ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ
ಬೆಂಗಳೂರು Prajakiran.com : ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಅಂಕಗಳನ್ನು ಈ ವರ್ಷ ಪರಿಗಣಿಸದಿರಲು ನಿರ್ಧರಿಸಲಾಗಿದೆ.
ಇದರ ಬೆನ್ನಲ್ಲೇ ಸಿಇಟಿಗೆ ದಿನಾಂಕ ನಿಗದಿ ಮಾಡಿದ್ದು, ಆಗಸ್ಟ್ 28, 29ರಂದು ಪರೀಕ್ಷೆ ನಡೆಯಲಿದೆ.
ಈ ಬಗ್ಗೆ ಉಪಮುಖ್ಯಮಂತ್ರಿ ಉನ್ನತ ಶಿಕ್ಷಣ ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ ಅವರು ಮಾಹಿತಿ ನೀಡಿದ್ದು, ಈ ವರ್ಷಕ್ಕೆ ಅನ್ವಯವಾಗುವಂತೆ ಕೇವಲ ಸಿಇಟಿ ದರ್ಜೆಯ ಆಧಾರದಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶ ನಡೆಯಲಿದೆ.
ಪಿಯುಸಿ ಅಂಕ ಪರಿಗಣಿಸುವುದಿಲ್ಲ. ಹಾಗೆಯೇ ಈ ಸಂಬಂಧ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮಂಡಳಿಗಳಿಗೂ ಪತ್ರ ಬರೆಯಲಾಗುತ್ತದೆ ಎಂದರು.
ಸಿಇಟಿ ಪರೀಕ್ಷೆಯನ್ನು ಆಗಸ್ಟ್ 28, 29ರಂದು ನಡೆಸಲಾಗುತ್ತದೆ. ಮೊದಲ ದಿನ ಮ್ಯಾಥಮೇಟಿಕ್ಸ್ ಹಾಗೂ ಬಯೋಲಜಿ ಪರೀಕ್ಷೆ ನಡೆಯಲಿದೆ.
ಎರಡನೇ ದಿನ ಫಿಜಿಕ್ಸ್ ಮತ್ತು ಕೆಮಿಸ್ಟ್ರಿ ಪರೀಕ್ಷೆ ನಡೆಯಲಿದೆ. ಮೂರನೇ ದಿನ ಗಡಿನಾಡಿನ ಕನ್ನಡಿಗರಿಗೆ ಪ್ರತ್ಯೇಕವಾಗಿ ಕನ್ನಡ ಪರೀಕ್ಷೆ ನಡೆಯಲಿದೆ.
ಜೂನ್ 15ರಿಂದ ಸಿಇಟಿ ಪರೀಕ್ಷೆಗೆ ನೊಂದಣಿ ಆರಂಭವಾಗಲಿದೆ ಎಂದರು.