ಧಾರವಾಡ prajakiran.com : ಧಾರವಾಡ ಜಿಲ್ಲೆಯ ಜಿಪಂ ಸದಸ್ಯ
ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿಯನ್ನು ಗುರುವಾರ ಕೋರ್ಟ್ ಮುಂದೆ
ಹಾಜರುಪಡಿಸಿದರು.
ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು.
ಚಂದ್ರಶೇಖರ ಇಂಡಿ ಅಲಿಯಾಸ್ ಚಂದೂ ಮಾಮನನ್ನ
ಅಕ್ರಮ ಶಸ್ತ್ರಾಸ್ತ್ರ ಪೂರೈಕೆ ಆರೋಪದಡಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.
ಆ ಬಳಿಕ ಹೆಚ್ಚಿನ ವಿಚಾರಣೆಗೆ
ಸಿಬಿಐ ವಿಶೇಷ ನ್ಯಾಯಾಲಯ
ಸಿಬಿಐ ಕಸ್ಟಡಿಗೆ ವಹಿಸಿತ್ತು.
ಸಿಬಿಐ ಕಸ್ಟಡಿ ಮುಗಿದ ಪರಿಣಾಮ ಮತ್ತೆ ನ್ಯಾಯಾಂಗ ಬಂಧನಕ್ಕೆ ಇಂಡಿಯನ್ನು ಒಪ್ಪಿಸಲಾಯಿತು.
ಅಲ್ಲದೆ, ಡಿ. 19 ರಂದು ಕುಟುಂಬಸ್ಥರನ್ನು ಭೇಟಿಯಾಗಲು ಅವಕಾಶ ನೀಡಿ ಆದೇಶ ಹೊರಡಿಸಿದೆ.
ಹೀಗಾಗಿ ಇಂದು ಮತ್ತೆ ಧಾರವಾಡ ಕೇಂದ್ರ ಕಾರಾಗೃಹಕ್ಕೆ ಇಂಡಿಯನ್ನು ಹಸ್ತಾಂತರಿಸಲಾಯಿತು.
ಡಿ. 28 ರವರೆಗೆ ನ್ಯಾಯಾಂಗ ಬಂಧನ ವಿಧಿಸಿರುವುದನ್ಬು ಇಲ್ಲಿ ಸ್ಮರಿಸಬಹುದು.