ಅಂತಾರಾಷ್ಟ್ರೀಯ

ನೀರಿನ ಕರ ಬಾಕಿ ಮನ್ನಾಗೆ ಆಗ್ರಹಿಸಿ ಮಾ. 2ರಂದು ಶಾಸಕ ಅರವಿಂದ ಬೆಲ್ಲದ ಹುಬ್ಬಳ್ಳಿ ಮನೆಗೆ ಮುತ್ತಿಗೆ

ಧಾರವಾಡ prajakiran.com : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನೀರಿನ ಕರ ಬಾಕಿ ಮನ್ನಾಕ್ಕೆ ಆಗ್ರಹಿಸಿ ಮಾ. 2ರಂದು ಶಾಸಕ ಅರವಿಂದ ಬೆಲ್ಲದ ಅವರ ಹುಬ್ಬಳ್ಳಿ ಮನೆಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ತಿಳಿಸಿದ್ದಾರೆ.

ಅವರು ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಫೆ. ,28ರಂದು ಶಾಸಕ ಬೆಲ್ಲದ ಅವರ ಧಾರವಾಡದ ನಿವಾಸಕ್ಕೆ ಮುತ್ತಿಗೆ ಹಾಕಲಾಗಿತ್ತು.

ಅವರ ಮನೆಯಲ್ಲಿ ಯಾರ ಇರದ ಕಾರಣ ಅವರ ಮನೆ ಗೋಡೆಗೆ ಮನವಿ ಪತ್ರ ಅಂಟಿಸಲಾಗಿದೆ.

ಹೀಗಾಗಿ ಮಾ. 2ರಂದು ಅವರು ಹುಬ್ಬಳ್ಳಿ ನಿವಾಸದಲ್ಲಿ ಲಭ್ಯವಿರಲಿ ಎಂದು ಮಾಧ್ಯಮದ ಮೂಲಕ ಮನವಿ ಮಾಡಿದರು.

ಮುಂದುವರೆದ ಭಾಗವಾಗಿ
ಮಾ. 5ರಂದು ಬೆಂಗಳೂರಿನಲ್ಲಿ ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮನೆಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಹೇಳಿದರು.

ಅಧಿವೇಶನದಲ್ಲಿ ಈ ಕುರಿತು ನಿರ್ಣಯ ಹೊರಬರದಿದ್ದರೆ ಮುಂಬರುವ ದಿನಗಳಲ್ಲಿ ಮಹಾನಗರ ಪಾಲಿಕೆ ಎದುರು ಉಗ್ರ ಹೋರಾಟ ಆರಂಭಿಸಬೇಕಾಗುತ್ತದೆ ಎಂದು ದೀಪಕ ಚಿಂಚೋರೆ ಅವರು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಶರಣಪ್ಪ ಕೊಟಗಿ, ರಫೀಕ ದರಗಾದ, ಬಸವರಾಜ ಕಿತ್ತೂರ, ಬಸವರಾಜ ಮಲಕಾರಿ, ಸತೀಶ ತುರಮುರಿ,
ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಎಸ್ಟಿ ಘಟಕ ಪ್ರಧಾನ ಕಾರ್ಯದರ್ಶಿ ಅಶೋಕ ಬಿ.ಎಚ್., ಆನಂದ ಸಿಂಗನಾಥ, ಶಿವು ಚನ್ನಗೌಡರ, ಮುತ್ತು ಕೊಟೂರ ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *