ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಪೂರಕ ಆರೋಪ ಪಟ್ಟಿ ಸಲ್ಲಿಸಿದ ಸಿಬಿಐ

ಧಾರವಾಡ prajakiran.com :
ಧಾರವಾಡದ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದ ಸಿಬಿಐ ತನಿಖೆ ಒಂದು ಹಂತಕ್ಕೆ ಬಂದು ತಲುಪಿದೆ.

ಈ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿತರಾಗಿರುವ
ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಪೂರಕ ಆರೋಪ ಪಟ್ಟಿಯನ್ನು ಧಾರವಾಡ ಜಿಲ್ಲೆಯ ಸಿಬಿಐ ವಿಶೇಷ ನ್ಯಾಯಾಲಯದ ಎದುರು ಜ. 30 ರಂದು ಶನಿವಾರ  ಸಲ್ಲಿಕೆ ಮಾಡಿದ್ದಾರೆ.

ಪೂರಕ ಆರೋಪ ಪಟ್ಟಿ ಸಲ್ಲಿಸಿದ ಸಿಬಿಐ ಅಧಿಕಾರಿಗಳು
ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದು,
ಫೆ. 4ರಂದು ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಕೊನೆಗೊಳ್ಳಲಿದೆ.

ಅದೇ ದಿನ ನ್ಯಾಯಾಧೀಶರು ಈ ಕುರಿತು ವಿಚಾರಣೆ ನಡೆಸುತ್ತಾರೆಯೇ ಇಲ್ಲವೇ ಎಂಬುದನ್ನು ಕಾದು ನೋಡಬೇಕು.

2020ರ ನವೆಂಬರ್ 5ರಂದು ವಿನಯ ಕುಲಕರ್ಣಿ ಯನ್ನು ಸಿಬಿಐ ಅಧಿಕಾರಿಗಳ ತಂಡ ಅವರ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸಿ, ಆನಂತರ ಬಂಧಸಿತ್ತು.

ಬಂಧನದ 90 ದಿನದೊಳಗೆ ಆರೋಪಪಟ್ಟಿ ಸಲ್ಲಿಸಬೇಕಿರೋ ಹಿನ್ನೆಲೆಯಲ್ಲಿ ರಾಕೇಶ್ ರಂಜನ್ ನೇತೃತ್ವದ
ಸಿಬಿಐ ಅಧಿಕಾರಿಗಳ ತಂಡ ಪೂರಕ ಚಾರ್ಜ‌ಶೀಟ್ ಸಲ್ಲಿಸಿದೆ.

ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರೋ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಈ ಹಿಂದೆ ಧಾರವಾಡ ಜಿಲ್ಲೆಯ ಸಿಬಿಐ ವಿಶೇಷ ನ್ಯಾಯಾಲಯ ಹಾಗೂ ಹೈಕೋರ್ಟ್ ತಿರಸ್ಕರಿಸಿದ್ದರಿಂದ ಸುಪ್ರೀಂ ಕೋರ್ಟ್ ಮೆಟ್ಡಲು ಹತ್ತಲು ವಿನಯ ಕುಲಕರ್ಣಿ ಅವರ ವಕೀಲರು ಸಿದ್ದತೆ ನಡೆಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ ಹಾಗೂ ಎ ಎನ್ ಐ ಸೇರಿದಂತೆ ಅನೇಕ ರಾಷ್ಟ್ರೀಯ ಮಾಧ್ಯಮ ವರದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *