ಜಿಲ್ಲೆ

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಲಿಂಗಪ್ಪ ಚಿಕ್ಕಣ್ಣವರ ಇನ್ನಿಲ್ಲ

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕ ಗಳಗಿ ಹುಲಕೊಪ್ಪ ಗ್ರಾಮದ ಪ್ರಗತಿಪರ ರೈತ ಹಾಗೂ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಲಿಂಗಪ್ಪ ಚಿಕ್ಕಣ್ಣವರ
ಅವರು ಸೋಮವಾರ ಬೆಳಗ್ಗೆ ನಿಧನ‌ ಹೊಂದಿದರು.

ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು.

ಅವರು 2005 ರಿಂದ 2010 ರ ಜಿಲ್ಲಾ ಪಂಚಾಯಿತಿ ಅವಧಿಯಲ್ಲಿ ಗಳಗಿ ಹುಲಕೊಪ್ಪ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ
ಜಿ.ಪಂ.ಸದಸ್ಯರಾಗಿ ಆಯ್ಕೆಯಾಗಿ ನಂತರ ಉಪಾಧ್ಯಕ್ಷರಾಗಿದ್ದರು .

ನಂತರ 2018 ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ತೊರೆದು
ಬಿಜೆಪಿ ಸೇರ್ಪಡೆಯಾಗಿದ್ದರು .

ಅವರ ನಿಧನಕ್ಕೆ ಧಾರವಾಡ ಜಿಲ್ಲೆಯ ಅನೇಕ ರಾಜಕೀಯ ಮುಖಂಡರು ಕಂಬನಿ ಮಿಡಿದಿದ್ದಾರೆ

ಇಂದು ಸಾಯಂಕಾಲ ಅವರ ಸ್ವಗ್ರಾಮ ಗಳಗಿಹುಲಕೊಪ್ಪ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ,ಎಂದು ಕುಟುಂಬದವರು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *