ನವದೆಹಲಿ prajakiran.com : ಕೊರೋನಾ ವಿರುದ್ಧ ಹೋರಾಡಲು ಪ್ರತಿಯೊಬ್ಬರ ಸಹಕಾರವೂ ಮುಖ್ಯ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಶಾಸಕರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಪುಟದ ಸಹೋದ್ಯೋಗಿಗಳು, ಹಾಗೂ ಪಂಚಾಯತ್ ಪ್ರತಿನಿಧಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿಯೂ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ.
ಕೊರೋನಾ ಪ್ರಕರಣಗಳ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಅವರು ಸೂಚಿಸಿದ್ದಾರೆ.
ನಾವೆಲ್ಲರೂ ಕೊರೋನಾ ವಿರುದ್ಧ ಒಟ್ಟಾಗಿ ಹೋರಾಡಿದರೆ ಮಾತ್ರ ಅದನ್ನು ಗೆಲ್ಲಲು ಸಾಧ್ಯ.
ಕೊರೋನಾ ಹೆಚ್ಚಳವನ್ನು ನಿಯಂತ್ರಿಸಲು ನಾಗರಿಕರು ಸೋಂಕನ್ನು ತಡೆಗಟ್ಟುವಲ್ಲಿ ತಮ್ಮ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಗೆಹ್ಲೋಟ್ ಹೇಳಿದರು.