ಅಂತಾರಾಷ್ಟ್ರೀಯ

ಸಚಿವ ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ : ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು prajakiran.com : ರಾಜ್ಯದ ಬಿಜೆಪಿ ಸರಕಾರದಲ್ಲಿ ಪ್ರಭಾವಿ ಸಚಿವರಾಗಿರುವ ರಮೇಶ ಜಾರಕಿಹೊಳಿಯವರ ರಾಸಲೀಲೆ ಸಿಡಿ ಬಿಡುಗಡೆಗೊಂಡಿದೆ.

ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೋಳಿ ಯುವತಿಯ ಜೊತೆಗೆ ರಾಸಲೀಲೆಯಲ್ಲಿ ತೊಡಗಿರುವುದು ಸಿಡಿಯಲ್ಲಿದೆ.

ಯುವತಿಗೆ ಕೆಪಿಟಿಸಿಎಲ್ ನಲ್ಲಿ ಉದ್ಯೋಗ ಕೊಡಿಸುವುದಾಗಿ
ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ ಎಂದು ಅವರ ಪರವಾಗಿ ನಾಗರಿಕ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.

ದೂರಿನ ಜೊತೆಗೆ ಸಚಿವ ರಮೇಶ ಜಾರಕಿಹೊಳಿಯವರ ರಾಸಲೀಲೆ ಸಿಡಿ ನೀಡಲಾಗಿದೆ.

ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಸಚಿವರ ರಾಸ ಲೀಲೆಯ ಸಿಡಿ ಸಲ್ಲಿಕೆಯಾಗುತ್ತಿದ್ದಂತೆ ಸಚಿವರು ಮೈಸೂರಿನ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಈ ರಾಸಲೀಲೆ ಸಿಡಿ ರಾಜ್ಯದ ಬಿಜೆಪಿ ಸರಕಾರದ ಬುಡ ಅಲಗಾಡಿಸಿದೆ.
ಅತ್ಯಾಚಾರದ ಸಂತ್ರಸ್ತೆಯ ಕುಟುಂಬದ ಸದಸ್ಯರು ನನ್ನ ಭೇಟಿಯಾಗಿ ಅಳಲು ತೊಡಿಕೊಂಡಿದ್ದಾರೆ.

ಅಲ್ಲದೆ, ಅವರಿಗೆ ಬೆದರಿಕೆ ಹಾಕಲಾಗಿದೆ. ಹೀಗಾಗಿ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವಂತೆ ದಿನೇಶ್‌ ಕಲ್ಲಹಳ್ಳ ಅವರು ಪೊಲೀಸ್ ಆಯುಕ್ತರ ಮೊರೆ ಹೋಗಿದ್ದರು.

ಅವರು ಕಬ್ಬನ್ ಪಾರಗಕ್ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದಾರೆ ಎಂದು ಕಲ್ಲಹಳ್ಳಿ ತಿಳಿಸಿದ್ದಾರೆ.

ಪ್ರಭಾವಿ ಸಚಿವ ರಮೇಶ್ ಜಾರ್ಕಿಹೊಳಿ ರಾಸಲೀಲೆ ವಿಡಿಯೋ
ಬಿಜೆಪಿ ಸರಕಾರ ವನ್ನು ಇಕ್ಕಟ್ಟಿಗೆ ಸಿಲುಕಿಸಿದೆ‌. ಶಿಸ್ತಿನ ಪಕ್ಷದ ಅಶಿಸ್ತು ಪಕ್ಷ ಯಾವ ರೀತಿ ಪರಿಗಣಿಸುತ್ತದೆ ಎಂಬುದನ್ನು ಕಾದು ನೋಡಬೇಕು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *