ರಾಜ್ಯ

ಧಾರವಾಡ : ಪೊಲೀಸ್ ಇನ್ಸಪೆಕ್ಟರ್ ಮೋತಿಲಾಲ್ ಪವಾರ್ ವಿಚಾರಣೆ ನಡೆಸಿದ ಸಿಬಿಐ

ಧಾರವಾಡ prajakiran.com : ಧಾರವಾಡದ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಮತಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಶುಕ್ರವಾರ ಹಲವರನ್ನು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದರು.

ಅದರಲ್ಲೂ ವಿಶೇಷವಾಗಿ ಈ ಹಿಂದೆ ಧಾರವಾಡದ ಉಪನಗರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಆಗಿದ್ದ ಮೋತಿಲಾಲ್ ಪವಾರ್ ಅವರನ್ನು ಹಲವು ಗಂಟೆಗಳ ಕಾಲ ಸಿಬಿಐ ತೀವ್ರ ವಿಚಾರಣೆ ನಡೆಸಿದರು.

ಇವರು ಯೋಗೀಶ್ ಗೌಡರ ಕೊಲೆ ಪ್ರಕರಣದ ಕುರಿತು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಹೀಗಾಗಿ ಅವರನ್ನು ವಿಚಾರಣೆಗೊಳಿಸಿಪಡಿಸಿ ಅವರಿಂದಲೂ ಮಹತ್ತರ ಮಾಹಿತಿ ಸಂಗ್ರಹಿಸಿದರು ಎಂದು ಹೇಳಲಾಗುತ್ತಿದೆ.



ಅದೇ ರೀತಿಯಾಗಿ ಕೊಲೆಪ್ರಕರಣದ ಕುರಿತು ಯೋಗಿಶಗೌಡ ಸಹೋದರ ಗುರುನಾಥ ಗೌಡ ಹಾಗೂ ಪೊಲೀಸ್ ಅಧಿಕಾರಿಗಳಾದ ತುಳಜಪ್ಪ ಸುಲ್ಪೀ ಹಾಗೂ ಬಿ.ಪಿ. ಚಂದ್ರಶೇಖರಅವರ ಜೊತೆಗೆ ರಾಜೀ ಸಂಧಾನದಲ್ಲಿ ಮಧ್ಯಸ್ಥಿಕೆ ವಹಿಸಿದ್ದಆರೋಪ ಕೇಳಿಬಂದಿದ್ದ ಜೆಡಿಎಸ್ ಮುಖಂಡ ಗುರುರಾಜ ಹುಣಸಿಮರದಅವರ ಬಳಿಯುಮಾಹಿತಿ ಸಂಗ್ರಹಿಸಿದರು.

ಈ ರಾಜೀಸಂಧಾನದಲ್ಲಿ ಯಾರಾರು ಭಾಗವಹಿಸಿದ್ದರು.  ಪೊಲೀಸ್ ಅಧಿಕಾರಿಗಳ ಪಾತ್ರ ಕುರಿತು ಮಹತ್ತರ ಮಾಹಿತಿ ಕಲೆ ಹಾಕಿದರು ಎಂದು ಗೊತ್ತಾಗಿದೆ.

ಇದೇ ವೇಳೆ ನಿವೃತ್ತ ಡಿವೈಎಸ್‌ಪಿ ಮಗ ಕಿರಣ ವೀರನಗೌಡ ಅವರನ್ನು ಶುಕ್ರವಾರ ಕೂಡ ಹಲವು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದರು ಎಂದು ಹೇಳಲಾಗುತ್ತಿದೆ.



ಕಿರಣ ವೀರನಗೌಡರ ಈ ಹಿಂದಿನ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಸದ್ಯ ನಿವೃತ್ತರಾಗಿರುವ ಪಾಂಡುರಂಗ ರಾಣೆ, ಈ ಹಿಂದಿನ ಡಿಸಿಪಿ ಜಿನೇಂದ್ರ ಖಣಗಾವಿ  ಸೇರಿ ಹಲವು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೊತೆಗೆ ಒಡನಾಟ ಹೊಂದಿದ್ದ ಆರೋಪದ ಮೇಲೆಅವರ ವಿಚಾರಣೆ ಮುಂದುವರೆಸಲಾಗಿದೆ  ಎಂದು ತಿಳಿದುಬಂದಿದೆ.

 ಇದೇ ವೇಳೆ ಮಾಜಿ ಸಚಿವರೊಂದಿಗೆ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮುತ್ತಣ್ಣ ಬಳ್ಳಾರಿ,  ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರು ಜನ ಆರೋಪಿಗಳು ಸೇರಿದಂತೆ ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *