ಬೆಂಗಳೂರು prajakiran.com : ರಾಜ್ಯದ ನೂತನ ಮುಖ್ಯಮಂತ್ರಿ ಯಾಗಿ ನಾಳೆ ಬೆಳಗ್ಗೆ 11 ಗಂಟೆಗೆ ನಾನೊಬ್ಬನೇ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ರಾಜ್ಯಪಾಲರಾದ ತಾವರ್ ಚಂದ್ ಗ್ಲೆಹೋಟ್ ಅವರನ್ನು ಭೇಟಿಯಾಗಿ ಹಕ್ಕು ಮಂಡಿಸಿ ಸಮಯ ನಿಗದಿಪಡಿಸಿಕೊಂಡ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಸದ್ಯಕ್ಕೆ ಸಚಿವ ಸಂಪುಟದ ವಿಸ್ತರಣೆ ಇಲ್ಲ. ಆ ಬಳಿಕ ಪಕ್ಷದ ವರಿಷ್ಡರ ಜೊತೆಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಯಡಿಯೂರಪ್ಪ ಮಾರ್ಗದರ್ಶನ ದೊಂದಿಗೆ ರಾಜ್ಯವನ್ನು ಮುನ್ನಡೆಸಲಾಗುವುದು ಎಂದು ಹೇಳಿದರು.
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.