ್ತಿದೆ. ಜನ […]

ರಾಜ್ಯ

ಧಾರವಾಡದ ಉಪನಗರ ಠಾಣೆ ಎದುರು ಮಧ್ಯರಾತ್ರಿ ದಿಢೀರ್ ಪ್ರತಿಭಟನೆ

*ಧಾರವಾಡದ ಉಪನಗರ ಪೊಲೀಸ್ ಠಾಣೆ ಎದುರು ಮಧ್ಯರಾತ್ರಿ ಆಟೋ ಚಾಲಕರ ದಿಢೀರ್ ಪ್ರತಿಭಟನೆ* *ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳಿಗೆ ಸ್ಟೇಶನ್ ಬೇಲ್ ನೀಡಿದ ಪೊಲೀಸರ ಕ್ರಮಕ್ಕೆ ವ್ಯಾಪಕ ಖಂಡನೆ* *ಆಟೋ ಚಾಲಕರ ಹೋರಾಟಕ್ಕೆ ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಸಾಥ್* *ಪೊಲೀಸರ ಮನವೊಲಿಕೆ ಬಳಿಕ ತಾತ್ಕಾಲಿಕವಾಗಿ ಪ್ರತಿಭಟನೆ ಹಿಂದಕ್ಕೆ* *ಮಾ.27ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆಗೆ ನಿರ್ಧಾರ* ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರು ರೌಡಿಶೀಟರ್ ಗಳಾದ ನವೀನ್ […]

ರಾಜ್ಯ

ಧಾರವಾಡ : 61.14 ಲಕ್ಷ ಮೌಲ್ಯದ ವಜ್ರ ಮಿಶ್ರಿತ ಚಿನ್ನ ದೋಚಿದ್ದ ಅಂತರಾಜ್ಯ ಆರೋಪಿ ಅರೆಸ್ಟ್

ಮದುವೆ ಮನೆಗಳೇ ಇವರ ಟಾರ್ಗೆಟ್-ವಜ್ರ ಮಿಶ್ರಿತ ಚಿನ್ನ ದೋಚಿದ್ದ ಅಂತರಾಜ್ಯ ಆರೋಪಿ ಅರೆಸ್ಟ್ *ಒಂದು ಸಿಸಿಟಿವಿ ದೃಶ್ಯಾವಳಿ ಇಟ್ಟುಕೊಂಡು ಮುಂಬೈ, ಭೋಪಾಲ್‌, ಇಂದೋ‌ರ್, ಗುಜರಾತ್, ಅಹ್ಮದಾಬಾದ್, ಮಧ್ಯಪ್ರದೇಶದಲ್ಲಿ ತನಿಖೆ ನಡೆಸಿದ ಧಾರವಾಡದ ವಿದ್ಯಾಗಿರಿ ಪೊಲೀಸರು* *61.14 ಲಕ್ಷ ವಜ್ರ ಮಿಶ್ರಿತ ಚಿನ್ನಾಭರಣಗಳ ಬ್ಯಾಗ್ ವಿದ್ಯಾಗಿರಿ ಪೊಲೀಸ್ ವಶಕ್ಕೆ* *ಬ್ಯಾಂಡ್‌ ಬಾಜಾ ಬಾರಾತ್ ಗ್ಯಾಂಗ್ ಬಗ್ಗೆ ಎಚ್ಚರ* ಧಾರವಾಡ ಪ್ರಜಾಕಿರಣ.ಕಾಮ್ : ಮದುವೆ ಮನೆಗಳನ್ನೇ ಟಾರ್ಗೆಟ್ ಮಾಡಿ, ಬೀಗರಂತೆ ಮದುವೆಗೆ ಬಂದು ಮದುವೆ ಮನೆಯಲ್ಲಿನ ಚಿನ್ನಾಭರಣಗಳನ್ನು ಯಾರಿಗೂ ಗೊತ್ತಾಗದಂತೆ […]

ರಾಜ್ಯ

ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು ಪ್ರಜಾಕಿರಣ.ಕಾಮ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಮತ್ತು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಬಿಜೆಪಿ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ತೊರೆದ ಮರಿತಿಬ್ಬೇಗೌಡ ಅವರು ತಮ್ಮ ಅಪಾರ ಅಭಿಮಾನಿಗಳ ಜತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಜತೆಗೆ ಮಳವಳ್ಳಿ, ಬೆಂಗಳೂರಿನ ರಾಜರಾಜೇಶ್ವರಿ ವಿಧಾನ ಸಭಾ […]

ರಾಜ್ಯ

ಬಿಜೆಪಿಗೆ ಪ್ರಜಾತಂತ್ರ, ಸಂವಿಧಾನದ ಮೇಲೆ ನಂಬಿಕೆ ಇಲ್ಲ : ಸಿ.ಎಂ.ಸಿದ್ದರಾಮಯ್ಯ

*BJP ಗೆ ಪ್ರಜಾತಂತ್ರ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಸರ್ವಾಧಿಕಾರದಲ್ಲಿ ಮಾತ್ರ ನಂಬಿಕೆ ಇದೆ: ಸಿ.ಎಂ.ಸಿದ್ದರಾಮಯ್ಯ* *ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಬೇಕು: ಸಿ.ಎಂ.ಸಿದ್ದರಾಮಯ್ಯ ಆಗ್ರಹ* *ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ* *ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ: ಸಿ.ಎಂ ವಿಶ್ವಾಸ* ಬೆಂಗಳೂರು ಪ್ರಜಾಕಿರಣ.ಕಾಮ್ ಮಾ 22: ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ […]