ಬೆಳಗಾವಿ prajakiran.com : ಬೆಳಗಾವಿಯ ಪೀರನವಾಡಿ ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಿ, ಶಾಂತ ರೀತಿಯಲ್ಲಿ ಸಮಸ್ಯೆ ಬಗೆಹರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠಗೆ ಕರೆ ಮಾಡಿ ಸೂಚನೆ ನೀಡಿದ್ದಾರೆ.
ಸಂಗೋಳ್ಳಿ ರಾಯಣ್ಣ ಪ್ರತಿಮೆ ತೆರವು ಮಾಡಿದ ಸ್ಥಳದಲ್ಲಿಯೇ ಪ್ರತಿಮೆ ಸ್ಥಾಪಿಸುವ ಭರವಸೆ ನೀಡಿದ್ದರು. ಇದರಿಂದಾಗಿ ಪೀರನವಾಡಿಯಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು ಮತ್ತೆ ಗಲಾಟೆಗೆ ತಿರುಗಿದೆ.
ಎರಡು ಗುಂಪಿನ ನಡುವೆ ಗಲಾಟೆ ನಡೆದಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಪೀರನವಾಡಿಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿ ನಿಯಂತ್ರಣಕ್ಕೆ ತಂದರು. ಇದರಿಂದಾಗಿ ಕೆಲ ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.
ಸದ್ಯ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಅಲ್ಲದೆ, ಬೆಂಗಳೂರಿನಿಂದ ಬೆಳಗಾವಿಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನ ಕಳುಹಿಸಲಾಗಿದೆ. ಎರಡು ಸಮುದಾಯದ ಮುಖಂಡರನ್ನ ಕರೆಸಿ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು.
ಇಬ್ಬರು ದೇಶಭಕ್ತರು ಅವರ ಗೌರವ ಕಾಪಾಡುವುದು ಮುಖ್ಯ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಅಲ್ಲಿ ಮೂವತ್ತು ವರ್ಷಗಳಿಂದ ಶಿವಾಜಿ ಸರ್ಕಲ್ ಇದೆ. ಬಹಳ ದಿನದಿಂದ ಇರುವುದರಿಂದ ಅದು ತೆರವುಗೊಳಿಸಬಾರದು ಎಂದು ಅವರು ಪಟ್ಟುಹಿಡಿದಿದ್ದಾರೆ.
ಸಂಗೋಳ್ಳಿ ರಾಯಣ್ಣನ ಪ್ರತಿಮೆ ಕೂಡಿಸಲು ಯಾರದು ಅಡ್ಡಿಯಿಲ್ಲ. ಬಹುಶಃ ಎರಡುಮೂರು ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಆ. 15ರಿಂದ ಗಲಾಟೆ ನಡೆಯುತ್ತಿದೆ. ಜಿಲ್ಲಾಧಿಕಾರಿಗಳು ಕೂಡ ಘಟನಾ ಸ್ಥಳಕ್ಕೆ ಆಗಮಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಇಷ್ಟೆಲ್ಲಾ ಆದರೂ ವೋಟ್ ಬ್ಯಾಂಕ್ ಗಾಗಿ ಸೈಲೆಂಟ್ ಆದರಾ ಬೆಳಗಾವಿ ದಕ್ಷಿಣ ಶಾಸಕಅಭಯ ಪಾಟೀಲ ಎಂಬ ಪ್ರಶ್ನೆ ಮೂಡಿಸಿದೆ.
ಅವರ ನಡೆಗೆ ಕನ್ನಡಿಗರ ಆಕ್ರೋಶ ವ್ಯಕ್ತವಾಗಿದೆ. ಬೆಳಗಾವಿಯ ಪೀರನವಾಡಿಯಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಎಸ್ಪಿ ಡಿಸಿ ಜೊತೆ ಮಾತನಾಡ್ತಿನಿ. ರಾಯಣ್ಣ ಪ್ರತಿಮೆ ಈಗಾಗಲೇ ಸ್ಥಾಪಿಸಲಾಗಿದೆ.
ಕನ್ನಡಿಗರ ಮೇಲೆ ಕಲ್ಲು ತೂರಾಟ ನಡೆಸಿದ್ದು ನನಗೆ ಗೊತ್ತಿಲ್ಲ. ಸಣ್ಣಪುಟ್ಟ ಗಲಾಟೆ ನಡೆದಿದೆ ಎಂದು ಜಿಲ್ಲಾಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.