ಧಾರವಾಡ prajakiran. com : ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ ಬ್ಯಾಲ್ಯಾಳ ಗ್ರಾಮದ ಮಾರೋಡಿ ಹಳ್ಳದಲ್ಲಿ ಚಿರತೆ ಕಾಣಿಸಿಗೊಂಡಿದೆ ಎಂದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಇಂದು ಬೆಳಗ್ಗೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಗುರುಮಾತೆ ಶಾರದ ವಂದಾಲ ಅವರು
ಧಾರವಾಡದಿಂದ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮಕ್ಕೆ ಬರುವಾಗ ಬಸ್ ನಲ್ಲಿರುವಾಗ ಹೊಲದಲ್ಲಿ ಹೋಗಿದ್ದನ್ನು ನೋಡಿದ್ದಾರೆ.
ಆ ವಿಷಯವನ್ನು ಗ್ರಾಮದ ಪ್ರಮುಖರಿಗೆ ತಿಳಿಸಿದ್ದಾರೆ. ಬ್ಯಾಲ್ಯಾಳ, ಹನಸಿ, ಶಿರಕೋಳ, ಗುಮ್ಮಗೋಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರು ಆತಂಕದಲ್ಲಿದ್ದು,
ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸುವ ಮೂಲಕ ನೆಮ್ಮದಿ ವಾತವರಣ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.