ಆಧ್ಯಾತ್ಮ

ತೋಟದ ಮನೆಗೆ ನುಗ್ಗಿದ ಚಿರತೆ… 3 ಮೇಕೆ, 1 ಕುರಿ ಬಲಿ…

ಬೆಂಗಳೂರು prajakiran.com : ತೋಟದ ಮನೆಗೆ ನುಗ್ಗಿದ ಚಿರತೆಯೊಂದು ಮೂರು ಮೇಕೆಗಳು ಮತ್ತು ಒಂದು ಕುರಿಯನ್ನು ಬಲಿ ಪಡೆದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸೊಣ್ಣೆನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಸೊಣ್ಣೆನಹಳ್ಳಿ ಉಮೇಶ್ ರ ತೋಟದ ಮನೆಗೆ ನುಗ್ಗಿರುವ ಚಿರತೆ 3 ಮೇಕೆ ಹಾಗೂ 1 ಕುರಿಯನ್ನು ಕಚ್ಚಿ ಕೊಂದು ಹಾಕಿದೆ.

ಅಲ್ಲದೆ ಮತ್ತೊಂದು ಕುರಿಯ ಮೇಲೆ ದಾಳಿ ಮಾಡಿದ್ದು ಅದು ಸಹ ತೀವ್ರವಾಗಿ ಗಾಯಗೊಂಡಿದೆ.

ಇದರಿಂದಾಗಿ ಸುಮಾರು 30 ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಎಂದಿನಂತೆ ಸಂಜೆ ರೈತ ಉಮೇಶ್ ಹಸುವಿನ ಹಾಲು ಕರೆದು ಮನೆಗೆ ಕೊಂಡೊಯ್ದಿದ್ದ ವೇಳೆ, ತೋಟದ ಮನೆಗೆ ಚಿರತೆ ನುಗ್ಲಿದೆ.

ಮೇಕೆ ಹಾಗೂ ಕುರಿಯ ಮೇಲೆ ದಾಳಿ ನಡೆಸಿದ ಚಿರತೆ ಅವುಗಳ ರಕ್ತ ಹೀರಿದೆ.

ಮಾಕಳಿ ಬೆಟ್ಟದ ತಪ್ಪಲಿನ ಸುತ್ತ ಮುತ್ತಲ ಗ್ರಾಮಗಳಲ್ಲಿ ಆಗಿಂದಾಗ್ಗೆ ಚಿರತೆ ಪ್ರತ್ಯಕ್ಷವಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮಾಕಳಿ ಬೆಟ್ಟದ ತಪ್ಪಲಿನ ಗ್ರಾಮಸ್ಥರಿಗೆ ಕಳೆದ ಕೆಲ ದಿನಗಳಿಂದ ಮತ್ತೆ ಚಿರತೆ ಆತಂಕ ಆರಂಭವಾಗಿದ್ದು, ಈ ವಿಚಾರವನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮಕೈಗೊಳ್ಳದಿರುವುದು ಈ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *