ರಾಜ್ಯ

ಗಂಜಿಗಟ್ಟಿ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರಧನ

ಧಾರವಾಡ prajakiran.com : ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ ಹಿರೇಕೆರೆ ನೀರಿನ ಸೇಳವಿನಲ್ಲಿ ತೇಲಿ ಹೋಗಿದ್ದ ಬಾಲಕಿ ಮೃತಪಟ್ಟ ಹಿನ್ನಲೆಯಲ್ಲಿ ಶನಿವಾರ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ, ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಭೇಟಿ ನೀಡಿ ಕುಟುಂಬಸ್ಥರಿಗೆ ಸರಕಾರದ 5 ಲಕ್ಷ ರೂ. ಪರಿಹಾರಧನದ ಚೆಕ್ ನೀಡಿ, ಸಾಂತ್ವನ ಹೇಳಿದರು.

ಶಾಸಕ ಸಿ.ಎಂ ನಿಂಬ್ಬಣವರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಗಂಜಿಗಟ್ಟಿ ಕಲಘಟಗಿ ಮದ್ಯದ ಲೋಕೊಪಯೋಗಿ ರಸ್ತೆಯ ದುರಸ್ಥಿಕರಣಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಡಿವೈಎಸ್ಪಿ ರವಿ ನಾಯಕ್,ಸಿಪಿಐ ವಿಜಯ್ ಬಿರಾದಾರ, ಮುಖಂಡರಾದ ಬಸವರಾಜ ಕುಂದಗೊಳಮಠ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಮತ್ತು ಹನುಮಂತಪ್ಪ ಗಾಣಿಗೇರ ಕುಟುಂಬ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *