ರಾಜ್ಯ

ಚೈತ್ರಾ ಕುಂದಾಪುರ ಬಂಧಿಸಿದ ಬೆಂಗಳೂರಿನ ಸಿಸಿಬಿ ಪೊಲೀಸರು

ಬೆಂಗಳೂರು ಪ್ರಜಾಕಿರಣ.ಕಾಮ್ : ಬೈಂದೂರು ಬಿಜೆಪಿ ಟಿಕೆಟ್​ ಕೊಡಿಸೋದಾಗಿ 5 ಕೋಟಿ ಪಡೆದು ಟಿಕೆಟ್ ಕೋಡಿಸದೆ ಹಣವೂ ಮರಳಿಸದೆ ವಂಚನೆ ಮಾಡಿರುವ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಳನ್ಬು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ರಾತ್ರಿ ಉಡುಪಿಯಲ್ಲಿ ಸಿಸಿಬಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದು, ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಮೂರು ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದಾರೆ.

ಪ್ರಕರಣದಲ್ಲಿ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಚೈತ್ರಾ ಸೇರಿ ನಾಲ್ವರ​ನ್ನು ಬಂಧಿಸಲಾಗಿದ್ದು, ಒಬ್ಬ ಹಾಲಸ್ವಾಮೀಜಿ ತಲೆ ಮೆರೆಸಿಕೊಂಡಿದ್ದಾರೆ.​

ಉದ್ಯಮಿ ಗೋವಿಂದ ಪೂಜಾರಿ ದೂರು ಆಧರಿಸಿ ಚೈತ್ರಾ ವಿರುದ್ದ IPC 420 (ವಂಚನೆ) ಅಡಿ ಪ್ರಕರಣ ದಾಖಲಾಗಿದೆ.

ಕೇಂದ್ರದ ನಾಯಕರು, ಸಂಘ ಪರಿವಾರದ ಪ್ರಮುಖರು ನನಗೆ ಚೆನ್ನಾಗಿ ಗೊತ್ತು ಎಂದು ನಂಬಿಸಿ ನಕಲಿ ಪಾತ್ರಗಳನ್ನು ಸೃಷ್ಟಿಸಿದ ಗಂಭೀರ ಸ್ವರೂಪದ ಆರೋಪಗಳನ್ನು ಹೊರಿಸಲಾಗಿದೆ.

ಬಂಧಿತರನ್ನು ಬಿಜೆಪಿ ಯುವ ಮುಖಂಡ
ಗಗನ್​ ಕಡೂರು, ಪ್ರಸಾದ್, ಧನರಾಜ್ ಎಂದು ಗುರುತಿಸಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *