ಚಿಕ್ಕಮಗಳೂರು prajakiran.com : ಚಾರ್ಮಾಡಿ ಘಾಟ್ ನಲ್ಲಿ ಮತ್ತೇ ಶುಕ್ರವಾರವೂ ಗುಡ್ಡ ಕುಸಿದಿದೆ.
ಮೂಡಗೇರಿ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಿನ್ನೇ ಕೂಡ ಗುಡ್ಡ ಕುಸಿದಿತ್ತು. ಬೃಹತ್ ಗಾತ್ರದ ಮರಗಳು, ಬಂಡೆಗಳು, ಮಣ್ಣು ರಸ್ತೆ ಮೇಲೆ ಬಿದ್ದಿವೆ.
ಇದರಿಂದಾಗಿ ಮುಂಜಾಗ್ರತ ಕ್ರಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಕೊಟ್ಟಿಗೆ ಹಾರ ಚೆಕ್ ಪೋಸ್ಟ್ ಹಾಗೂ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಸ್ಥಗಿತಗೊಳಿಸಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಮುನ್ನಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಕೋರಿದೆ.
ಇದಲ್ಲದೆ, ಘಾಟ್ ನಅಲೆ ಖಾನ್ ರಸ್ತೆಯಲ್ಲಿ ಎರಡು ಕಡೆ ಬಿರುಕು ಕಾಣಿಸಿಕೊಂಡಿದೆ. ಭಾರೀ ಮಳೆ ಹಿನ್ನಲೆಯಲ್ಲಿ ರಸ್ತೆ ಬಿರುಕು ಬಿಟ್ಟಿದೆ ಎನ್ನಲಾಗಿದೆ.