ಧಾರವಾಡ prajakiran.com : ಧಾರವಾಡದಲ್ಲಿ ಮತ್ತೆ ಸರಗಳ್ಳರ ಹಾವಳಿ ಮುಂದುವರೆದಿದೆ.
ಬೈಕ್ ನಲ್ಲಿ ಬಂದ ಕಳ್ಳರು ಮಹಿಳೆ ಕೊರಳಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಘಟನೆ ಧಾರವಾಡ ಸೈದಾಪುರ ಓಣಿ ಅಂಬಾ ಭವಾನಿ ದೇವಸ್ಥಾನದ ಬಳಿ ನಡೆದಿದೆ.
ಮದುವೆ ಮುಗಿಸಿಕೊಂಡು ಮನೆಗೆ ಬರುವಾಗ ಬೈಕ್ ನಲ್ಲಿ ಬಂದ ಯುವಕರು ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಮಾಹಿತಿ ಅರಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಎಸಿಪಿ ಅನುಷಾ, ಧಾರವಾಡ ಉಪನಗರ ಪೋಲಿಸ್ ಠಾಣೆ ಇನ್ಸಪೆಕ್ಟರ್ ರಮೇಶ ಹೂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ವಾರ ಒಂದೇ ದಿನ ಎರಡು ಕಡೆ ಹಾಡಹಗಲೇ ಸರಗಳ್ಳತನ ಮಾಡಿದ್ದ ಖದೀಮರು ಸೆರೆ ಸಿಗುವ ಮುನ್ನವೇ ಈ ಘಟನೆ ನಡೆದಿರುವುದು ಧಾರವಾಡ ಜನತೆ ಅದರಲ್ಲೂ ಒಂಟಿ ಮಹಿಳೆಯರನ್ನು ಬೆಚ್ಚಿ ಬೀಳಿಸಿದೆ.