ಧಾರವಾಡ prajakiran.com :
ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾಕೇಶ್ ರಂಜನ್ ನೇತೃತ್ವದ ಸಿಬಿಐ ಅಧಿಕಾರಿಗಳ ತನಿಖೆ ಮತ್ತೆ ಮುಂದುವರೆದಿದೆ.
ನಿನ್ನೆ ಬುಧವಾರ ಕೂಡ ಕೊಲೆಯಾದ ಯೋಗೀಶಗೌಡ ಪತ್ನಿ ಮಲ್ಲಮ್ಮ, ಜಿಪಂ ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ ಹಾಗೂ ಹಲವರನ್ನು ಕರೆದು ವಿಚಾರಣೆಗೆ ಒಳಪಡಿಸಿದ್ದರು.
ಇಂದು ಮತ್ತೆ ಗುರುವಾರ ಸಿಬಿಐ ತನಿಖೆ ಮುಂದುವರೆದಿದ್ದು, ಇವತ್ತು ಕೂಡ ಕೊಲೆಯಾದ ಯೋಗೀಶಗೌಡ ಪತ್ನಿ ಮಲ್ಲಮ್ಮರನ್ನು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆಗೆ ಒಳಪಡಿಸಲಾಯಿತು.
ಈ ವೇಳೆ ಮಹತ್ವದ ಮಾಹಿತಿಯನ್ನು ಸಂಗ್ರಹಿಸಲಾಯಿತು ಎಂದು ತಿಳಿದುಬಂದಿದೆ.
ಇದಾದ ಬಳಿಕ ಧಾರವಾಡ ಉಪನಗರ ಠಾಣೆಗೆ ಕಾಂಗ್ರೆಸ್ ಮುಖಂಡ ನಾಗರಾಜ್ ಗೌರಿಯನ್ನು ಕೂಡ ಕರೆಸಿ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಲಾಯಿತು ಎಂದು ತಿಳಿದುಬಂದಿದೆ.
ಕೆಲಹೊತ್ತು ಇಬ್ಬರಿಂದ ಪ್ರತ್ಯೇಕವಾಗಿ ಹಾಗೂ ಆನಂತರ ಒಟ್ಟಿಗೆ ವಿಚಾರಣೆಗೆ ಒಳಪಡಿಸಿ
ಮಾಹಿತಿ ಪಡೆದರು ಎನ್ನಲಾಗಿದೆ.