ಅಪರಾಧ

ಪೋಷಕರು ಬುದ್ದಿ ಮಾತು ಹೇಳಿದ್ದಕ್ಕೆ ನೋಂದ ಬಾಲಕ ಆತ್ಮಹತ್ಯೆ

 ಧಾರವಾಡ prajakiran.com : ಪೋಷಕರು ಮಗನಿಗೆ ಬೈದು ಬುದ್ದಿ ಮಾತು ಹೇಳಿದ್ದಕ್ಕೆ ನೋಂದ ಬಾಲಕನೊಬ್ಬ ಶಾಲೆಯ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಮುಗದ ಗ್ರಾಮದಲ್ಲಿಯೇ ಮಂಗಳವಾರ ಬೆಳಗಿನ ಜಾವ ಈ ರ್ದುಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಗ್ರಾಮದ ಮಹೇಶ ಬಸವರಾಜ ಗಡೆಪ್ಪನವರ (೧೬) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ.

ಈತ ಕಳೆದ ಕೆಲವು ದಿನಗಳಿಂದ ಹೊಟ್ಟೆನೋವಿನೀಂದ ಬಳಲುತ್ತಿದ್ದ. ಹೀಗಾಗಿ ಈತ, ನೋವು ತಾಳಲಾರದೇ, ಇಂದು ಬೆಳಗ್ಗೆ ಗ್ರಾಮದ ಹೈಸ್ಕೂಲ್ ಆವರಣದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ತಿಳಿಸಿದ್ದಾರೆ.

 ಘಟನಾ ಸ್ಥಳಕ್ಕೆ ಪಿಎಸ್‌ಐ ಸುಮಾ ನಾಯಕ ಭೇಟಿ ನೀಡಿದ್ದು, ಈ ಕುರಿತು ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *