*ಧಾರವಾಡದ ಮನಸೂರಿನಲ್ಲಿ ಜಾನುವಾರು ಕೊಂದ ಚಿರತೆ*
ಧಾರವಾಡ ಪ್ರಜಾಕಿರಣ.ಕಾಮ್
ಧಾರವಾಡ ತಾಲೂಕಿನ ಮನಸೂರ ಗ್ರಾಮದಲ್ಲಿ ಮತ್ತೇ ಚಿರತೆ ಪ್ರತ್ಯಕ್ಷವಾದ ಘಟನೆ ಕಳೆದ ರಾತ್ರಿ ನಡೆದಿದೆ.
ಆಕಳ ಕರು ಮೇಲೆ ದಾಳಿ ಮಾಡಿರುವ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿರುವುದು ಮನಸೂರು, ಮನಗುಂಡಿ, ಬೆಳ್ಳಿಗಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆತಂಕ ಮೂಡಿಸಿದೆ.
ಧಾರವಾಡ ತಾಲೂಕಿನ ಮನಸೂರ ಗ್ರಾಮದ ಬಳಿ ಕಾಣಿಸಿಕೊಂಡ ಚಿರತೆ ಗ್ರಾಮದ ಕರೆಮ್ಮ ದೇವಸ್ಥಾನದ ಬಳಿ ಕಟ್ಟಿದ್ದ ಆಕಳ ಕರುವಿನ ಮೇಲೆ ದಾಳಿ ಮಾಡಿದೆ.
ಚಿರತೆ ದಾಳಿಯಿಂದ ಆಕಳ ಕರು ಸಾವನ್ನಪ್ಪಿದೆ.
ಕುಬೇರಪ್ಪ ಮಡಿವಾಳರ ಎಂಬ ರೈತನಿಗೆ ಸೇರಿರುವ ಆಕಳ ಕರು ಇದಾಗಿದೆ.
ಮಾಹಿತಿ ಸಿಕ್ಕ ತಕ್ಷಣ ದೇವಸ್ಥಾನದ ಬಳಿ ಜಮಾಯಿಸಿದ ಗ್ರಾಮಸ್ಥರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ
ಕಳೆದ ಮೂರು ದಿನಗಳ ಹಿಂದೆಯಷ್ಟೇ ಇದೇ ಚಿರತೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಹಿಂದೆ ಕಾಣಿಸಿಕೊಂಡಿತ್ತು.
ಇದೀಗ ಮತ್ತೇ ಧಾರವಾಡ ಹೊರವಲಯದಲ್ಲಿ ಕಾಣಿಸಿಕೊಂಡಿರುವುದು ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಜನರ ಜೀವ ರಕ್ಷಣೆ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.