ಬಿಳಿಗಿರಿ ಶ್ರೀನಿವಾಸ
ಚಾಮರಾಜನಗರ prajakiran.com : ಕರೊನಾ ಶಂಕೆ ಮೇರೆಗೆ ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿರುವ ಮಹಿಳೆಗೆ ಕರೊನಾ ತಗುಲಿರಲಿಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಸ್ಪಷ್ಟಪಡಿಸಿದರು.
ಅವರು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯ ಕರೊನಾ ವರದಿ ನೆಗೆಟಿವ್ ಬಂದಿದ್ದು, ತೀವ್ರ ಉಸಿರಾಟದ ತೊಂದರೆ ಹಿನ್ನೆಲೆ ಮಹಿಳೆ ಮೃತಪಟ್ಟಿದ್ದಾಳೆ.
ಈ ಕುರಿತು ಯಾವುದೇ ಗೊಂದಲ, ಆತಂಕ ಪಡುವ ಅಗತ್ಯವಿಲ್ಲ. ಕರೊನಾಗೂ ಈ ಸಾವಿಗೂ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದರು.
ಚಾಮರಾಜನಗರ ಜಿಲ್ಲೆಯ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೊಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರದ ಆದೇಶದಂತೆ ಸೂಚಿಸಲಾಗಿದೆ.
ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಸೊಂಕು ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಚಾಮರಾಜನಗರ ಜಿಲ್ಲೆಯ ಜನತೆ ಕೊರಾನಾ ಬಗ್ಗೆ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ, ಎಂದರು.
ಈಗಾಗಲೇ ಚಾಮರಾಜನಗರ ಜಿಲ್ಲೆಯಲ್ಲಿ ಕೊರಾನಾ ವೈರಸ್ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ವಹಿಸಿದ್ದು, ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ಗಳಲ್ಲಿ ಆರೋಗ್ಯ ಇಲಾಖೆ ಉತ್ತಮ ಚಿಕಿತ್ಸೆ ನೀಡಲು ಬದ್ದವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿ ಹೇಳಿದರು.