ಬೆಂಗಳೂರು ಪ್ರಜಾಕಿರಣ.ಕಾಮ್ : ಬೈಂದೂರು ಬಿಜೆಪಿ ಟಿಕೆಟ್ ಕೊಡಿಸೋದಾಗಿ 5 ಕೋಟಿ ಪಡೆದು ಟಿಕೆಟ್ ಕೋಡಿಸದೆ ಹಣವೂ ಮರಳಿಸದೆ ವಂಚನೆ ಮಾಡಿರುವ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಳನ್ಬು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಉಡುಪಿಯಲ್ಲಿ ಸಿಸಿಬಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದು, ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಮೂರು ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದಾರೆ.
ಪ್ರಕರಣದಲ್ಲಿ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಚೈತ್ರಾ ಸೇರಿ ನಾಲ್ವರನ್ನು ಬಂಧಿಸಲಾಗಿದ್ದು, ಒಬ್ಬ ಹಾಲಸ್ವಾಮೀಜಿ ತಲೆ ಮೆರೆಸಿಕೊಂಡಿದ್ದಾರೆ.
ಉದ್ಯಮಿ ಗೋವಿಂದ ಪೂಜಾರಿ ದೂರು ಆಧರಿಸಿ ಚೈತ್ರಾ ವಿರುದ್ದ IPC 420 (ವಂಚನೆ) ಅಡಿ ಪ್ರಕರಣ ದಾಖಲಾಗಿದೆ.
ಕೇಂದ್ರದ ನಾಯಕರು, ಸಂಘ ಪರಿವಾರದ ಪ್ರಮುಖರು ನನಗೆ ಚೆನ್ನಾಗಿ ಗೊತ್ತು ಎಂದು ನಂಬಿಸಿ ನಕಲಿ ಪಾತ್ರಗಳನ್ನು ಸೃಷ್ಟಿಸಿದ ಗಂಭೀರ ಸ್ವರೂಪದ ಆರೋಪಗಳನ್ನು ಹೊರಿಸಲಾಗಿದೆ.
ಬಂಧಿತರನ್ನು ಬಿಜೆಪಿ ಯುವ ಮುಖಂಡ
ಗಗನ್ ಕಡೂರು, ಪ್ರಸಾದ್, ಧನರಾಜ್ ಎಂದು ಗುರುತಿಸಲಾಗಿದೆ.