ರಾಜ್ಯ

ಯೋಗೀಶಗೌಡ ಕೊಲೆ ಪ್ರಕರಣ : ಮಾಜಿ ಆಪ್ತ ಕಾರ್ಯದರ್ಶಿ ಸೋಮು ನ್ಯಾಮಗೌಡ ಜೊತೆಗೆ, ನಾಗರಾಜ ಕರಿಗಾರ, ಮಲ್ಲಮ್ಮ ಗೌಡರ, ನಾಗರಾಜ ಗೌರಿ, ಮುತ್ತಗಿ ವಿಚಾರಣೆ ನಡೆಸಿದ ಸಿಬಿಐ

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕೇಶ ರಂಜನ್ ನೇತೃತ್ವದ ಸಿಬಿಐ ಅಧಿಕಾರಿಗಳು ಗುರುವಾರ ಬೆಳಗ್ಗೆ ಮಾಜಿ ಆಪ್ತ ಕಾರ್ಯದರ್ಶಿ ಸೋಮು ನ್ಯಾಮಗೌಡ ವಶಕ್ಕೆ ಪಡೆದ ಬೆನ್ನಲ್ಲೇ ಹಲವರನ್ನು ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಹಲವರನ್ನು ಕರೆಸಿ ವಿಚಾರಣೆ ಆರಂಭಿಸಿದೆ‌.

ಕಾಂಗ್ರೆಸ್ ಮುಖಂಡ ನಾಗರಾಜ್ ಗೌರಿ, ಯೋಗೀಶಗೌಡ ಪತ್ನಿ ಮಲ್ಲಮ್ಮ‌ಗೌಡರ್‌, ಜಿಪಂ ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ್‌ ಹಾಗೂ ವಿನಯ ಕುಲಕರ್ಣಿ ಆಪ್ತ ಬಸವರಾಜ ಮುತ್ತಗಿಗೆ ಸಿಬಿಐ ಬುಲಾವ್ ನೀಡಿದೆ.

ಅವರೆಲ್ಲಾ ಧಾರವಾಡ ಉಪನಗರ ಠಾಣೆಗೆ ಆಗಮಿಸಿ ಸಿಬಿಐ ನಿಂದ ಮೊದಲು ಪ್ರತ್ಯೇಕವಾಗಿ ಹಾಗೂ ಆನಂತರ ಒಟ್ಡಿಗೆ ವಿಚಾರಣೆಯನ್ನು ಎದುರಿಸುತ್ತಿದ್ದಾರೆ‌.

ಈಗಾಗಲೇ ಇವರೆಲ್ಲರೂ ಸಿಬಿಐ ನಿಂದ ಹಲವು ಸಲ ವಿಚಾರಣೆ ಎದುರಿಸಿದ್ದಾರೆ‌.

ಇದೀಗ ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ  ಸೋಮು ನ್ಯಾಮಗೌಡ ಬಂಧನದ ಬೆನ್ನಲ್ಲೇ ಮತ್ತೊಂದು ಸುತ್ತಿನ ವಿಚಾರಣೆ ನಡೆಸಿ, ಮಹತ್ತರವಾದ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ ಎನ್ನಲಾಗಿದೆ ‌.

ಸೋಮು ನ್ಯಾಮಗೌಡ ಕರೋನಾ ವರದಿ ನೆಗೆಟಿವ್ ಬಂದಿದ್ದು, ನ್ಯಾಯಾಲಯ ಎ್ಉರು ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸುತ್ತಾರಾ ಎಂಬುದನ್ನು ಕಾದು ನೋಡಬೇಕು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *