ನವದೆಹಲಿ prajakiran.com : ಕಳೆದ ಹಲವು ದಿನಗಳಿಂದ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಭೂಗತ ಪಾತಕಿ ಚೋಟಾ ರಾಜನ್ ಸ್ಥಿತಿ ಗಂಭೀರವಾಗಿದೆ.
ಶುಕ್ರವಾರ ಆತ ನಿಧನ ಹೊಂದಿದ್ದಾನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ.
ತಿಹಾರ್ ಜೈಲ್ ನಲ್ಲಿದ್ದಾಗ ಚೋಟಾ ರಾಜನ್ ಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.
ಈ ಹಿನ್ನೆಲೆಯಲ್ಲಿ ಆತನನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಏ.26ರಂದು ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇನ್ನು ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತ ಸಾವನ್ನಪ್ಪಿಲ್ಲ ಇದು ಶುದ್ದ ಸುಳ್ಳು ವರದಿ ಎಂದು ನವದೆಹಲಿಯ ಏಮ್ಸ್ ಆಸ್ಪತ್ರೆ ವೈದ್ಯರು ದೃಢಪಡಿಸಿದ್ದಾರೆ.
ಈತನನ್ನು 2015ರಲ್ಲಿ ಇಂಡೋನೇಷ್ಯಾದಲ್ಲಿ ಭಾರತದ ಅಧಿಕಾರಿಗಳು ಬಂಧಿಸಿ ಕರೆ ತಂದಿದ್ದರು.
ಭಯೋತ್ಪಾದನೆ ತಡೆ ಕಾಯ್ದೆ ಹಾಗೂ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ, ಕೊಲೆ ಬೆದರಿಕೆ, ಹಪ್ತಾ ವಸೂಲಿ ಸೇರಿದಂತೆ ಹಲವು ಗಂಭೀರವಾದ ಆರೋಪ ಎಸಗಿದ ಕುರಿತು ಮಂಗಳೂರು, ಬೆಂಗಳೂರು, ಮುಂಬೈ, ದೆಹಲಿ ಸೇರಿ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು.